Munirathna: ಮುನಿರತ್ನ ಅತ್ಯಾಚಾರ ಯತ್ನ, ಏಡ್ಸ್ ಹರಡುವುದಾಗಿ ಟ್ರ್ಯಾಪ್ ಮಾಡಿದ್ದು ನಿಜ: SIT ಚಾರ್ಜ್ ಶೀಟ್
ಬೆಂಗಳೂರು,ಡಿಸೆಂಬರ್ 28: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕೇಳಿಬಂದಿರುವ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಕೇಳಿ ಬಂದಿದ್ದು, ಈ ಆರೋಪ ತನಿಖೆಯಲ್ಲಿ ರಜುವಾತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ವಿಶೇಷ ತನಿಖಾ ತಂಡ (SIT) ಆರೋಪ ಪಟ್ಟಿ ಸಲ್ಲಿಸಿದೆ.
ಬಿಜೆಪಿ ಶಾಸಕ ಹೆಚ್ಐವಿ ಪೀಡಿತರ ಬಳಸಿ ವಿರೋಧಿಗಳಿಗೆ ಏಡ್ಸ್ ಹರಡಲು ಯತ್ನಿಸಿದ್ದು ನಿಜ. ನಿರಂತರ ಅತ್ಯಾಚಾರ, ಅಪಾಯಕಾರಿ ರೋಗ ಹರಡುವಿಕೆ ಸೆಕ್ಷನ್ ಅಡಿ ಕೇಸ್ ದಾಖಲಿಸಿರುವಂತ ಎಸ್ಐಟಿ, ಜನಪ್ರತಿನಿಧಿಗಳ ನ್ಯಾಯಾಲಕ್ಕೆ ಚಾರ್ಜ್ ಶೀಟ್ ಕೂಡ ಸಲ್ಲಿಸಿದೆ. ಹೀಗಾಗಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ. ಈ ಸಂಬಂಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿರುವಂತ ಎಸ್ಐಟಿ ಅಧಿಕಾರಿಗಳು, ಅದರಲ್ಲಿ ಐಪಿಸಿ 270ರ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಬಗ್ಗೆ ಉಲ್ಲೇಖಿಸಿದ್ದಾರೆ.

ತಮ್ಮ ವಿರೋಧಿಗಳನ್ನು ಹೆಚ್ಐವಿ-ಏಡ್ಸ್ ಪೀಡಿತರ ಮೂಲಕ ಹನಿಟ್ರ್ಯಾಪ್ ಬಲಗೆ ಬೀಳಿಸಿ ಏಡ್ಸ್ ಹರಡುವಿಕೆಗೆ ಶಾಸಕ ಮುನಿರತ್ನ ದುಷ್ಕೃತ್ಯ ಎಸಗಿದ್ದರು ಎಂದು ಎಸ್ಐಟಿ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿದೆ. ಶಾಸಕ ಮುನಿರತ್ನ ಕೃತ್ಯಕ್ಕೆ ನೆರವು ನೀಡಿದ ಆರೋಪದ ಹೊತ್ತಿದ್ದ ಪ್ರಕರಣದ ಎ3 ಸುಧಾಕರ್, ಎ7 ಪಿ.ಶ್ರೀನಿವಾಸ್ ಮತ್ತು ಎ8 ಇನ್ಸ್ಪೆಕ್ಟರ್ ಐಯ್ಯಣ್ಣ ರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ತನಿಖೆಯಲ್ಲಿ ಸಾಬೀತಾಗಿದೆ.
ಇನ್ನೂ ಐಪಿಸಿ 354ಎ ಲೈಂಕಿಕ ಕಿರುಕುಳ, 354ಸಿ ಅನುಮತಿ ಇಲ್ಲದೇ ಮಹಿಳೆಯ ಅಶ್ಲೀಲ ದೃಶ್ಯಾವಳಿ ಚಿತ್ರೀಕರಣ, 376(2) ಎನ್ ನಿರಂತರ ಅತ್ಯಾಚಾರ, 308 ಸಂತ್ರಸ್ತೆಯ ಕೊಲ್ಲುವ ಉದ್ದೇಶ, 120ಬಿ ಅಪರಾಧಿಕ ಸಂಚು, 504 ಉದ್ದೇಶ ಪೂರ್ವಕ ಅವಮಾನ, 506 ಜೀವ ಬೆದರಿಕೆ, 270 ಅಪಾಯಕಾರಿ ರೋಗ ಹರಡುವಿಕೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಸೇರಿದಂತೆ ಇತರೆ ಕಾಯ್ದೆಗಳ ಅಡಿಯಲ್ಲಿ ಆರೋಪ ಪಟ್ಟಿಯನ್ನು ಸಲ್ಲಿಸಿದೆ.
ಸೆಪ್ಟೆಂಬರ್ 18ರಂದು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತೆಯೊಬ್ಬರು ಒಟ್ಟು ಏಳು ಜನರ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆಗೆ ಸರ್ಕಾರ ಎಸ್ಐಟಿ ರಚಿಸಿತ್ತು. ಈ ಬಗ್ಗೆ ತನಿಖೆ ನಡೆಸಿದ ಎಸ್ಐಟಿ, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಹಾಗೂ ಅವರ ಸಹಚರರ ಮೇಲೆ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಆರೋಪ ಪಟ್ಟಿ ಸಲ್ಲಿಸಿದೆ. . ಇದರ ಬೆನ್ನಲ್ಲೇ ರಾಮನಗರ ಪೊಲೀಸರು ಮುನಿರತ್ನ ಅವರನ್ನು ಕೋಲಾರದ ಬಳಿ ಬಂಧಿಸಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿತ್ತು.
ಇನ್ನೂ ಈ ಪ್ರಕರಣ ಸಂಬಂಧ ಎಸ್ಐಟಿ 146 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿತ್ತು. ಇದರಲ್ಲಿ ನ್ಯಾಯಾಧೀಶರ ಮುಂದೆ ಸಿಆರ್ಪಿಸಿ 164ರಡಿ 8 ಜನರ ಸಾಕ್ಷಿದಾರರು ಹೇಳಿಕೆ ನೀಡಿದ್ದಾರೆ. 850 ದಾಖಲೆ ಒಳಗೊಂಡ 2,481 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಎಸ್ಐಟಿ ಸಲ್ಲಿಕೆ ಮಾಡಿದೆ ಎಂದು ತಿಳಿದು ಬಂದಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications