ಫೇಸ್ಬುಕ್ ಬಳಸಿ ಜೀವಂತ ಅಂಗಾಂಗ ಸಾಗಿಸಿದ ಬೆಂಗಳೂರು ಪೊಲೀಸರು
ಬೆಂಗಳೂರು, ಅಕ್ಟೋಬರ್.21: ಬೆಂಗಳೂರು ಪೊಲೀಸರು ಸಾಮಾಜಿಕ ತಾಣವನ್ನು ಬಳಸಿಕೊಂಡು ಮತ್ತೊಂದು ಸಾಧನೆ ಮಾಡಿದ್ದಾರೆ. ಫೇಸ್ ಬುಕ್ ಮೂಲಕ ನಾಗರಿಕರನ್ನು ಮುಟ್ಟಿದ ಪೊಲೀಸರು ಮೈಸೂರು-ಬೆಂಗಳೂರು ನಡುವೆ ಜೀವಂತ ಅಂಗಾಂಗಳನ್ನುಯಾವುದೇ ತೊಡಕಿಲ್ಲದೇ ಸಾಗಿಸಿದ್ದಾರೆ.
ಈ ಹಿಂದೆ ಬೆಂಗಳೂರಿನ ನಗರದ ಒಳಗಡೆಯೇ ಹೃದಯ, ಕಿಡ್ನಿ, ಲೀವರ್ ಗಳನ್ನು ಒಂದು ಆಸ್ಪತ್ರೆಯಿಂದ ಇನ್ನೊಂದು ಆಸ್ಪತ್ರೆಗೆ ಯಶಸ್ವಿಯಾಗಿ ಸಾಗಿಸಿದ್ದ ಪೊಲೀಸರು ಅಕ್ಟೋಬರ್ 21 ರಂದು ಮತ್ತೊಂದು ಸಾಧನೆ ಮಾಡಿದ್ದಾರೆ.[ಬೆಂಗಳೂರು ಬಿಜಿಎಸ್ ಗೆ ಜೀವಂತ ಹೃದಯ ಸಾಗಾಟ]

ಮೈಸೂರಿನ ಅಪೋಲೋ ಆಸ್ಪತ್ರೆಯಿಂದ ಹೊರಟ ಅಂಗಾಂಗಗಳು ಬೆಂಗಳೂರಿನ ಬಿ ಜಿ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯನ್ನು ಸುರಕ್ಷಿತವಾಗಿ ತಲುಪಿದೆ. ವೈದ್ಯರ ವಿನಂತಿಯಂತೆ ಕೆಂಗೇರಿಯಿಂದ ಅಪೋಲೋ ಆಸ್ಪತ್ರೆವರೆಗೆ ಗ್ರೀನ್ ಕಾರಿಡಾಡ್ ನಿರ್ಮಾಣ ಮಾಡಿಕೊಟ್ಟ ಪೊಲೀಸರಿಗೆ ಒಂದು ಸಲಾಂ ಹೇಳಲೇಬೇಕು.[ಬಡವರಿಗಾಗಿ ಮಿಡಿಯುತ್ತಿರುವ 'ಹೃದಯ'ವಂತೆ ರೀನಾ]
ಪೊಲೀಸರು ಮಾಡಿಕೊಂಡ ವಿನಂತಿ
ಸ್ನೇಹಿತರೇ, ಮಿದುಳು ನಿಷ್ಕ್ರಿಯಗೊಂಡ ಮಹಿಳೆಯೊಬ್ಬರ ದೇಹದ ಅಂಗಾಂಗಗಳನ್ನು ಮೈಸೂರಿನ ಅಪೋಲೋ ಆಸ್ಪತ್ರೆಯಿಂದ ಬೆಂಗಳೂರಿನ ಬಿಜಿ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರಗೆ ಸಾಗಿಸುವ ಕಾರ್ಯ ಹಮ್ಮಿಕೊಂಡಿದ್ದೇವೆ. ಅಂಗಾಂಗಳನ್ನು ಹೊತ್ತ ಆಂಬುಲೆನ್ಸ್ 2.20ಕ್ಕೆ ಮೈಸೂರನ್ನು ಬಿಟ್ಟಿದೆ. ನಿರೀಕ್ಷೆಯಂತೆ ಬೆಂಗಳೂರಿನ ಆಸ್ಪತ್ರೆಗೆ 4.30ಕ್ಕೆ ತಲುಪಬೇಕು. ಸದ್ಯ ಆಂಬುಲೆನ್ಸ್ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿದ್ದು ನೈಸ್ ರಸ್ತೆ ಮೂಲಕ ಕೆಂಗೇರಿ ತಲುಪಲಿದೆ. ಗೊಟ್ಟಿಗೆರೆ-ಹುಳಿಮಾವು ಗೇಟ್-ಅರಕೆರೆ ಗೇಟ್-ಮೂಲಕ ಅಪೋಲೋ ಆಸ್ಪತ್ರೆ ತಲುಪುವಂತೆ ಮಾಡಲಾಗಿದೆ.
ವೈದ್ಯರ ವಿನಂತಿಯಂತೆ ಕೆಂಗೇರಿಯಿಂದ-ಅಪೊಲೋ ಆಸ್ಪತ್ರೆವರೆಗೆ ಗ್ರೀನ್ ಕಾರಿಡಾರ್ ನಿರ್ಮಾಣ ಮಾಡಲು ಬೆಂಗಳೂರು ಪೊಲೀಸ್ ಒಪ್ಪಿಗೆ ನೀಡಿದೆ. ದಯವಿಟ್ಟು ಈ ಸಮಯದಲ್ಲಿ ನಾಗರಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ಕೇಳಿಕೊಳ್ಳುತ್ತಿದ್ದೇವೆ.
Posted by BENGALURU CITY POLICE onWednesday, October 21, 2015
Posted by BENGALURU CITY POLICE onWednesday, October 21, 2015
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications