ಕರೆಂಟ್ ಬಿಲ್ ಇನ್ನು ಕಟ್ಟಿಲ್ಲ ದಂಡ ಕಟ್ಟಬೇಕು ಅಂತ ಯೋಚಿಸ್ತಿದ್ದಿರಾ?; ಭಯ ಬೇಡ ದಂಡ ಕಟ್ಟೋ ಹಾಗಿಲ್ಲ!
ಬೆಂಗಳೂರು, ಮಾರ್ಚ್ 23: ನಿಗದಿತ ದಿನಾಂಕದ ಮೊದಲು ಮಾರ್ಚ್ನಲ್ಲಿ ವಿದ್ಯುತ್ ಬಿಲ್ ಪಾವತಿಸಲು ಸಾಧ್ಯವಾಗಿಲ್ಲ ಅಂದರೆ ಚಿಂತಿಸಬೇಡಿ. ಏಕೆಂದರೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಯಾವುದೇ ವಿಳಂಬ ಶುಲ್ಕವನ್ನು ವಿಧಿಸದಿರಲು ಮತ್ತು ಈ ತಿಂಗಳವರೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸದಿರಲು ನಿರ್ಧರಿಸಿದೆ.
ಮಾರ್ಚ್ 10 ರಿಂದ ಮಾರ್ಚ್ 19 ರವರೆಗೆ ಬೆಸ್ಕಾಂ ಸಾಫ್ಟ್ವೇರ್ ಅಪ್ಡೇಟ್ ಮಾಡುತ್ತಿದ್ದ ಕಾರಣ ಕರ್ನಾಟಕದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಮ್) ಆನ್ಲೈನ್ ಸೇವೆಗಳು ಲಭ್ಯವಿರಲಿಲ್ಲ. ಮಾರ್ಚ್ 20 ರಿಂದ ಈ ಸೇವೆಗಳು ಪುನರಾರಂಭಗೊಂಡಿದೆ. ಆದರೂ, ಆನ್ಲೈನ್ ಪೋರ್ಟಲ್ನಲ್ಲಿನ ದೋಷಗಳಿಂದಾಗಿ ಅನೇಕ ಗ್ರಾಹಕರು ತಮ್ಮ ಬಿಲ್ಗಳನ್ನು ಮಾರ್ಚ್ 20 ಮತ್ತು ಮಾರ್ಚ್ 21 ರಂದು ಪಾವತಿಸಲು ಹೆಣಗಾಡಿದ್ದಾರೆ.

ವಿದ್ಯುತ್ ಬಿಲ್ ಪಾವತಿಸಲು ಮಾರ್ಚ್ 20 ಕೊನೆಯ ದಿನಾಂಕವಾಗಿರುವುದರಿಂದ ಬೆಸ್ಕಾಂ ಕಚೇರಿಗಳ ಹೊರಗೆ ದೊಡ್ಡ ಸರತಿ ಸಾಲುಗಳು ಕಂಡುಬಂದಿವೆ. ಅಲ್ಲಿಯೂ ತಾಂತ್ರಿಕ ದೋಷದಿಂದ ಕೆಲ ಗ್ರಾಹಕರಿಗೆ ಪಾವತಿ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ಹೀಗಾಗಿಯೇ ವಿದ್ಯುತ್ ಸರಬರಾಜು ಕಂಪನಿ ಈ ತಿಂಗಳ ವಿದ್ಯುತ್ ಬಿಲ್ ವಿಳಂಬ ಪಾವತಿಗೆ ದಂಡ ವಿಧಿಸುತ್ತಿಲ್ಲ.
"ಕರ್ನಾಟಕದಾದ್ಯಂತ, ಎಲ್ಲಾ ನಗರ ಮುನ್ಸಿಪಲ್ ಕೌನ್ಸಿಲ್ (CMC) ಮತ್ತು ಟೌನ್ ಮುನ್ಸಿಪಲ್ ಕೌನ್ಸಿಲ್ (TMC) ಮಿತಿಗಳಲ್ಲಿ, ಮೂಲಭೂತವಾಗಿ ನಗರ ಪ್ರದೇಶಗಳು, ಬಿಲ್ಗಳ ವಿಳಂಬ ಪಾವತಿಗೆ ಯಾವುದೇ ದಂಡವಿರುವುದಿಲ್ಲ. ಇದು ಗ್ರಾಮೀಣ ಗ್ರಾಹಕರಿಗೆ ಅನ್ವಯಿಸುವುದಿಲ್ಲ. ಈ ನಿಯಮವು ಈ ತಿಂಗಳಿಗೆ ಮಾತ್ರ ಅನ್ವಯಿಸುತ್ತದೆ" ಎಂದು ಬೆಸ್ಕಾಂನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಳಂಬ ವಿದ್ಯುತ್ ಬಿಲ್ ಪಾವತಿಗಿಲ್ಲ, ಬಡ್ಡಿ
ಈ ಸಂಬಂಧ ಬೆಸ್ಕಾಂ ಕೂಡ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಸಲುವಾಗಿ ಎಲ್ಲಾ ಎಸ್ಕಾಂಗಳ ಆನ್ ಲೈನ್ ವಿದ್ಯುತ್ ಸೇವೆಗಳು ಸ್ಥಗಿತಗೊಂಡಿದ್ದು, ಇದೀಗ ಪುನಾರಂಭಗೊಂಡಿದೆ. ಈ ತಿಂಗಳ 30ರೊಳಗೆ ಎಲ್ಲಾ ಆನ್ ಲೈನ್ ಸೇವೆಗಳು ಯಥಾಸ್ಥಿತಿಗೆ ಬರಲಿವೆ ಎಂದು ಇಂಧನ ಇಲಾಖೆ ತಿಳಿಸಿದೆ.
ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಅದು ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯ ನಿರ್ವಹಣೆಯಲ್ಲಿ ಸ್ವಲ್ಪ ವ್ಯತ್ಯಯ ಉಂಟಾಗಲಿದೆ ಎಂದು ಇಂಧನ ಇಲಾಖೆ ಸ್ಪಷ್ಟಪಡಿಸಿದೆ.
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications