ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ
ಬೆಂಗಳೂರು: ಎಂ.ಬಿ. ಪಾಟಿಲ್ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಬೆಂಗಳೂರಿನಿಂದ ಬೀದರ್ ಮತ್ತು ಕಲ್ಬುರ್ಗಿಗೆ ವಿಮಾನಸೇವೆ ಪುನ: ಆರಂಭಿಸುವ ಪ್ರಕಿಯೆಗೆ ವೇಗ ನೀಡಲಾಗಿದೆ. ಈ ಹಿನ್ನಲೆಯಲ್ಲಿ ವಿಮಾನಯಾನ ಸಂಸ್ಥೆಗಳು ಇದೇ ತಿಂಗಳು 23ರ ಒಳಗೆ ತಮ್ಮ ಪ್ರಸ್ತಾವನೆಗಳನ್ನು ಸಲ್ಲಿಸಲು ಸೂಚನೆ ನೀಡಲಾಗಿದ್ದು, ಮುಂದಿನ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾದ್ಯತೆ ಇದು ಎಂದು ಸಚಿವ ಎಂ ಬಿ ಪಾಟೀಲ ತಿಳಿಸಿದರು.
ಈ ಸಂಬಂಧ ಸಚಿವ ಎಂ ಬಿ ಪಾಟೀಲ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸೋಮವಾರ ವಿವಿಧ ವಿಮಾನಯಾನ ಸಂಸ್ಥೆಗಳೊಂದಿಗೆ ಅವರು ತಮ್ಮ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಸಚಿವರಾದ ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ರಹೀಂಖಾನ್ ಮತ್ತು ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ (ಕೆ.ಕೆ.ಆರ್.ಡಿ.ಬಿ) ಅಧ್ಯಕ್ಷ ಡಾ.ಅಜೇಯ್ ಸಿಂಗ್ ಸೇರಿ ಆ ಭಾಗದ ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿದರು.

ಸಭೆ ಬಳಿಕ ಮಾತನಾಡಿದ ಸಚಿವ ಎಂ ಬಿ ಪಾಟೀಲ ಅವರು, ಕಲಬುರಗಿ ವಿಮಾನ ನಿಲ್ದಾಣದಿಂದ ಈಗ ವಿಮಾನಸೇವೆ ನಿಲ್ಲಿಸಲಾಗಿದೆ. ಬೀದರನಲ್ಲಿ ಕೆ.ಕೆ.ಆರ್.ಡಿ.ಬಿ ನೆರವಿನಿಂದ ದಿನಕ್ಕೆ ಒಂದು ವಿಮಾನ ಮಾತ್ರ ಸಂಚರಿಸುತ್ತಿದೆ. ಕೇಂದ್ರ ಸರಕಾರವು ಪ್ರಾದೇಶಿಕ ಮಟ್ಟದಲ್ಲಿ ವಿಮಾನಯಾನ ಉತ್ತೇಜಿಸಲು ಉಡಾನ್ ಯೋಜನೆ ಮೂಲಕ ಮೂರು ವರ್ಷ ನೆರವು ನೀಡಿತು. ಆ ಅವಧಿ ಮುಗಿದ ನಂತರ ಹೀಗಾಗುತ್ತಿದೆ. ಕಲಬುರಗಿಯಲ್ಲಿ 742 ಎಕರೆಯಲ್ಲಿ ವಿಮಾನ ನಿಲ್ದಾಣವಿದೆ. ಇಂದಿನ ಸಭೆಯಲ್ಲಿ ವೈಮಾನಿಕ ಸೇವೆ ಎಷ್ಟರ ಮಟ್ಟಿಗೆ ಕಾರ್ಯಸಾಧ್ಯತೆ ಮತ್ತು ವಿಮಾನ ನಿಲ್ದಾಣಗಳ ಪ್ರಾಧಿಕಾರ ಎರಡೂ ಕಡೆ ಒದಗಿಸಿರುವ ಸೌಲಭ್ಯಗಳು ಮುಂತಾದವನ್ನು ಚರ್ಚಿಸಲಾಯಿತು ಎಂದಿದ್ದಾರೆ.
ಕಲಬುರಗಿಯಲ್ಲಿ ರಾತ್ರಿ ವೇಳೆ ವಿಮಾನ ನಿಲ್ಲಿಸುವ ಸೌಲಭ್ಯ ಸೇರಿದಂತೆ ಎಲ್ಲ ಬಗೆಯ ವಿಮಾನಗಳು ಬಂದಿಳಿಯಲು ಅನುಕೂಲವಿದೆ. ಅಲ್ಲಿಂದ ಬೆಂಗಳೂರು ಮತ್ತು ಉಳಿದ ಅನೇಕ ರಾಜ್ಯಗಳಿಗೆ ದಿನನಿತ್ಯದ ವಿಮಾನಸೇವೆ ಆರಂಭಿಸಬಹುದು ಎಂದು ವಿಮಾನ ಸಂಸ್ಥೆಗಳು ಹೇಳಿವೆ. ಮತ್ತೊಂದು ವಿಮಾನ ಸಂಸ್ಥೆಯು ನಿತ್ಯವೂ ಬೆಂಗಳೂರಿನಿಂದ ಬೆಳಿಗ್ಗೆ ಹೊತ್ತು ಬೀದರಗೆ ಮತ್ತು ಸಂಜೆ ಕಲಬುರಗಿಗೆ ವಿಮಾನಸೇವೆ ಆರಂಭಿಸಲು ಯೋಚಿಸುತ್ತಿರುವುದಾಗಿ ಹೇಳಿದೆ. ಜೊತೆಗೆ ಬೆಂಗಳೂರು-ಕಲಬುರಗಿ-ಹೈದರಾಬಾದ್-ಬೆಂಗಳೂರು ಮಾರ್ಗವಾಗಿ ಸೇವೆ ಆರಂಭಿಸುವ ಸಾಧ್ಯತೆಯನ್ನೂ ಪರಿಶೀಲಿಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.
ಮುಖ್ಯವಾಗಿ ವಿಮಾನಯಾನ ಸಂಸ್ಥೆಗಳು ವಿಮಾನಸೇವೆ ವಾಣಿಜ್ಯ ದೃಷ್ಟಿಯಿಂದ ಎಷ್ಟು ಲಾಭದಾಯಕ ಎನ್ನುವುದನ್ನು ನೋಡುತ್ತವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನಯಾನ ಸೇವೆ ಲಭ್ಯವಾದರೆ ಆರ್ಥಿಕ ಚಟುವಟಿಕೆಗಳು ಗರಿಗೆದರಬಹುದು ಎನ್ನುವ ಲೆಕ್ಕಾಚಾರವಿದೆ ಎಂದು ಪಾಟೀಲ ಹೇಳಿದ್ದಾರೆ. ಇಂಡಿಗೋ, ಏರ್ ಇಂಡಿಯಾ, ಅಲಯನ್ಸ್ ಏರ್, ಸ್ಟಾರ್ ಏರ್, ಆಕಾಶ ಏರ್ ಸಂಸ್ಥೆಯ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಆರ್.ವಿಶಾಲ್ ಹಾಗೂ ಕೆಎಸ್ ಐಐಡಿಸಿ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್ ಚೌಧರಿ ಭಾಗವಹಿಸಿದ್ದರು.
-
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು













Click it and Unblock the Notifications