ನಮ್ಮದು ಒತ್ತಾಯದ ಬೇಡಿಕೆಯಲ್ಲ, ಕಳಕಳಿಯ ಮನವಿ
ಬೆಂಗಳೂರು, ನ. 18: ಮೂಢ ನಂಬಿಕೆ ನಿಷೇಧ ಕಾನೂನು ಜಾರಿ, ಮಹಿಳಾ ಸಮಾನತೆ ಮತ್ತು ಸಾಮಾಜಿಕ ತಾರತಮ್ಯ ನಿವಾರಣೆಗೆ ಒತ್ತಾಯಿಸಿ ನಿಡುಮಾಮಿಡಿ ಮಹಾಸಂಸ್ಥಾನ ಮಠದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಸೋಮವಾರ ಪ್ರಗತಿಪರ ಮಠಾಧೀಶರ ವೇದಿಕೆ ಆಶ್ರಯದಲ್ಲಿ ಆರಂಭವಾಗಿರುವ ಉಪವಾಸ ಸತ್ಯಾಗ್ರಹದಲ್ಲಿ ಸ್ವಾಮೀಜಿಗಳೊಂದಿಗೆ ಮಾತಾಜಿಗಳು ಭಾಗವಹಿಸಿರುವುದು ವಿಶೇಷ.[ಬೆಂಗಳೂರಿನಲ್ಲಿ ಶ್ರೀಗಳ ಉಪವಾಸ ಸತ್ಯಾಗ್ರಹ ಆರಂಭ]

ಈ ವೇಳೆ ಮಾತನಾಡಿದ ನಿಡುಮಾಮಿಡಿ ಸ್ವಾಮೀಜಿ, ನಮ್ಮದು ಸಚ್ಚಾರಿತ್ರ್ಯದ ಬೇಡಿಕೆ. ಸರ್ಕಾರ ಇದಕ್ಕೆ ಒಪ್ಪಿಕೊಳ್ಳುತ್ತದೆ ಎಂಬ ನಿರೀಕ್ಷೆಯಿದೆ. ನಾಗರಿಕ ಸಮಾಜಕ್ಕೆ ದೊಡ್ಡ ಕೆಡುಕಾಗಿ ಪರಿಣಮಿಸಿರುವ ಅಂಧಾಚಾರಗಳನ್ನು ತೊಡೆದು ಹಾಕಲು ಎಲ್ಲರೂ ಕೈ ಜೋಡಿಸಬೇಕಿದೆ. ಮಾತಾಜಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬಿದೆ ಎಂದು ಹೇಳಿದರು.
ನಮ್ಮ ಹೋರಾಟಕ್ಕೆ ಚಿಂತಕರು, ಸಾಹಿತಿಗಳು, ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಅವರೆಲ್ಲರೂ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದು ನಮ್ಮ ಬೇಡಿಕೆ ಎನ್ನುವುದಕ್ಕಿಂತ ಕಳಕಳಿಯ ವಿನಂತಿ ಎಂದು ಸರ್ಕಾರ ಭಾವಿಸಬಹುದು ಎಂದು ತಿಳಿಸಿದರು.
ಯಡಿಯೂರು ಶ್ರೀ ತೋಂಟದ ಸಿದ್ದಲಿಂಗಸ್ವಾಮೀಜಿ, ಕಲ್ಬುರ್ಗಿಯ ಶ್ರೀ ಶರಣಬಸವ ಸ್ವಾಮೀಜಿ, ಹುಕ್ಕೇರಿಯ ಶ್ರೀ ಪಂಚಮ ಶಿವಲಿಂಗಸ್ವಾಮೀಜಿ, ಸಾಣೆಹಳ್ಳಿ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ, ಗುಳೇದಗುಡ್ಡದ ಸ್ವಾಮೀಜಿ, ಊರು ಲಿಂಗ ಬೆಟ್ಟದ ಸ್ವಾಮೀಜಿ, ಊರುಕೊಂಡ ಸ್ವಾಮೀಜಿ, ಅಥಣಿ ಸ್ವಾಮೀಜಿ ಸೇರಿದಂತೆ ನೂರಾರು ಮಾತಾಜಿಗಳು ಪಾಲ್ಗೊಂಡಿದ್ದಾರೆ.
ಸ್ವಾಮೀಜಿಗಳ ಪ್ರಮುಖ ಬೇಡಿಕೆಗಳೇನು?
* ಮೂಢ ನಂಬಿಕೆ ನಿಷೇಧ ಕಾನೂನು ಜಾರಿಯಾಗಬೇಕು
* ವಿಜಾಪುರದಲ್ಲಿ ಮಹಿಳಾ ಸಾರ್ಥಕ ಆಶ್ರಮ ನಿರ್ಮಾಣವಾಗಬೇಕು
* ಅಂಧ ಶ್ರದ್ಧೆಗಳಿಗೆ ಸರ್ಕಾರ ಪ್ರೋತ್ಸಾಹ ನೀಡಬಾರದು.
* ಮಡೆಸ್ನಾನದಂಥ ಹೀನ ಆಚರಣೆಗಳಿಗೆ ತಿಲಾಂಜಲಿ ನೀಡಬೇಕು
* ಹೆಣ್ಣು ಮಕ್ಕಳನ್ನು ಊರ ಹೊರಗಿಡುವಂಥ ಕೆಲಸಕ್ಕೆ ಅಂತ್ಯ ಹಾಡಬೇಕು
* ಬಾಲ್ಯ ವಿವಾಹ, ದೇವದಾಸಿ ಪದ್ಧತಿ, ಬೆತ್ತಲೆ ಸೇವೆ, ಜೀತಪದ್ಧತಿ ಗಳು ಕಂಡುಬಂದರೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು
* ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂಥ ಪ್ರಯತ್ನ ಮಾಡುವವರನ್ನು ಬಂಧಿಸಬೇಕು.
ನೂರಾರು ಸ್ವಾಮೀಜಿಗಳು ನಿರಶನದಲ್ಲಿ ತೊಡಗಿದ್ದರೂ ಇಲ್ಲಿಯವರೆಗೆ ಸರ್ಕಾರದ ಯಾವೊಬ್ಬ ಪ್ರತಿನಿಧಿಯೂ ಸಮಸ್ಯೆ ಆಲಿಸಲು ಸ್ಥಳಕ್ಕೆ ತೆರಳಿಲ್ಲ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications