ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ: ಬೆಂಗಳೂರು ವಿಶ್ವವಿದ್ಯಾಲಯ ಪಠ್ಯದಲ್ಲಿ ಅಪ್ಪು ಜೀವನ ಪಾಠ ಸೇರ್ಪಡೆ
ಬೆಂಗಳೂರು, ಡಿಸೆಂಬರ್ 22: ಕರ್ನಾಟಕ ರತ್ನ ದಿ.ಡಾ.ಪುನೀತ್ ರಾಜಕುಮಾರ್ ಅಭಿಮಾನಿಗಳ ಆಸೆಯಂತೆ ಕನ್ನಡದ ಭಾಷಾ ಪಠ್ಯ ಪುಸ್ತಕದಲ್ಲಿ ಅಳವಡಿಸಲಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯ ಪಠ್ಯ ಪುಸ್ತಕದಲ್ಲಿ ಪುನೀತ್ ರಾಜ್ಕುಮಾರ್ ಅವರ ಪರಿಪೂರ್ಣ ಜೀವನದ ಆಯ್ದ ಭಾಗವನ್ನು ಅಳವಡಿಸಲಾಗಿದೆ. ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಮ್ಮನ್ನಗಲಿ ಸರಿಸುಮಾರು 14ತಿಂಗಳು ಕಳೆದಿವೆ. ಅಪ್ಪು ಅವರ ಜೀವನದ ವಿವರವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಈ ಸಂಬಂಧ ಪುನೀತ್ ಅಭಿಮಾನಿ ಸಂಘಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದವು. ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದ್ದರು.
ಅಭಿಮಾನಿಗಳ ಆಸೆ ಈಗ ನೆರವೇರಿದೆ. ಬೆಂಗಳೂರು ವಿಶ್ವವಿದ್ಯಾಲಯವು ತನ್ನ ಬಿಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯ 'ವಾಣಿಜ್ಯ ಕನ್ನಡ 3' ರಲ್ಲಿ ಪುನೀತ್ ಅವರ ಜೀವನದ ಆಯ್ದ ಭಾಗವನ್ನು ಪಠ್ಯಕ್ಕೆ ಅಳವಡಿಸಿಕೊಂಡಿದೆ.

'ಲೋಹಿತ್ ಎಂಬ ಮರಿಮುದ್ದು' ಬಳಕೆ
ಈ ಹಿಂದೆ ಪರ್ತಕರ್ತ ಡಾ. ಶರಣು ಹುಲ್ಲೂರು ಅವರು ಬರೆದಿದ್ದ ಸಾವಣ್ಣ ಪ್ರಕಾಶನ ಹೊರ ತಂದಿರುವ 'ನೀನೇ ರಾಜಕುಮಾರ' ಕೃತಿಯ ಒಂದು ಅಧ್ಯಾಯವಾದ 'ಲೋಹಿತ್ ಎಂಬ ಮರಿಮುದ್ದು' ಭಾಗವನ್ನು ಬೆಂಗಳೂರು ವಿಶ್ವವಿದ್ಯಾಲಯ ತನ್ನ ಪದವಿ ಪಠ್ಯದಲ್ಲಿ ಬಳಸಿಕೊಂಡಿದೆ.
ಡಾ. ಮುನಿಯಪ್ಪ ಎಂಬುವವರು ಈ ಪಠ್ಯಪುಸ್ತಕದ ಪ್ರಧಾನ ಸಂಪಾದಕರಾಗಿದ್ದಾರೆ. ಡಾ. ಅಮರೇಂದ್ರ ಶೆಟ್ಟಿ ಆರ್, ಡಾ.ಕ.ನಿಂ. ಹೊಯ್ಸಳಾದಿತ್ಯ, ಡಾ. ಶಿವರಾಜ ಬಿ.ಇ ಮತ್ತು ಡಾ.ಬಿ.ಆರ್. ರಘುನಂದನ್ ಅವರು ಪಠ್ಯದ ಸಂಪಾದಕರಾಗಿದ್ದಾರೆ. ಪ್ರಸಕ್ತ ವರ್ಷದ ಬಿಕಾಂ ಪದವಿ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳು ಕನ್ನಡ ಭಾಷಾ ಪಠ್ಯದಲ್ಲಿ ಪುನೀತ್ ಅವರ ಬಾಲ್ಯವನ್ನು ತಿಳಿದುಕೊಳ್ಳಲಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ 'ನೀನೇ ರಾಜಕುಮಾರ' ಪುಸ್ತಕದ ನಾಲ್ಕನೇ ಆವೃತ್ತಿಯನ್ನು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಬಿಡುಗಡೆ ಮಾಡಿದ್ದರು. ಅದು ಕನ್ನಡದಲ್ಲಿ ಅತೀ ಹೆಚ್ಚು ಮಾರಾಟ ಕಂಡ ಬಯೋಗ್ರಫಿ ಎನ್ನುವ ದಾಖಲೆಗೂ ಈ ಪುಸ್ತಕ ಪಾತ್ರವಾಗಿದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications