Bharat Bandh; ಶುಕ್ರವಾರ ರಸ್ತೆಗಿಳಿಯುವ ಮುನ್ನ ತಿಳಿಯಿರಿ
ಬೆಂಗಳೂರು, ಫೆಬ್ರವರಿ 15: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಮುಂದುವರೆದಿದೆ. ರೈತ ಸಂಘಟನೆಗಳು ಫೆಬ್ರವರಿ 16ರ ಶುಕ್ರವಾರ ಭಾರತ್ ಬಂದ್ಗೆ ಕರೆ ನೀಡಿವೆ. ಕರ್ನಾಟಕದಲ್ಲಿಯೂ ಸಹ ಬಂದ್ಗೆ ಬೆಂಬಲ ಘೋಷಣೆ ಮಾಡಲಾಗಿದೆ. ಆದ್ದರಿಂದ ಶುಕ್ರವಾರ ರಸ್ತೆಗೆ ಇಳಿಯುವ ಮುನ್ನ ಇದನ್ನು ತಿಳಿಯಿರಿ.
ಕುರುಬೂರು ಶಾಂತಕುಮಾರ್ ಸಂಚಾಲಕರು, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯತರ) ದಕ್ಷಿಣ ಭಾರತ, ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಕರ್ನಾಟಕ ಕರ್ನಾಟಕದಲ್ಲಿ ಬಂದ್ ನಡೆಸುವ ಕುರಿತು ಮಾಹಿತಿ ನೀಡಿದ್ದಾರೆ.

ದೆಹಲಿ, ಪಂಜಾಬ್, ಹರ್ಯಾಣ, ರಾಜಸ್ಥಾನ ಗಡಿಯಲ್ಲಿನ ರೈತರ ಮೇಲಿನ ಪೊಲೀಸ್ ದೌರ್ಜನ್ಯ ಖಂಡನೀಯ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ರೈತರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಜಾಸತ್ತಾತ್ಮಕ ಹಕ್ಕುಗಳ ಮೇಲಿನ ಯಾವುದೇ ದಾಳಿಯನ್ನು ರೈತ ಆಂದೋಲನವು ಪ್ರತಿರೋಧಿಸಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇವೆ. ರೈತರ ಸಂಘಟನೆಗಳ ದೆಹಲಿ ಚಲೋ ಮೆರವಣಿಗೆಯನ್ನು ತಡೆಯಲು ಪ್ರಭುತ್ವ ಅಧಿಕಾರ ದುರ್ಬಳಕೆ ಮಾಡಿಕೊಂಡು, ರೈತರ ಮೇಲೆ ಕೇಂದ್ರ ಸರ್ಕಾರ ನಡೆಸಿರುವ, ಲಾಠಿ ಪ್ರಹಾರ, ರಬ್ಬರ್ ಬುಲೆಟ್, ಅಶ್ರುವಾಯು ಸಿಡಿತ ಮತ್ತು ಸಾಮೂಹಿಕ ಬಂಧನವನ್ನು ಖಂಡಿಸುತೇನೆ ಎಂದು ಹೇಳಿದ್ದಾರೆ.
ಬಂದ್ಗೆ ಬೆಂಬಲ: ರೈತರ ಮೇಲೆ ನಡೆಸಿರುವ ದೌರ್ಜನ್ಯವನ್ನು ಖಂಡಿಸಲು, ದೇಶದಾದ್ಯಂತ ಪ್ರತಿಭಟಿಸಲು ಮತ್ತು ಬಂದ್ ಯಶಸ್ವಿಯಾಗಿ ನಡೆಸಲು ಎಲ್ಲಾ ಸಂಘಟನೆಗಳು ಸ್ವಯಂ ಪ್ರೇರಿತವಾಗಿ ರಾಜ್ಯಾದ್ಯಂತ ಎಲ್ಲ ರೈತ ಸಂಘಟನೆಗಳು ಫೆ. 16ರಂದು ಬೆಳಗ್ಗೆ 11 ರಿಂದ 1 ಗಂಟೆ ತನಕ ರಸ್ತೆ ಬಂದ್ ಚಳುವಳಿ ನಡೆಸಲಿವೆ. ಇದು ದೇಶದ ರೈತರ ಅಳಿವು ಉಳಿವಿನ ಪ್ರಶ್ನೆಯಾಗಿದೆ ಎಂದು ತಿಳಿಸಿದ್ದಾರೆ.
ರೈತ ಸಂಘಟನೆಗಳು ಶುಕ್ರವಾರ ಬೆಳಗ್ಗೆ 6 ರಿಂದ ಸಂಜೆ 4 ಗಂಟೆಯ ತನಕ ಬಂದ್ ಕರೆ ನೀಡಿವೆ. ಕರ್ನಾಟಕದಲ್ಲಿ ಬೆಳಗ್ಗೆ 11 ರಿಂದ 1 ಗಂಟೆ ತನಕ ರಸ್ತೆ ತಡೆ ಮಾಡಲು ತೀರ್ಮಾನಿಸಲಾಗಿದೆ. ಆದ್ದರಿಂದ ಶುಕ್ರವಾರ ಸಂಚಾರ ನಡೆಸುವ ಜನರು ರೈತರ ಪ್ರತಿಭಟನೆಯನ್ನು ಗಮನಿಸಿ ಸಂಚಾರ ನಡೆಸಬೇಕಿದೆ.
ಸರ್ಕಾರಕ್ಕೆ ಎಚ್ಚರಿಕೆ: ಕುರುಬೂರು ಶಾಂತಕುಮಾರ್, ರೈತರ ಶಾಂತಿಯುತ ಹೋರಾಟದ ಮೇಲೆ ದಾಳಿ ಮಾಡಲು ಪೊಲೀಸರು ಮತ್ತು ಸಶಸ್ತ್ರ ಭದ್ರತಾ ಪಡೆಗಳನ್ನು ಛೂ ಬಿಟ್ಟಿರುವುದು ಸರ್ಕಾರ ರೈತರ ಆಂದೋಲನ ದಮನ ಮಾಡುವ ಕಾರ್ಯವಾಗಿದೆ ಇಂತಹ ಕೆಟ್ಟ ನೀತಿಗಳಿಂದ ಸರ್ಕಾರ ಜನರ ವಿಶ್ವಾಸವನ್ನು ಕಳೆದುಕೊಂಡಿದೆ ಎಂಬುದನ್ನು ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಇದೆ. ಪ್ರತಿಯೊಂದು ವರ್ಗದ ಜನರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ಮತ್ತು ಅವರ ಜೀವನೋಪಾಯವನ್ನು ರಕ್ಷಿಸುವ ನಿರ್ದಿಷ್ಟ ಬೇಡಿಕೆಗಳನ್ನು ಪರಿಹರಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ಹೇಳಿದ್ದಾರೆ.
ರೈತರ ಸಮಸ್ಯೆಗಳನ್ನು ಬಗೆಹರಿಸಬೇಕಾದ ಸರ್ಕಾರ ಹೋರಾಟ ನಿರತ ರೈತರನ್ನು ದೇಶದ ಶತ್ರುಗಳಂತೆ ಬಿಂಬಿಸುತ್ತಿರುವುದು ಸರಿಯಲ್ಲ. ಪ್ರಜಾಸತ್ತಾತ್ಮಕ ಹಕ್ಕುಗಳ ಮೇಲಿನ ಯಾವುದೇ ದಾಳಿಯನ್ನು ರೈತ ಆಂದೋಲನವು ಪ್ರತಿರೋಧಿಸಲಿದೆ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ದೆಹಲಿಯ ರೈತ ಹೋರಾಟಕ್ಕೆ ಹೊರಟಿದ್ದ ಕರ್ನಾಟಕದ ರೈತರನ್ನು ಮಧ್ಯ ಪ್ರದೇಶದ ಭೋಪಾಲ್ನಲ್ಲಿ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯ ಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ಗೆ ಪತ್ರವನ್ನು ಬರೆದಿದ್ದಾರೆ. ರಾಜ್ಯದ ರೈತರನ್ನು ಶೀಘ್ರವೇ ಬಿಡುಗಡೆಗೊಳಿಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ.
ರೈತ ಹೋರಾಟದಲ್ಲಿ ತೊಡಗಿರುವ ರಾಜ್ಯದ ರೈತರ ಯೋಗಕ್ಷೇಮದ ಕುರಿತು ಸಿದ್ದರಾಮಯ್ಯ ಕುರುಬೂರು ಶಾಂತಕುಮಾರ್ಗೆ ಕರೆ ಮಾಡಿ ವಿಚಾರಿಸಿದ್ದಾರೆ.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications