ಫೇಸ್ಬುಕ್ ಬಳಸಿ ಜೀವಂತ ಅಂಗಾಂಗ ಸಾಗಿಸಿದ ಬೆಂಗಳೂರು ಪೊಲೀಸರು
ಬೆಂಗಳೂರು, ಅಕ್ಟೋಬರ್.21: ಬೆಂಗಳೂರು ಪೊಲೀಸರು ಸಾಮಾಜಿಕ ತಾಣವನ್ನು ಬಳಸಿಕೊಂಡು ಮತ್ತೊಂದು ಸಾಧನೆ ಮಾಡಿದ್ದಾರೆ. ಫೇಸ್ ಬುಕ್ ಮೂಲಕ ನಾಗರಿಕರನ್ನು ಮುಟ್ಟಿದ ಪೊಲೀಸರು ಮೈಸೂರು-ಬೆಂಗಳೂರು ನಡುವೆ ಜೀವಂತ ಅಂಗಾಂಗಳನ್ನುಯಾವುದೇ ತೊಡಕಿಲ್ಲದೇ ಸಾಗಿಸಿದ್ದಾರೆ.
ಈ ಹಿಂದೆ ಬೆಂಗಳೂರಿನ ನಗರದ ಒಳಗಡೆಯೇ ಹೃದಯ, ಕಿಡ್ನಿ, ಲೀವರ್ ಗಳನ್ನು ಒಂದು ಆಸ್ಪತ್ರೆಯಿಂದ ಇನ್ನೊಂದು ಆಸ್ಪತ್ರೆಗೆ ಯಶಸ್ವಿಯಾಗಿ ಸಾಗಿಸಿದ್ದ ಪೊಲೀಸರು ಅಕ್ಟೋಬರ್ 21 ರಂದು ಮತ್ತೊಂದು ಸಾಧನೆ ಮಾಡಿದ್ದಾರೆ.[ಬೆಂಗಳೂರು ಬಿಜಿಎಸ್ ಗೆ ಜೀವಂತ ಹೃದಯ ಸಾಗಾಟ]

ಮೈಸೂರಿನ ಅಪೋಲೋ ಆಸ್ಪತ್ರೆಯಿಂದ ಹೊರಟ ಅಂಗಾಂಗಗಳು ಬೆಂಗಳೂರಿನ ಬಿ ಜಿ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯನ್ನು ಸುರಕ್ಷಿತವಾಗಿ ತಲುಪಿದೆ. ವೈದ್ಯರ ವಿನಂತಿಯಂತೆ ಕೆಂಗೇರಿಯಿಂದ ಅಪೋಲೋ ಆಸ್ಪತ್ರೆವರೆಗೆ ಗ್ರೀನ್ ಕಾರಿಡಾಡ್ ನಿರ್ಮಾಣ ಮಾಡಿಕೊಟ್ಟ ಪೊಲೀಸರಿಗೆ ಒಂದು ಸಲಾಂ ಹೇಳಲೇಬೇಕು.[ಬಡವರಿಗಾಗಿ ಮಿಡಿಯುತ್ತಿರುವ 'ಹೃದಯ'ವಂತೆ ರೀನಾ]
ಪೊಲೀಸರು ಮಾಡಿಕೊಂಡ ವಿನಂತಿ
ಸ್ನೇಹಿತರೇ, ಮಿದುಳು ನಿಷ್ಕ್ರಿಯಗೊಂಡ ಮಹಿಳೆಯೊಬ್ಬರ ದೇಹದ ಅಂಗಾಂಗಗಳನ್ನು ಮೈಸೂರಿನ ಅಪೋಲೋ ಆಸ್ಪತ್ರೆಯಿಂದ ಬೆಂಗಳೂರಿನ ಬಿಜಿ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರಗೆ ಸಾಗಿಸುವ ಕಾರ್ಯ ಹಮ್ಮಿಕೊಂಡಿದ್ದೇವೆ. ಅಂಗಾಂಗಳನ್ನು ಹೊತ್ತ ಆಂಬುಲೆನ್ಸ್ 2.20ಕ್ಕೆ ಮೈಸೂರನ್ನು ಬಿಟ್ಟಿದೆ. ನಿರೀಕ್ಷೆಯಂತೆ ಬೆಂಗಳೂರಿನ ಆಸ್ಪತ್ರೆಗೆ 4.30ಕ್ಕೆ ತಲುಪಬೇಕು. ಸದ್ಯ ಆಂಬುಲೆನ್ಸ್ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿದ್ದು ನೈಸ್ ರಸ್ತೆ ಮೂಲಕ ಕೆಂಗೇರಿ ತಲುಪಲಿದೆ. ಗೊಟ್ಟಿಗೆರೆ-ಹುಳಿಮಾವು ಗೇಟ್-ಅರಕೆರೆ ಗೇಟ್-ಮೂಲಕ ಅಪೋಲೋ ಆಸ್ಪತ್ರೆ ತಲುಪುವಂತೆ ಮಾಡಲಾಗಿದೆ.
ವೈದ್ಯರ ವಿನಂತಿಯಂತೆ ಕೆಂಗೇರಿಯಿಂದ-ಅಪೊಲೋ ಆಸ್ಪತ್ರೆವರೆಗೆ ಗ್ರೀನ್ ಕಾರಿಡಾರ್ ನಿರ್ಮಾಣ ಮಾಡಲು ಬೆಂಗಳೂರು ಪೊಲೀಸ್ ಒಪ್ಪಿಗೆ ನೀಡಿದೆ. ದಯವಿಟ್ಟು ಈ ಸಮಯದಲ್ಲಿ ನಾಗರಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ಕೇಳಿಕೊಳ್ಳುತ್ತಿದ್ದೇವೆ.
Posted by BENGALURU CITY POLICE onWednesday, October 21, 2015
Posted by BENGALURU CITY POLICE onWednesday, October 21, 2015
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ











Click it and Unblock the Notifications