ಭಾರತ್ ಜೋಡೋ ಯಾತ್ರೆ ಮಂಗಳವಾರವೂ ಮುಂದುವರಿಕೆ: ವದಂತಿ ನಂಬದಂತೆ ಡಿಕೆಶಿ ಸ್ಪಷ್ಟನೆ
ಬೆಂಗಳೂರು, ಅ.11: ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಮಂಗಳವಾರ (ಅ.11) ಯಾವುದೇ ಬದಲಾವಣೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಪಪಡಿಸಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಭಾರತ್ ಜೋಡೋ ಯಾತ್ರೆ ನಿಗದಿ ಆಗಿರುವಂತೆ ಮುಂದುವರಿಯಲಿದೆ, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ನಾಳೆ ಯಾತ್ರೆ ಸ್ಥಗಿತಗೊಳಿಸಿ ತೆರಳಲಿದ್ದಾರೆ ಎಂಬುದು ಕೇವಲ ವದಂತಿ. ಅವರು ಇಲ್ಲೇ ಇದ್ದು ಯಾತ್ರೆ ಮುಂದುವರಿಸುವರು ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹರ್ತಿಕೋಟೆಯಲ್ಲಿರುವ ಪಾದಯಾತ್ರೆ ತಂಡ ಮಂಗಳವಾರ ಬೆಳಗ್ಗೆ 6.30ಗೆ ಹರ್ತಿಕೋಟೆಯಿಂದ ಪ್ರಾರಂಭಿಸಿ, ಸಾಣಿಕೆರೆ ಮತ್ತ ಸಿದ್ದಾಪುರ ಮಾರ್ಗವಾಗಿ ರಾತ್ರಿ ವೇಳೆಗೆ ಚಿತ್ರದುರ್ಗ ತಲುಪಲಿದೆ.
ಮುಲಾಯಂಗೆ ಪುಷ್ಪ ನಮನ:
ಸೋಮವಾರ ನಿಧನರಾದ ಸಮಾಜವಾದಿ ಪಕ್ಷದ ಸಂಸ್ಥಾಪಕ, ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಅವರ ಭಾವಚಿತ್ರಕ್ಕೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಮಧ್ಯಪ್ರದೇಶ ಮಾಜಿ ಸಿಎಂ ದಿಗ್ವಿಜಯ್ ಸಿಂಗ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಅವರು ಚಿತ್ರದುರ್ಗದ ಹಿರಿಯೂರು ವಿಶ್ರಾಂತಿ ತಾಣದಲ್ಲಿ ಸೋಮವಾರ ಪುಷ್ಪ ನಮನ ಸಲ್ಲಿಸಿದ್ದರು.
ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ, ಕೇಂದ್ರದ ಮಾಜಿ ಸಚಿವ ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದರು.
"ಮುಲಾಯಂ ಸಿಂಗ್ ಯಾದವ್ ಅವರು ಒಬ್ಬ ಹುಟ್ಟು ಹೋರಾಟಗಾರ. ಜಾತ್ಯತೀತ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟು, ಶೋಷಿತರ ಏಳಿಗೆಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಿಟ್ಟರು. ಸಾಮಾನ್ಯ ಹಿನ್ನೆಲೆಯಿಂದ ಬಂದು ದೇಶದ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸುವ ಮಟ್ಟಿಗೆ ಬೆಳೆದು ನಿಂತ ನಾಯಕ ಮುಲಾಯಂ ಸಿಂಗ್ ಯಾದವ್ ಅವರು. ಅವರು ಬೇರೆ ರಾಜಕೀಯ ಪಕ್ಷಗಳ ನಾಯಕರ ಜತೆ ಉತ್ತಮ ಬಾಂಧವ್ಯ ಹಾಗೂ ಗೌರವ ಸಂಪಾದಿಸಿದ್ದು, ಅವರ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ. ಸಮಾಜವಾದಿ ಚಿಂತನೆಗಳ ಪರ ನಿಂತಿದ್ದ ಧೀಮಂತ ನಾಯಕನ ಅಗಲಿಕೆ ಇಡೀ ದೇಶಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು, ಮಿತ್ರರು ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದರು.
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ












Click it and Unblock the Notifications