Railway News: ಡಿ.10ರಿಂದ ಜ.29ರವರೆಗೆ ಬೆಂಗಳೂರು-ಮುರುಡೇಶ್ವರಕ್ಕೆ ವಿಶೇಷ ರೈಲು ಸಂಚಾರ
ಬೆಂಗಳೂರು, ಡಿಸೆಂಬರ್ 08: ರಾಜ್ಯ ರಾಜಧಾನಿ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಕರಾವಳಿಯ ಮುರುಡೇಶ್ವರಕ್ಕೆ ಮತ್ತು ಮುರುಡೇಶ್ವರ- ಯಶವಂತಪುರಕ್ಕೆ ವಾರಕ್ಕೆ ಒಂದು ಬಾರಿ ವಿಶೇಷ ರೈಲುಗಳು ಸಂಚರಿಸಲಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.
ಪ್ರಯಾಣಿಕರ ಒತ್ತಾಯದ ಮೇರೆಗೆ ನೈರುತ್ಯ ರೈಲ್ವೆ ಇಲಾಖೆ ವಾರದಲ್ಲಿ ಒಮ್ಮೆಯಂತೆ ಇದೇ ಡಿಸೆಂಬರ್ 10ರಿಂದ ಜನೇವರಿ 29ರವರೆಗೆ ಬೆಂಗಳೂರು-ಮುರುಡೇಶ್ವರ ಸಾಪ್ತಾಹಿಕ ರೈಲು (ರೈಲು ಸಂಖ್ಯೆ - 06563) ಓಡಿಸಲು ನಿರ್ಧರಿಸಿದೆ. ಅದರ ವೇಳಾಪಟ್ಟಿ, ಮಾರ್ಗಗಳು, ನಿಲುಗಡೆ ಕುರಿತು ಇಲ್ಲಿ ತಿಳಿದುಕೊಳ್ಳಬಹುದು.
ಈ ರೈಲು ನಿಗದಿತ ಅವಧಿಯಲ್ಲಿ ಬರುವ ಪ್ರತಿ ಶನಿವಾರ ರಾತ್ರಿ 11.55 ಗಂಟೆಗೆ ಯಶವಂತಪುರ ರೈಲು ನಿಲ್ದಾಣದಿಂದ ಹೊರಡಲಿದೆ. ಮರುದಿನ ಭಾನುವಾರ ಮಧ್ಯಾಹ್ನ ಸುಮಾರು 12.55ಕ್ಕೆ ಮುರುಡೇಶ್ವರ ತಲುಪುತ್ತದೆ. ಈ ರೀತಿ ಸಾಪ್ತಾಹಿಕ ರೈಲು ಜನವರಿ 29ರವರೆಗೆ ಒಟ್ಟು ಎಂಟು ಭಾರಿ ಸಂಚರಿಸಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಯಶವಂತಪುರದಿಂದ ಹೊರಡುವ ಈ ರೈಲು ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ ಮಾರ್ಗವಾಗಿ ಸಾಗಿ ಮುರುಡೇಶ್ವರ ತಲುಪಲಿದೆ. ಈ ಪ್ರತಿ ನಿಲ್ದಾಣಗಳಲ್ಲಿಯೂ ನಿಲುಗಡೆ ರೈಲಿಗೆ ಇರಲಿದೆ.
ಮರಳಿ ಮುರುಡೇಶ್ವರದಿಂದ ಇದೇ ಮಾರ್ಗವಾಗಿ ರೈಲು (ರೈಲು ಸಂಖ್ಯೆ -06564) ಡಿಸೆಂಬರ್ 11ರಿಂದ ಜನವರಿ 29ರವರೆಗೆ ಪ್ರತಿ ಭಾನುವಾರ ಮಧ್ಯಾಹ್ನ 1.30ಕ್ಕೆ ಹೊರಡಲಿದೆ. ಮರುದಿನ ಸೋಮವಾರ ಬೆಳಗ್ಗೆ 4 ಗಂಟೆಗೆ ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿದೆ.
ರೈಲಿನ ವಿಶೇಷತೆ ಏನು?
ಹವಾನಿಯಂತ್ರಿತ ಎರಡನೇ ದರ್ಜೆಯ ಒಂದು ಬೋಗಿ, ಹವಾನಿಯಂತ್ರಿತ ಮೂರನೇ ದರ್ಜೆಯ ಎರಡು ಬೋಗಿಗಳು, ಏಳು ಸ್ಲೀಪರ್ ಕ್ಲಾಸ್, ನಾಲ್ಕು ದ್ವಿತೀಯ ದರ್ಜೆ ಸಾಮಾನ್ಯ ಬೋಗಿಗಳು ಸೇರಿದಂತೆ ಒಟ್ಟು 16 ಬೋಗಿಗಳನ್ನು ಈ ರೈಲು ಹೊಂದಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ












Click it and Unblock the Notifications