Get Updates
Get notified of breaking news, exclusive insights, and must-see stories!

Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (BESCOM) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಪ್ರಯುಕ್ತ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಮಾರ್ಚ್ 22 ರಿಂದ 25ರವರೆಗೆ ಬೆಳಗ್ಗೆ 10ಗಂಟೆಯಿಂದ ವಿದ್ಯುತ್ ಸರಬರಾಜಿನಲ್ಲಿ ಕೊರತೆ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಾಳೆ ಮಾರ್ಚ್ 22ರಂದು ಭಾನುವಾರ ಕೆಲವು ಪ್ರದೇಶಗಳಲ್ಲಿ ನಿರ್ವಹಣೆ ಹಾಗೂ ಲೈನ್ ಅಪ್‌ಗ್ರೇಡ್ ಕಾಮಗಾರಿಗಳು ನಡೆಯಲಿವೆ. ಹೀಗಾಗಿ ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ಮನೆಗಳ ಜೊತೆಗೆ ಕೈಗಾರಿಕೆ ಪ್ರದೇಶಗಳು ವಿದ್ಯುತ್ ಅಡಚಣೆ ಎದುರಿಸಲಿವೆ.

BESCOM Power Cut

ನಂತರ ಮಾರ್ಚ್ 23ರಿಂದ 25ರವರೆಗೆ ಹೆಚ್‌ಟಿ ರೀಕಂಡಕ್ಟರಿಂಗ್ ಕಾಮಗಾರಿ ನಡೆಸುವ ಕಾರಣಕ್ಕೆ, ಹಲವು ಬಡಾವಣೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಇಡೀದಿನ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Power Tariff: ಕರ್ನಾಟಕದ ಜನರಿಗೆ ವಿದ್ಯುತ್ ದರ ಏರಿಕೆ ಶಾಕ್? ಏಪ್ರಿಲ್ 1ರಿಂದ ಹೆಚ್ಚಳಕ್ಕೆ ಎಸ್ಕಾಂಗಳ ಪ್ರಸ್ತಾವನೆ
Power Tariff: ಕರ್ನಾಟಕದ ಜನರಿಗೆ ವಿದ್ಯುತ್ ದರ ಏರಿಕೆ ಶಾಕ್? ಏಪ್ರಿಲ್ 1ರಿಂದ ಹೆಚ್ಚಳಕ್ಕೆ ಎಸ್ಕಾಂಗಳ ಪ್ರಸ್ತಾವನೆ

ಭಾನುವಾರ (ಮಾ. 22) ವಿದ್ಯುತ್ ಕಡಿತ ಎಲ್ಲೆಲ್ಲಿ?

ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಬೂದಿಪುರ, ನಲ್ಲಿಕಟ್ಟೆ, ತಾಳ್ಯ, ಮತ್ತಿಘಟ್ಟ, ಕೆರೆಯಾಗಲಹಳ್ಳಿ, ಚೌಡಗೊಂಡನಹಳ್ಳಿ, ತೇಕಲವಟ್ಟಿ, ಬಿ.ಆ‌ರ್.ಗುಡಿ, ಚಾಮುಂಡೇಶ್ವರಿ, ಎಚ್.ಡಿ.ಪುರ, ತಾಳ್ಯ ಕಾವಲು, ಉಪ್ಪರಿಗೇನಹಳ್ಳಿ, ಮಹದೇವನಕಟ್ಟೆ, ದೊಡ್ಡಾಪುರ, ಕಕ್ಕೇರು, ಹೋಸೂರು, ಜುಂಜಪ್ಪ ಮಾರ್ಗ, ಗೊಡಬನಹಾಳ್, ಬಿ.ಜಿಹಳ್ಳಿ, ಚಿತ್ರಹಳ್ಳಿ, ಮದ್ದೇರು, ಶಿವಗಂಗ, ಲಿಂಗದಹಳ್ಳಿ, ಕೇಶವಪುರ, ದಾಸಯ್ಯನಹಟ್ಟಿ, ಕೊಂಡಾಪುರ, ಆ೦ನೇಯ ದೇವಸ್ಥಾನ ಪ್ರದೇಶ, ಅನ್ನೆಹಾಳು, ವಜ್ರ ಮಾರ್ಗ, ಈಚಘಟ್ಟ, ಟಿ.ನುಲೆನೂರು, ಬಸವೇಶ್ವರ ದೇವಸ್ಥಾನ ಪ್ರದೇಶ, ಮೇಕೇನಹಟ್ಟಿ, ಕಾಟಯ್ಯನಕೆರೆ ಪ್ರದೇಶ, ನರಸಿಂಹಸ್ವಾಮಿ ದೇವಸ್ಥಾನ(ಗರಗ), ಅರಸನಘಟ್ಟ, ಕರೀಮಟ್ಟಿ, ಚಿಕ್ಕನಕಟ್ಟೆ, ಚಿಕ್ಕಹೆಮ್ಮಿಗನೂರು, ಗರಗ ಕಾವಲು, ಸಾವೇರಮ್ಮ, ಸಾದರಹಳ್ಳಿ, ಚಿಕ್ಕಂದವಾಡಿ, ಕೆ.ಎನ್.ಹಳ್ಳಿ, ತನಿಗೆಹಳ್ಳಿ, ಹರೇಕಂದವಾಡಿ, ಗುಂಜಿಗನೂರು, ರಂಗವ್ವನಹಳ್ಳಿ, ಬಿ.ದುರ್ಗ, ಐಯನಹಳ್ಳಿ, ಕಡೂರು, ಕವಲಹಟ್ಟಿ, ಹೋಸಹಳ್ಳಿ, ಗುಂಜಿಗನೂರು, ಗಾಳಿಮಾರಮ್ಮ ದೇವಸ್ಥಾನ ಪ್ರದೇಶ, ಕೋಟೇಹಾಳು, ಎಸ್.ಹೆಚ್.ಹಳ್ಳಿ, ಚಿಕ್ಕಜಾಜೂರು ಮತ್ತು ಚಿಕ್ಕಂದವಾಡಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ.

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ಬೇಗೆ: ದಾಖಲೆ ಮಟ್ಟಕ್ಕೆ ತಲುಪಿದ ವಿದ್ಯುತ್ ಬಳಕೆ; ಬೆಸ್ಕಾಂ ವ್ಯಾಪ್ತಿಯಲ್ಲಿ ಹೆಚ್ಚು ಬೇಡಿಕೆ
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ಬೇಗೆ: ದಾಖಲೆ ಮಟ್ಟಕ್ಕೆ ತಲುಪಿದ ವಿದ್ಯುತ್ ಬಳಕೆ; ಬೆಸ್ಕಾಂ ವ್ಯಾಪ್ತಿಯಲ್ಲಿ ಹೆಚ್ಚು ಬೇಡಿಕೆ

ಮಾರ್ಚ್ 23-25ರತನಕದ ವಿದ್ಯುತ್ ಸ್ಥಗಿತ ವಿವರ

ಕೋಲಾರ ವಿದ್ಯುತ್ ಉಪಕೇಂದ್ರ ವ್ಯಾಪ್ತಿಯ ಕ್ಯಾಸಂಬಳ್ಳಿ ವಿದ್ಯುತ್ ಫೀಡರ್‌ಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ. ಕ್ಯಾಸಂಬಳ್ಳಿ 2-02, 2-0325-04, 2-11 ಮತ್ತು ಎಫ್-12 ಫೀಡರ್‌ಗಳು ಹಾಗೂ ವಿದ್ಯುತ್ ಉಪಕೇಂದ್ರ ವ್ಯಾಪ್ತಿಯಲ್ಲಿರುವ ಪ್ರದೇಶಗಳು ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಎದುರಿಸಲಿವೆ.

ಈ ತಾತ್ಕಾಲಿಕ ತೊಂದರೆಗೆ ಸಹಕರಿಸುವಂತೆ ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದರು. ವಿದ್ಯುತ್ ಸಂಬಂಧಿತ ಗೃಹ ಹಾಗೂ ಕೈಗಾರಿಕೆ ಕಾರ್ಯಗಳನ್ನು ಮುಂಚಿತವಾಗಿ ಅಥವಾ ಮರಳಿ ವಿದ್ಯುತ್ ಬಂದ ಬಳಿಕ ಮಾಡಿಕೊಳ್ಳಲು ಪ್ಲಾನ್ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಅಧಿಕೃತ ಬೆಸ್ಕಾಂ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಸಹಾಯವಾಣಿ 1912ಗೆ ಕರೆ ಮಾಡುವಂತೆ ಅಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+