Power Supply: ವಿದ್ಯುತ್ ಸಂಬಂಧಿ ದೂರುಗಳಿಗೆ ವಾಟ್ಸಾಪ್ ಸಹಾಯವಾಣಿ: BESCOM Updates
ಬೆಂಗಳೂರು, ಏಪ್ರಿಲ್ 06: ಪೂರ್ವ ಮುಂಗಾರು ಮಳೆ ಚುರುಕುಗೊಂಡಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗ್ರಾಮೀಣ ಭಾಗಗಳಲ್ಲಿ ಆಗಾಗ ವಿದ್ಯುತ್ ವ್ಯತ್ಯಯವಾಗುತ್ತದೆ. ಈ ಕಾರಣದಿಂದ ಜನರು ಹಗಲು ರಾತ್ರಿಯೆನ್ನದೇ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ನೀವು ಈ ಸಮಸ್ಯೆ ಎದುರಿಸುತ್ತಿದ್ದರೆ ಅದಕ್ಕೆ ಪರಿಹಾರವನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ನೀಡಿದೆ.
ಸಾರ್ವಜನಿಕರು ನಿಮ್ಮ ವಿದ್ಯುತ್ ಸಂಬಂಧಿತ ದೂರುಗಳನ್ನು ದಾಖಲಿಸುವುದು, ಸಮಸ್ಯೆಗೆ ಉಂಟಾದ ಪರಿಹಾರ, ಇತರ ಮಾಹಿತಿ ಪಡೆದುದು ಸುಲಭ. ಇದಕ್ಕಾಗಿ ಬೆಸ್ಕಾಂ ರಾಜ್ಯದಲ್ಲಿ ಜಿಲ್ಲಾವಾರು ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಿದೆ. ಈ ಸಂಖ್ಯೆಗಳ ಸಹಾಯದಿಂದ ನೀವು ದೂರುಗಳನ್ನು ದಾಖಲಿಸಬಹುದೆಂದು ಬೆಸ್ಕಾಂ ಪ್ರಕಟಣೆ ಭಾನುವಾರ ಮಾಹಿತಿ ನೀಡಿದೆ.

ಬೆಸ್ಕಾಂ ಸಂಖ್ಯೆಗಳು ಯಾವುವು, ಪಟ್ಟಿ ಇಲ್ಲಿದೆ ನೋಡಿ
ಬೆಂಗಳೂರು ನಗರ ವಾಸಿಗಳು ಗಮನಿಸಿ
ಬೆಂಗಳೂರು ದಕ್ಷಿಣ ವೃತ್ತ : 8277884011
ಬೆಂಗಳೂರು ಪಶ್ಚಿಮ ವೃತ್ತ : 8277884012
ಬೆಂಗಳೂರು ಪೂರ್ವ ವೃತ್ತ: 8277884013
ಬೆಂಗಳೂರು ಉತ್ತರ ವೃತ್ತ : 8277884014 ಸಂಖ್ಯೆಗಳಿಗೆ ಸಂಪರ್ಕಿಸಬೇಕು.
ಜಿಲ್ಲಾವಾರು ಮಾಹಿತಿಗೆ ಗಮನಿಸಿ
ಕೋಲಾರ : 8277884015
ಚಿಕ್ಕಬಳ್ಳಾಪುರ : 8277884016
ಬಿ.ಆರ್.ಸಿ : 8277884017
ರಾಮನಗರ : 8277884018
ತುಮಕೂರು : 8277884019
ಚಿತ್ರದುರ್ಗ : 8277884020
ದಾವಣಗೆರೆ : 8277884021
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ವ್ಯಾಪ್ತಿಯ ಪ್ರತಿ ಜಿಲ್ಲೆಗಳ ವಿಶೇಷ ವಾಟ್ಸಾಪ್ ಸಹಾಯವಾಣಿ ಸಂಖ್ಯೆಗಳು, ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಫೋಟೋ, ವೀಡಿಯೊಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಿಸಿದ ವಾಟ್ಸಾಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸಿ ದೂರು ನೀಡಬೇಕು. ಅಲ್ಲಿನ ಸ್ಥಳಿಯ ಸಿಬ್ಬಂಧಿ ತ್ವರಿತ ಪರಿಹಾರ ನೀಡುತ್ತಾರೆ ಎಂದು ಬೆಸ್ಕಾಂ ಅಧಿಕಾರಿಗಳು ಗ್ರಾಹಕರಿಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಈ ವರ್ಷ ಬೇಸಿಗೆಯಲ್ಲಿ ಅಷ್ಟಾಗಿ ನೀರಿನ ಕೊರತೆ ಕಂಡು ಬಂದಿಲ್ಲ ಎನ್ನಲಾಗಿದೆ. ಹೀಗಿದ್ದರು ಸರ್ಕಾರ, ಹಳ್ಳಿ, ಸಿಟಿ ಎನ್ನದೇ ಲೋಡ್ ಶೆಡ್ಡಿಂಗ್ ಮಾಡುತ್ತಿದೆ. ಇದಲ್ಲದೇ ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗವು (KERC) ಪ್ರಸ್ತಕ್ತ ವರ್ಷದಿಂದ ವಿದ್ಯುತ್ ಪ್ರತಿ ಯೂನಿಟ್ ದರ 36 ಪೈಸೆ ಹೆಚ್ಚಿಸಿದೆ. ಇದರ ಬೆನ್ನಲ್ಲೆ ಬಿರುಗಾಳಿ ಮಳೆಗೆ, ವಿದ್ಯುತ್ ಕಂಬ ಬೀಳುವುದು, ಟಿಸಿ ಸುಡುವುದು. ಪದೇ ಪದೇ ಕರೆಂಟ್ ಕಟ್ ಹಾಗೂ ಇನ್ನಿತರ ವಿದ್ಯುತ್ ಸರಬರಾಜು ಸಂಬಂಧ ತೊಂದರೆ ಆಗುತ್ತಿವೆ. ಇದರಿಂದ ತಪ್ಪಿಸಿಕೊಳ್ಳಲು, ಸೂಕ್ತ ಪರಿಹಾರ ತ್ವರಿತವಾಗಿ ಪಡೆಯಲು ನಾಗರಿಕರು ಈ ಮೇಲಿನ ಸಂಖ್ಯೆಗೆ ಸಮಸ್ಯೆ, ದೂರು ವಾಟ್ಸಾಪ್ ಮಾಡುವಂತೆ ಬೆಸ್ಕಾಂ ಕೋರಿದೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications