Bengaluru Weather: ನಗರದಲ್ಲಿ 32°C ತಾಪಮಾನ ದಾಖಲು, ರಾಜ್ಯಾದ್ಯಂತ ಬಿಸಿಲು ಏರಿಕೆ ಮುನ್ಸೂಚನೆ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾಗುವ, ಅತ್ಯಧಿಕ ತಾಪಮಾನ ದಾಖಲಾಗುವ ಮುನ್ಸೂಚನೆ ಸಿಕ್ಕಿದೆ. ಈ ಮಾತಿಗೆ ಪೂರಕೆವೆಂಬಂತೆ ನೆನ್ನೆ ಸಂಜೆ ನಗರದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಈ ಬೇಸಿಗೆಯಲ್ಲಿ ಈವರೆಗಿನ ಗರಿಷ್ಠ ಉಷ್ಣಾಂಶ ಎನ್ನಲಾಗಿದೆ. ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ನಲ್ಲಿ ಬೆಂಗಳೂರ ಸೇರಿ ರಾಜ್ಯದಲ್ಲಿ ಬಿಸಿಲು ಇನ್ನಷ್ಟು ಏರಿಕೆ ಆಗುವ ನಿರೀಕ್ಷೆ ಇದೆ.
ನಗರದ ಕೆಲವೆಡೆ ಬೆಳಗ್ಗೆ ಮಂಜು ಕವಿದಿದೆ. ಸಂಜೆ ನಂತರ ತಂಪು ಗಾಳಿ ಕಂಡು ಬರುತ್ತಿದ್ದು, ಹಗಲು ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದೆ. ಇದು ಕ್ರಮೇಣ ಏರಿಕೆ ಆಗಲಿದೆ. ಮುಂದಿನ 5-7 ದಿನ ಬೆಂಗಳೂರಿನಲ್ಲಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರದ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ.ಎಸ್.ಪುವಿಯರಸನ್ ಅವರು ತಿಳಿಸಿದ್ದಾರೆ.

ಬೆಂಗಳೂರು ಸೇರಿ ವಿವಿಧೆಡೆ ತಾಪಮಾನ ಏರಿಕೆ
ಮಂಗಳವಾರ ಸಂಜೆ ಬೆಂಗಳೂರು ನಗರ 29.9 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ (KIAL) 32.2 ಡಿಗ್ರಿ ಸೆಲ್ಸಿಯಸ್ ಮತ್ತು ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ 29.9 ಗರಿಷ್ಠ ತಾಪಮಾನ ಕಂಡು ಬಂದಿದೆ. ಬೆಂಗಳೂರು ಮಾತ್ರವಲ್ಲದೇ ರಾಜ್ಯದ ವಿವಿಧೆಡೆ ತಾಪಮಾನ ಪ್ರಮಾಣದ ಏರಿಕೆ ಆಗುತ್ತಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಹಾಗೂ ಉತ್ತರ ಕರ್ನಾಟಕದ ಭಾಗದಲ್ಲಿ ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆ ಕಂಡು ಬರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಬೆಳಗಾವಿ, ಹಾವೇರಿ, ರಾಯಚೂರು, ಕಲಬುರಗಿ ಸೇರಿ ಎಲ್ಲೆಡೆ ಒಣಹವೆ ಮುಂದುವರಿಯಲಿದೆ.
ಕೆಲವೆಡೆ ರಾಜ್ಯದ ಗರಿಷ್ಠ ತಾಪಮಾನ ದಾಖಲು
ಕರ್ನಾಟಕದಲ್ಲಿ ಅತೀ ಗರಿಷ್ಠ ತಾಪಮಾನ ಕಲಬುರಗಿಯಲ್ಲಿ ಮತ್ತು ಬಳ್ಳಾರಿ (AWAS) ನಲ್ಲಿ ತಲಾ 34 ಡಿಗ್ರಿ ಸೆಲ್ಸಿಯಸ್, , ಕಾರವಾರದಲ್ಲಿ 33 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉಳಿದಂತೆ ಶಿವಮೊಗ್ಗ, ದಾವಣಗೆರೆ, ಮಂಗಳೂರಿನ ಶಕ್ತಿ ನಗರ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ತಲಾ 32 ಡಿಗ್ರಿ ಸೆಲ್ಸಿಯಸ್, ಮೈಸೂರು, ಚಿತ್ರದುರ್ಗ, ಹಾವೇರಿ, ಬೀದರ್, ಬೆಳಗಾವಿ ಏರ್ಪೋರ್ಟ್, ಮಂಗಳೂರು ಏರ್ಪೋರ್ಟ್ ಮತ್ತು ಹೊನ್ನಾವರದಲ್ಲಿ ತಲಾ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಕಂಡು ಬಂದಿದೆ. ಉಳಿದ ಜಿಲ್ಲೆಗಳಲ್ಲೂ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ನಷ್ಟಿದೆ.
ಹವಾಮಾನ ವೈಪರೀತ್ಯ ವರದಿ
ಹವಾಮಾನ ವೈಪರೀತ್ಯ ನೋಡುವುದಾದರೆ, ಪೂರ್ವ ಸಮಭಾಜಕ ಹಿಂದೂ ಮಹಾಸಾಗರ ಮತ್ತು ಅದಕ್ಕೆ ಹೊಂದಿಕೊಂಡಿರುವ ಆಗ್ನೆಯ ಬಂಗಾಳ ಕೊಲ್ಲಿ ಭಾಗದಲ್ಲಿ ವಾಯು ಚಂಡಮಾರುತದ ಪರಿಚಲನೆ ಉಂಟಾಗಿದೆ. ಇದು ಸಮುದ್ರ ಮಟ್ಟದಿಂದ ಸರಾಸರಿ 3.1 ಕಿ.ಮೀ ಎತ್ತರದಲ್ಲಿದೆ. ಮಧ್ಯ ಕೇರಳ ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications