Railway News: ಡಿ.10ರಿಂದ ಜ.29ರವರೆಗೆ ಬೆಂಗಳೂರು-ಮುರುಡೇಶ್ವರಕ್ಕೆ ವಿಶೇಷ ರೈಲು ಸಂಚಾರ
ಬೆಂಗಳೂರು, ಡಿಸೆಂಬರ್ 08: ರಾಜ್ಯ ರಾಜಧಾನಿ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಕರಾವಳಿಯ ಮುರುಡೇಶ್ವರಕ್ಕೆ ಮತ್ತು ಮುರುಡೇಶ್ವರ- ಯಶವಂತಪುರಕ್ಕೆ ವಾರಕ್ಕೆ ಒಂದು ಬಾರಿ ವಿಶೇಷ ರೈಲುಗಳು ಸಂಚರಿಸಲಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.
ಪ್ರಯಾಣಿಕರ ಒತ್ತಾಯದ ಮೇರೆಗೆ ನೈರುತ್ಯ ರೈಲ್ವೆ ಇಲಾಖೆ ವಾರದಲ್ಲಿ ಒಮ್ಮೆಯಂತೆ ಇದೇ ಡಿಸೆಂಬರ್ 10ರಿಂದ ಜನೇವರಿ 29ರವರೆಗೆ ಬೆಂಗಳೂರು-ಮುರುಡೇಶ್ವರ ಸಾಪ್ತಾಹಿಕ ರೈಲು (ರೈಲು ಸಂಖ್ಯೆ - 06563) ಓಡಿಸಲು ನಿರ್ಧರಿಸಿದೆ. ಅದರ ವೇಳಾಪಟ್ಟಿ, ಮಾರ್ಗಗಳು, ನಿಲುಗಡೆ ಕುರಿತು ಇಲ್ಲಿ ತಿಳಿದುಕೊಳ್ಳಬಹುದು.
ಈ ರೈಲು ನಿಗದಿತ ಅವಧಿಯಲ್ಲಿ ಬರುವ ಪ್ರತಿ ಶನಿವಾರ ರಾತ್ರಿ 11.55 ಗಂಟೆಗೆ ಯಶವಂತಪುರ ರೈಲು ನಿಲ್ದಾಣದಿಂದ ಹೊರಡಲಿದೆ. ಮರುದಿನ ಭಾನುವಾರ ಮಧ್ಯಾಹ್ನ ಸುಮಾರು 12.55ಕ್ಕೆ ಮುರುಡೇಶ್ವರ ತಲುಪುತ್ತದೆ. ಈ ರೀತಿ ಸಾಪ್ತಾಹಿಕ ರೈಲು ಜನವರಿ 29ರವರೆಗೆ ಒಟ್ಟು ಎಂಟು ಭಾರಿ ಸಂಚರಿಸಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಯಶವಂತಪುರದಿಂದ ಹೊರಡುವ ಈ ರೈಲು ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ ಮಾರ್ಗವಾಗಿ ಸಾಗಿ ಮುರುಡೇಶ್ವರ ತಲುಪಲಿದೆ. ಈ ಪ್ರತಿ ನಿಲ್ದಾಣಗಳಲ್ಲಿಯೂ ನಿಲುಗಡೆ ರೈಲಿಗೆ ಇರಲಿದೆ.
ಮರಳಿ ಮುರುಡೇಶ್ವರದಿಂದ ಇದೇ ಮಾರ್ಗವಾಗಿ ರೈಲು (ರೈಲು ಸಂಖ್ಯೆ -06564) ಡಿಸೆಂಬರ್ 11ರಿಂದ ಜನವರಿ 29ರವರೆಗೆ ಪ್ರತಿ ಭಾನುವಾರ ಮಧ್ಯಾಹ್ನ 1.30ಕ್ಕೆ ಹೊರಡಲಿದೆ. ಮರುದಿನ ಸೋಮವಾರ ಬೆಳಗ್ಗೆ 4 ಗಂಟೆಗೆ ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿದೆ.
ರೈಲಿನ ವಿಶೇಷತೆ ಏನು?
ಹವಾನಿಯಂತ್ರಿತ ಎರಡನೇ ದರ್ಜೆಯ ಒಂದು ಬೋಗಿ, ಹವಾನಿಯಂತ್ರಿತ ಮೂರನೇ ದರ್ಜೆಯ ಎರಡು ಬೋಗಿಗಳು, ಏಳು ಸ್ಲೀಪರ್ ಕ್ಲಾಸ್, ನಾಲ್ಕು ದ್ವಿತೀಯ ದರ್ಜೆ ಸಾಮಾನ್ಯ ಬೋಗಿಗಳು ಸೇರಿದಂತೆ ಒಟ್ಟು 16 ಬೋಗಿಗಳನ್ನು ಈ ರೈಲು ಹೊಂದಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Indian Railway: ಬಣ್ಣದಿಂದಲೇ ರೈಲುಗಳ ವ್ಯತ್ಯಾಸ ಗುರುತಿಸುವುದು ಹೇಗೆ? -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್












Click it and Unblock the Notifications