Bengaluru Rain: ಮಳೆ ತಂದ ಅವಾಂತರ; ಬೆಂಗಳೂರಿನಲ್ಲಿ ಭಾರೀ ಮಳೆಯಿಂದ 5 ಮನೆಗಳು ಕುಸಿತ, ಕಾರುಗಳು ಜಖಂ
ಬೆಂಗಳೂರಯ, ಮೇ 09: ಮೇ ಆರಂಭದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಸೋಮವಾರ ಸುರಿ ಭಾರೀ ಮಳೆಯಿಂದಾಗಿ 5 ಮನೆಗಳು ಕುಸಿದು, ಅಪಾರ್ಟ್ಮೆಂಟ್ನಲ್ಲಿ ನಿಲ್ಲಿಸಿದ್ದ ಕಾರುಗಳು ಸಂಪೂರ್ಣ ಜಖಂಗೊಂಡಿದೆ.
ಹೌದು, ಸಿನಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿದ ಭಾರೀ ಮನೆಯ ಪರಿಣಾಯವಾಗಿ ಪಿಎಸ್ ಕಾಲೇಜ್ ಬಳಿಯ ವೀರಭದ್ರನಗರದ ಸ್ಲಮ್ನಲ್ಲಿ 5 ಮನೆಗಳು ಮತ್ತು ಕಾಂಪೌಂಡ್ ಗೋಡೆ ಕುಸಿದು ಪಕ್ಕದ ಅಪಾರ್ಟ್ಮೆಂಟ್ನಲ್ಲಿ ನಿಲ್ಲಿಸಿದ್ದ ಕೆಲ ಕಾರುಗಳು ಜಖಂಗೊಂಡಿದ್ದು, ಅದೃಷ್ಟವಶಾತ್ ಸಾವು-ನೋವು ಉಂಟಾಗಿಲ್ಲ.

ಇನ್ನೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಇತ್ತ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಈ ಬಾರಿ ಚುನಾವಣೆಗೆ ಮಳೆರಾಯನ ಅಡ್ಡಿಯಾಗುವ ಸಾಧ್ಯತೆ ಹೆಚ್ಚಾಗಿದೆ.
ಮೇ ಆರಂಭದಿಂದಲೇ ಹೆಚ್ಚಿನ ಮಳೆಯಾಗುತ್ತಿದ್ದು, ಬಂಗಾಳ ಕೊಲ್ಲಿಯಲ್ಲಿ ಮೇಲ್ಮಟ್ಟದಲ್ಲಿ ಸುಳಿಗಾಳಿ ಉಂಟಾಗಿದೆ, ಇದರ ಪ್ರಭಾವದಿಂದಾಗಿ ಸಮುದ್ರ ಮಟ್ಟದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ವಾಯುಭಾರ ಕುಸಿತ ಆಗ್ನೇಯದಿಂದ ಉತ್ತರ ದಿಕ್ಕಿನಲ್ಲಿ ತಲುಪಿ, ಮಧ್ಯಬಂಗಾಳ ಕೊಲ್ಲಿಯಲ್ಲಿ ಮೇ 10 ರಂದು ಚಂಡಮಾರುತವಾಗುವ ಸಾಧ್ಯತೆಗಳಿವೆ. ಇದರ ಪ್ರಭಾವದಿಂದಾಗಿ ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ.

ಇನ್ನೂ ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದ್ದು, ಮೇ 11ರಂದು ಕೆಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಈ ಮಳೆ ಚುನಾವಣೆಗೆ ಅಡ್ಡಿಯಾಗೋ ನಿರೀಕ್ಷೆಯಿದ್ದು, ಮತದಾನದ ಪ್ರಮಾಣ ಕಡಿಮೆಯಾಗೋ ಸಾಧ್ಯತೆಯಿದೆ.
ಇನ್ನೂ ವರ್ಷದ ಮೊದಲ ಮಳೆ ಆರಂಭದಲ್ಲೇ ಸಿಲಿಕಾನ್ ಸಿಟಿ ಜನರನ್ನ ನಿದ್ದೆಗೆಡಿಸಿದ್ದು, ಈ ಬಾರಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಬೆಂಗಳೂರಿನ ಜನಕ್ಕೆ ಮಳೆರಾಯನ ಕಾಟ ತಪ್ಪಿದಲ್ಲ ಎಂದು ಹೇಳಲಾಗಿದೆ.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications