ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ್ ಬಂದ್ ಕೇಂದ್ರ ಸರ್ಕಾರದ ವಿರುದ್ಧದ ಷಡ್ಯಂತ್ರ: ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 10: ಭಾರತ್ ಬಂದ್ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ನಡೆಸಿರುವ ವ್ಯವಸ್ಥಿತ ಷಡ್ಯಂತ್ರ ಎಂದು ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.

ಈ ಭಾರತ್ ಬಂದ್ ದುರುದ್ದೇಶದಿಂದ ಕೂಡಿದೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ನಡೆಸಿರುವ ಪಿತೂರಿ ಇದು. ಬಂದ್‌ ನಡೆಸುವ ಸಲುವಾಗಿ ಸರ್ಕಾರವೇ ಶಾಲಾ-ಕಾಲೇಜುಗಳಿಗೆ ರಜೆ ನೀಡಿದೆ.

LIVE: ಭಾರತ್ ಬಂದ್: ಪ್ರತಿಭಟನೆಗೆ ಹಾಜರಾದ ರಾಹುಲ್ ಗಾಂಧಿ LIVE: ಭಾರತ್ ಬಂದ್: ಪ್ರತಿಭಟನೆಗೆ ಹಾಜರಾದ ರಾಹುಲ್ ಗಾಂಧಿ

ತೈಲ ಬೆಲೆಯಲ್ಲಿ ಏಕೆ ಹೆಚ್ಚಳವಾಗಿದೆ ಎನ್ನುವುದು ಇಡೀ ಜಗತ್ತಿಗೇ ಗೊತ್ತಿದೆ. ಕೇಂದ್ರ ಸರ್ಕಾರದ ಬಗ್ಗೆ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿಸುವ ಸಲುವಾಗಿ ಬಂದ್ ಮಾಡಲಾಗುತ್ತಿದೆ. ದೇಶದ ಜನರ ದಿಕ್ಕು ತಪ್ಪಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ದೂರಿದ್ದಾರೆ.

Bharat bandh: bs yeddyurappa slams congress jds government conspiracy

ನಿವಾಸಕ್ಕೆ ಬಿಗಿ ಭದ್ರತೆ
ಭಾರತ್ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಕ್ಕೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪೆಟ್ರೋಲ್ ಬೆಲೆ ಹೆಚ್ಚಳದ ನಿಜವಾದ ಕಾರಣ, ಭಾರತ ಬಂದ್ ಯಾಕೆ ಹೇಳ್ರಣ್ಣಪೆಟ್ರೋಲ್ ಬೆಲೆ ಹೆಚ್ಚಳದ ನಿಜವಾದ ಕಾರಣ, ಭಾರತ ಬಂದ್ ಯಾಕೆ ಹೇಳ್ರಣ್ಣ

ಎಲ್ಲೆಡೆ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿರುವುದರಿಂದ ಅಹಿತಕರ ಘಟನೆಗೆ ಆಸ್ಪದ ಕೊಡದಂತೆ ಎಚ್ಚರಿಕೆ ವಹಿಸಲು ಯಡಿಯೂರಪ್ಪ ಮನೆಯ ಸುತ್ತಲೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಒಂದು ' ಭಾರತ್ ಬಂದ್' ನಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಯುವ ಹಾಗಿದ್ದರೆ!? ಒಂದು ' ಭಾರತ್ ಬಂದ್' ನಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಯುವ ಹಾಗಿದ್ದರೆ!?

ಮನೆಗೆ ಭದ್ರತೆ ಒದಗಿಸಲು ಪೊಲೀಸ್ ಸಿಬ್ಬಂದಿ ಇದ್ದರೂ, ಬಂದ್ ಕಾರಣದಿಂದ ಹೆಚ್ಚುವರಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

English summary
BJP leader BS Yeddyurappa accused Congress-JDS coalition government for supporting Bharat bandh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X