Get Updates
Get notified of breaking news, exclusive insights, and must-see stories!

IAS: ಐಎಎಸ್ ವರ್ಗಾವಣೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ವರ್ಗಾವಣೆ

ಬೆಂಗಳೂರು, ಜನವರಿ 25: ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಸರ್ಕಾರ ಆಡಳಿತ ಯಂತ್ರದಲ್ಲಿ ಹಲವು ಬದಲಾವಣೆಗಳನ್ನು ಮಾಡಿದೆ. 10 ಐಎಎಸ್ ಅಧಿಕಾರಿಗಳನ್ನು ತತ್‌ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆಗೊಳಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿದೆ, ಮಂಡ್ಯ ಜಿಲ್ಲಾಧಿಕಾರಿಗಳಿಗೆ ಹೆಚ್ಚುವರಿ ಹೊಣೆಯನ್ನು ನೀಡಿ ಆದೇಶವನ್ನು ಹೊರಡಿಸಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಟಿ. ಮಹಾಂತೇಶ್ ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವೆಗಳು-1) ಆದೇಶವನ್ನು ಹೊರಡಿಸಿದ್ದಾರೆ.

Bengaluru Rural Deputy Commissioner And Other 9 IAS Officers Transferred

ವರ್ಗಾವಣೆಗೊಂಡ ಅಧಿಕಾರಿಗಳು

* ಡಾ. ಶಿವ ಶಂಕರ ಎನ್. ಐಎಎಸ್ (ಕೆಎನ್: 2012), ಜಿಲ್ಲಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ತತ್‌ ಕ್ಷಣದಿಂದ ಮುತ್ತು ಮುಂದಿನ ಆದೇಶದ ತನಕ ವರ್ಗಾವಣೆ. ವ್ಯವಸ್ಥಾಪಕ ನಿರ್ದೇಶಕರು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಬೆಂಗಳೂರು ಹುದ್ದೆಗೆ ವರ್ಗಾವಣೆ. ಈ ಹುದ್ದೆಯಲ್ಲಿದ್ದ ಮಹಾಂತೇಶ್ ಬೀಳಗಿ ವರ್ಗಾವಣೆ.

* ಮಹಾಂತೇಶ್ ಬೀಳಗಿ ಐಎಎಸ್ (ಕೆಎನ್‌: 2012), ವ್ಯವಸ್ಥಾಪಕ ನಿರ್ದೇಶಕರು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ತತ್‌ಕ್ಷಣದಿಂದ ಮುತ್ತು ಮುಂದಿನ ಆದೇಶದ ತನಕ ವರ್ಗಾವಣೆ. ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ರಾಜ್ಯ ಖನಿಜ ನಿಗಮ ಹುದ್ದೆಗೆ ವರ್ಗಾವಣೆ. ಈ ಹುದ್ದೆಯಲ್ಲಿದ್ದ ಜಯವಿಭವ ಸ್ವಾಮಿ ವರ್ಗಾವಣೆ.

* ಸ್ವರೂಪ್ ಟಿ. ಕೆ. ಐಎಎಸ್ (ಕೆಎನ್‌: 2012) ಧಾರವಾಡ ಜಿಲ್ಲಾ ಪಂಚಾಯಿತಿ ಸಿಇಒ ತತ್‌ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆ. ನಿರ್ದೇಶಕರು (ಇ-ಆಡಳಿತ) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬೆಂಗಳೂರು ಹುದ್ದೆಗೆ ನೇಮಕ. ಈ ಹುದ್ದೆಯಲ್ಲಿದ್ದ ಡಾ. ನಂದಿನಿದೇವಿ ಕೆ. ಬಿಡುಗಡೆ.

* ಡಾ. ಕುಮಾರ ಐಎಎಸ್ (ಕೆಎನ್‌: 2015). ಜಿಲ್ಲಾಧಿಕಾರಿಗಳು ಮಂಡ್ಯ ತತ್‌ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಹೆಚ್ಚುವರಿ ಹುದ್ದೆ. ಈ ಹುದ್ದೆಯಲ್ಲಿದ್ದ ತನ್ವೀರ್ ಆಸಿಫ್ ವರ್ಗಾವಣೆ.

* ಜಯವಿಭವಸ್ವಾಮಿ ಐಎಎಸ್ (ಕೆಎನ್: 2016) ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಖನಿಜ ನಿಗಮ, ಬೆಂಗಳೂರು ತತ್‌ ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆ. ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ಬೆಂಗಳೂರು ಹುದ್ದೆಗೆ ನೇಮಕ. ಈ ಹುದ್ದೆಯಲ್ಲಿದ್ದ ಕನಗವಲ್ಲಿ ಎಂ. ಬಿಡುಗಡೆ.

* ಶೇಕ್ ತನ್ವೀರ್ ಆಸಿಫ್‌ ಐಎಎಸ್ (ಕೆಎನ್‌: 2017) ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ತತ್‌ ಕ್ಷಣದಿಂದ ಮುತ್ತು ಮುಂದಿನ ಆದೇಶದ ತನಕ ವರ್ಗಾವಣೆ. ಆಯುಕ್ತರು, ಮೈಸೂರು ಮಹಾನಗರ ಪಾಲಿಕೆ ಹುದ್ದೆಗೆ ನೇಮಕ. ಈ ಹುದ್ದೆಯಲ್ಲಿದ್ದ ಅಸಾದ್ ಉರ್ ರೆಹಮಾನ್ ಶರೀಫ್ ವರ್ಗಾವಣೆ.

* ದ್ವಿಗ್ವಿಜಯ್ ಬೋಡ್ಕೆ ಐಎಎಸ್ (ಕೆಎನ್: 2018) ರಾಮನಗರ ಜಿಲ್ಲಾ ಪಂಚಾಯಿತಿ ಸಿಇಒ ತತ್ ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆ. ನಿರ್ದೇಶಕರು (ಐಟಿ) ಕೆಎಸ್ಆರ್‌ಟಿಸಿ, ಬೆಂಗಳೂರು ಹುದ್ದೆಗೆ ನೇಮಕ.

* ಪಾಟೀಲ್ ಭುವನೇಶ್ ದೇವಿದಾಸ್ ಐಎಎಸ್ (ಕೆಎನ್‌: 2018) ಆಯುಕ್ತರು, ಕಲಬುರಗಿ ಮಹಾನಗರ ಪಾಲಿಕೆ ತತ್ ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ಧಾರವಾಡ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ನೇಮಕ. ಈ ಹುದ್ದೆಯಲ್ಲಿದ್ದ ಸ್ವರೂಪ್ ಟಿ. ಕೆ. ವರ್ಗಾವಣೆ.

* ಅನ್‌ಮೋಲ್‌ ಜೈನ್ ಐಎಎಸ್ (ಕೆಎನ್‌: 2020) ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ (ವಿಜಲೆನ್ಸ್), ಬೆಂಗಳೂರು ತತ್‌ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆ. ರಾಮನಗರ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ನೇಮಕ.

* ಶಿಂಧೆ ಅವಿನಾಶ್ ಸಂಜೀವನ್ ಐಎಎಸ್ (ಕೆಎನ್‌: 2020) ಡೆಪ್ಯೂಟಿ ಕಮೀಷನರ್ (ಆಡಳಿತ) ಕಲಬುರಗಿ ಮಹಾನಗರ ಪಾಲಿಕೆ ಮುಂದಿನ ಆದೇಶದ ತನಕ ವರ್ಗಾವಣೆ. ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಕ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+