ಬೆಂ-ಮೈಸೂರು 6 ಪಥದ ರಸ್ತೆ ಕಾಮಗಾರಿ ನವೆಂಬರ್ನಲ್ಲಿ ಆರಂಭ
ಬೆಂಗಳೂರು, ಸೆಪ್ಟೆಂಬರ್ 03 : ಬಹುನಿರೀಕ್ಷಿತ ಬೆಂಗಳೂರು-ಮೈಸೂರು ನಡುವಿನ 6 ಪಥದ ರಸ್ತೆ ನಿರ್ಮಾಣ ಕಾಮಗಾರಿ ನವೆಂಬರ್ನಲ್ಲಿ ಆರಂಭವಾಗಲಿದೆ. ಸುಮಾರು 3,750 ಕೋಟಿ ರೂ.ಗಳ ಯೋಜನೆ ಇದಾಗಿದೆ.
ಶುಕ್ರವಾರ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಈ ಕುರಿತು ವಿವರ ನೀಡಿದ್ದಾರೆ. 'ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಗೆ ಟೆಂಡರ್ ಕರೆಯಲು ಕೇಂದ್ರ ಸರ್ಕಾರಕ್ಕೆ ಕೋರಿದ್ದು, ಈ ಪ್ರಕ್ರಿಯೆ ಶೀಘ್ರದಲ್ಲಿಯೇ ನಡೆಯಲಿದೆ' ಎಂದು ಸಚಿವರು ಹೇಳಿದರು.[ಬೆಂಗಳೂರು-ಮೈಸೂರು ನಡುವೆ 6 ಪಥದ ರಸ್ತೆ]

ಸದ್ಯ, ಸಿದ್ಧಪಡಿಸಿರುವ ಯೋಜನೆಯಂತೆ ಬೆಂಗಳೂರಿನ ಜ್ಞಾನಭಾರತಿ ಜಂಕ್ಷನ್ನಿಂದ ಮೈಸೂರಿನ ಕೊಲಂಬಿಯಾ ಆಸ್ಪತ್ರೆ ತನಕ ಒಟ್ಟು 117 ಕಿ.ಮೀ. ಉದ್ದದ ರಸ್ತೆಯನ್ನು ಆರು ಪಥದ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗುತ್ತದೆ.[ಬೆಂ-ಮೈಸೂರು 6 ಪಥದ ರಸ್ತೆ, ಭೂ ಸ್ವಾಧೀನ ಆರಂಭ]
ಬೈಪಾಸ್, ಮೇಲ್ಸೇತುವೆ : ಆರುಪಥದ ರಸ್ತೆ ನಿರ್ಮಿಸುವಾಗ ಬಿಡದಿ, ರಾಮನಗರ, ಚನ್ನಪಟ್ಟಣ, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬೈಪಾಸ್ ನಿರ್ಮಾಣ ಮಾಡಲಾಗುತ್ತದೆ. ಮದ್ದೂರು ಸಮೀಪ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತದೆ.
ಯೋಜನೆಯಲ್ಲಿ ಬದಲಾವಣೆ : 6 ಪಥದ ರಸ್ತೆ ನಿರ್ಮಾಣ ಕಾಮಗಾರಿಯ ಯೋಜನೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಮೊದಲು ಜ್ಞಾನಭಾರತಿ ಜಂಕ್ಷನ್ನಿಂದ ನೈಸ್ ರಸ್ತೆ ವರೆಗೆ ಫ್ಲೈ ಓವರ್ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಅಲ್ಲಿ ನಮ್ಮ ಮೆಟ್ರೋ ಮೇಲ್ಸೇತುವೆ ಬರುವುದರಿಂದ ಆ ಯೋಜನೆಯನ್ನು ಕೈಬಿಡಲಾಗಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications