Womens Day: ನೈಋತ್ಯ ರೈಲ್ವೆ ಮಹಿಳಾ ಸಿಬ್ಬಂದಿಯಿಂದ ಬೆಂಗಳೂರು- ಮೈಸೂರು 'ರಾಜ್ಯ ರಾಣಿ' ಎಕ್ಸ್ಪ್ರೆಸ್ ರೈಲು ಸಂಚಾರ, ಮಾಹಿತಿ
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬೆಂಗಳೂರು- ಮೈಸೂರು ರಾಜ್ಯ ರಾಣಿ ಎಕ್ಸಪ್ರೆಸ್ ರೈಲು ಸಂಚಾರಕ್ಕೆ ರೈಲ್ವೆ ಇಲಾಖೆಯ ಬೆಂಗಳೂರು ನೈಋತ್ಯ ರೈಲ್ವೆ ವಿಭಾಗದ ಎಲ್ಲ ಮಹಿಳಾ ಸಿಬ್ಬಂದಿ ಚಾಲನೆ ನೀಡಿದರು.
ಬೆಂಗಳೂರು, ಮಾರ್ಚ್ 08: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬೆಂಗಳೂರು- ಮೈಸೂರು ರಾಜ್ಯ ರಾಣಿ ಎಕ್ಸಪ್ರೆಸ್ ರೈಲು ಸಂಚಾರಕ್ಕೆ ರೈಲ್ವೆ ಇಲಾಖೆಯ ಬೆಂಗಳೂರು ನೈಋತ್ಯ ರೈಲ್ವೆ ವಿಭಾಗದ ಎಲ್ಲ ಮಹಿಳಾ ಸಿಬ್ಬಂದಿ ಚಾಲನೆ ನೀಡಿದರು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಭಾಗದ ಎಲ್ಲ ಮಹಿಳಾ ಸಿಬ್ಬಂದಿಯು ಈ ಬೆಂಗಳೂರು- ಮೈಸೂರು ರಾಜ್ಯ ರಾಣಿ ಎಕ್ಸಪ್ರೆಸ್ ರೈಲಿನ ಎಲ್ಲ ಕೆಲಸ (Operate) ಅವರೇ ನಿರ್ವಹಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸುತ್ತಾರೆ. ಇಂಥದ್ದೊಂದು ಆಚರಣೆಗೆ ನೈಋತ್ಯ ರೈಲ್ವೆ ಅನುವು ಮಾಡಿಕೊಂಡಿದೆ.

ಪ್ರತಿ ವರ್ಷದಂತೆ ಈ ವರ್ಷವು ಬೆಂಗಳೂರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮಾರ್ಚ್ 08ರಂದು 'ರಾಜ್ಯ ರಾಣಿ' ಎಕ್ಸಪ್ರೆಸ್ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದರು. ಇದು ಪ್ರತಿ ವರ್ಷ ನಡೆಸಿಕೊಂಡು ಬರಲಾಗುತ್ತಿದೆ ಎಂದು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ವಿಭಾಗದ ಮಹಿಳಾ ಸಿಬ್ಬಂದಿಯಾದ ಪೈಲಟ್ ಅಭಿರಾಮಿ, ಲೊಕೋ ಪೈಲಟ್ ಗಾಯತ್ರಿ ಕೃಷ್ಣನ್ ಮತ್ತು ಟ್ರೈನ್ ವ್ಯವಸ್ಥಾಪಕರು ಶೈಲಜಾ ಬೆಂಗಳೂರಿನಿಂದ ಮೈಸೂರುವರೆಗೆ 'ರಾಜ್ಯ ರಾಣಿ' ಎಕ್ಸಪ್ರೆಸ್ ರೈಲನ್ನು ಓಡಿಸಿದರು. ಕಟುಂಬದ ಜವಾಬ್ದಾರಿ ಹೊರುವ ಹಾಗೂ ಎಲ್ಲ ರಂಗದಲ್ಲಿ ತನ್ನ ಹೊಣೆ ನಿಭಾಯಿಸುವ ಮಹಿಳೆಯರು ಈ ದಿನ ರೈಲು ಓಡಿಸುವುದು ವಿಶೇಷವಾಗಿದೆ.
ಕಾರ್ಯಕ್ರಮದಲ್ಲಿ ಮಹಿಳಾ ಸ್ಟೇಷನ್ ಮಾಸ್ಟರ್ಗಳಾದ ಜೆ.ಫಾತಿನಾ, ಸರಸ್ವತಿ ಮತ್ತು ಪ್ರತಿಮಾ ಶರ್ಮಾ ಅವರು ರೈಲಿಗೆ ಚಾಲನೆ ನೀಡಿದರು. ಈ ವೇಳೆ ನೈಋತ್ಯ ರೈಲ್ವೆಯ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ (ಆಡಳಿತ) ಕುಸುಮಾ ಹರಿಪ್ರಸಾದ್, ವಿಭಾಗೀಯ ಅಧಿಕಾರಿ ಉಮಾ ಶರ್ಮಾ, ವಿಭಾಗದ ಎಲೆಕ್ಟ್ರಿಕ್ ಇಂಜಿನಿಯರ್ ಪೂಜಾ ಹಾಗೂ ವಿಭಾಗದ ಇನ್ನಿತರ ಅಧಿಕಾರಿಗಳಾದ ಛಾಯಾಮಣಿ ಎ.ಎಂ, ಶಿಲ್ಪಾ ಎಸ್, ಹರಾಥಿ ಮೀನಾ, ವಿಜಯಲಕ್ಷ್ಮೀ, ಪ್ರತಿಭಾ ಸಿಂಗ್, ವಿದ್ಯಾ ಎಂ ಉಪಸ್ಥಿತರಿದ್ದರು.

ಟ್ರಾವೆಲಿಂಗ್ ಟಿಕೆಟ್ ಇನ್ಸಪೆಕ್ಟರ್ಗಳಾಗಿ ಉಮಾ ಪಿ.ಎಸ್, (TTI/SBC) ಮೀನಾಕ್ಷಿ ದೇವಿ, ರಮಾ ಹಂಸಾ, ಗೊಮಾಥಿ, ಟೀನಾ ಜ್ಯೋಸೆಫ್, ಸೋನಾ, ಸಿ.ಎಸ್. ಭಾರತಿ ಕಾರ್ಯ ನಿರ್ವಹಿಸಿದರು ಎಂದು ನೈಋತ್ಯ ರೈಲ್ವೆ ಇಲಾಖೆ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಮಾಹಿತಿ ನೀಡಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications