ಮೈಸೂರು, ಗೌರೀಬಿದನೂರು, ಕೋಲಾರಕ್ಕೆ ಉಪನಗರ ರೈಲು ಯೋಜನೆ ವಿಸ್ತರಣೆ: ಸರ್ಕಾರ
ಬೆಂಗಳೂರು, ಜೂನ್ 06: ಕೇವಲ ಬೆಂಗಳೂರು ನೆರೆಹೊರೆಯ ಪ್ರದೇಶಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು ರೂಪಿಸಿರುವ ಉಪನಗರ ರೈಲು ಯೋಜನೆಯನ್ನು ಸುತ್ತಲಿನ ದೂರದ ನಗರಗಳಿಗೂ ವಿಸ್ತರಿಸಬೇಕು. ಈ ನಿಟ್ಟಿನಲ್ಲಿ ಯೋಜನೆಯನ್ನು ಪರಿಷ್ಕರಿಸಿ ಹೊಸದಾಗಿ ಪ್ರಸ್ತಾವನೆ ಸಲ್ಲಿಸಬೇಕು ಎಂದು ರಾಜ್ಯ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮೂಲಸೌಕರ್ಯ ಇಲಾಖೆಯ ಅಧಿಕಾರಿಗಳ ಜತೆ ಬೆಂಗಳೂರಿನ ಖನಿಜ ಭವನದಲ್ಲಿ ನಡೆಸಿದ ಸುದೀರ್ಘ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಮಹತ್ತ್ವದ ನಿರ್ದೇಶನ ನೀಡಿದರು. ಉಪನಗರ ರೈಲು ಯೋಜನೆಯನ್ನು ಪಕ್ಕದ ಪ್ರದೇಶ/ಊರುಗಳಿಗೆ ವಿಸ್ತರಣೆ ಮಾಡಿದರೆ ಮಾತ್ರ ಬೆಂಗಳೂರಿನ ಸಂಚಾರ ದಟ್ಟಣೆಯ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಈಗ 148 ಕಿ.ಮೀ. ಉದ್ದದ ಉಪನಗರ ರೈಲು ಯೋಜನೆಯ ಮೊದಲನೇ ಹಂತದ ಕಾಮಗಾರಿ ನಡೆಯುತ್ತಿದೆ. ಉದ್ದೇಶಿತ ಒಟ್ಟಾರೆ ಯೋಜನೆಗೆ 15,767 ಕೋಟಿ ರೂಪಾಯಿ ವೆಚ್ಚವಾಗುತ್ತಿದೆ. ಆದರೆ ಇದರ ಸದ್ಯದ ಸ್ವರೂಪದಿಂದ ಹೆಚ್ಚಿನ ಪ್ರಯೋಜನವಿಲ್ಲ. ಇದನ್ನು ರಾಮನಗರದಿಂದ ಮೈಸೂರು, ದೊಡ್ಡಬಳ್ಳಾಪುರದಿಂದ ಗೌರಿಬಿದನೂರು-ಹಿಂದೂಪುರ, ಚಿಕ್ಕಬಳ್ಳಾಪುರದಿಂದ ಕೋಲಾರಕ್ಕೆ ವಿಸ್ತರಿಸಬೇಕು. ಈ ಸಂಬಂಧ ಯೋಜನೆಯನ್ನು ಪರಿಷ್ಕರಿಸಿ ಪ್ರಸ್ತಾವನೆ ಸಲ್ಲಿಸಿ ಎಂದರು.
ಸದ್ಯಕ್ಕೆ ಬೆಂಗಳೂರು ಉಪನಗರ ರೈಲು ಯೋಜನೆಯನ್ನು ರಾಮನಗರ, ಚಿಕ್ಕಬಾಣಾವರ, ದೊಡ್ಡಬಳ್ಳಾಪುರ, ವೈಟ್ ಫೀಲ್ಡ್ ವರೆಗೆ ಮುಟ್ಟಿಸುವ ಗುರಿ ಇದೆ. ಆದರೆ ಇವೆಲ್ಲವೂ ಈಗಾಗಲೇ ಬೆಂಗಳೂರಿನ ಭಾಗವಾಗಿವೆ. ಆದ್ದರಿಂದ ರಾಜಧಾನಿಯ ಸುತ್ತಲಿನ ನೂರು ಕಿ.ಮೀ. ಸುತ್ತಳತೆಯಲ್ಲಿ ಇರುವ ನಗರಗಳಿಗೆ ಉಪನಗರ ರೈಲು ಸೌಕರ್ಯ ಒದಗಿಸಬೇಕು.

ಬೆಂಗಳೂರಿನ ಉದ್ದಿಮೆಗಳಿಗೆ ಬೇಕಾದ ಜನರು ಈ ಊರುಗಳಿಂದ ಸುಗಮವಾಗಿ ದಿನವೂ ಓಡಾಡುವಂತೆ ಆಗಬೇಕು. ಇದು ಸಂಚಾರ ದಟ್ಟಣೆಯ ಜತೆಗೆ ವಲಸೆಯ ಸಮಸ್ಯೆಗೂ ಕಡಿವಾಣ ಹಾಕುತ್ತದೆ ಎಂದು ಸಚಿವರು ವಿವರಿಸಿದ್ದಾರೆ.
ಡಾಬಸಪೇಟೆಯ ತನಕ ಯೋಜನೆ ವಿಸ್ತರಣೆಗೆ ಸೂಚನೆ
ಉಪನಗರ ರೈಲು ಯೋಜನೆಯ ಹಂತ-1ರ ಅಡಿಯಲ್ಲಿ ಈಗಾಗಲೇ ಚಿಕ್ಕಬಾಣಾವರ ಮತ್ತು ಬೆನ್ನಿಗಾನಹಳ್ಳಿ ನಡುವೆ ಕಾಮಗಾರಿ ನಡೆಯುತ್ತಿದೆ. ಇದನ್ನು ತುಮಕೂರಿನ ಕಡೆಯಲ್ಲಿ ಡಾಬಸಪೇಟೆಯ ತನಕ ವಿಸ್ತರಿಸಬೇಕು. ಅಲ್ಲಿ ಕೈಗಾರಿಕಾ ಪ್ರದೇಶ ಇರುವ ಹಿನ್ನೆಲೆಯಲ್ಲಿ ಇದು ಅತ್ಯಗತ್ಯವಾಗಿದೆ. ಈ ಕೆಲಸವನ್ನು ಮೊದಲ ಹಂತದಲ್ಲೇ ಮಾಡಬೇಕು ಎಂದು ಹೇಳಿದರು.
ಪ್ರತೀ ಹತ್ತು ನಿಮಿಷಕ್ಕೆ ಒಂದರಂತೆ ಸಬರ್ಬನ್ ರೈಲು ಸೇವೆ ಒದಗಿಸುವುದು ನಮ್ಮ ಗುರಿಯಾಗಿದೆ. ಸುಗಮ ಸಂಚಾರ ವ್ಯವಸ್ಥೆಯ ಜಾಲವನ್ನು ಬೆಳೆಸುವುದು ಮೂಲಸೌಲಭ್ಯ ಅಭಿವೃದ್ಧಿಯ ಮಹತ್ತರ ಗುರಿಗಳಲ್ಲಿ ಒಂದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸಚಿವರು, ಕೈಗಾರಿಕಾ ಇಲಾಖೆಯ ನಾಲೆಡ್ಜ್ ಪಾರ್ಟನರ್ ಆಗಿರುವ ಬೋಸ್ಟನ್ ಕನ್ಸಲ್ಟೆನ್ಸಿ ಗ್ರೂಪ್ ಜತೆ ರಾಜ್ಯದಲ್ಲಿ ಮುಂದಿನ ಐದು ವರ್ಷಗಳ ಅವಧಿಯಲ್ಲಿ ಕೈಗೆತ್ತಿಕೊಳ್ಳಬಹುದಾದ ಕೈಗಾರಿಕಾ ಯೋಜನೆಗಳನ್ನು ಕುರಿತು ವಿಸ್ತೃತ ವಿಚಾರ ವಿನಿಮಯ ನಡೆಸಿದರು.
ಸಭೆಯಲ್ಲಿ ಕೆ-ರೈಡ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮೂಲಸೌಲಭ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications