ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಇದು ಯಾತ್ರೆಯೋ, ಸಿದ್ದು-ಡಿಕೆಶಿ ಜೋಡಿಸುವ ಜಾತ್ರೆಯೋ?

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 30: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆ ಕರ್ನಾಟಕಕ್ಕೆ ಆಗಮಿಸಿದೆ. ಶುಕ್ರವಾರ ಗುಂಡ್ಲುಪೇಟೆಯಲ್ಲಿ ಕರ್ನಾಟಕದಲ್ಲಿನ ಯಾತ್ರೆಗೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಲಾಗಿದೆ.

21 ದಿನಗಳ ಕಾಲ ಯಾತ್ರೆ ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಸಾಗಲಿದೆ. ರಾಜ್ಯಕ್ಕೆ ಆಗಮಿಸಿದ ರಾಹುಲ್‌ ಗಾಂಧಿಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅದ್ದೂರಿ ಸ್ವಾಗತ ಕೋರಿದರು.

ಕರ್ನಾಟಕಕ್ಕೆ 'ರಾಹುಕಾಲ' ಸರಣಿ ಟ್ವೀಟ್‌ ಮಾಡಿದ ಬಿಜೆಪಿ! ಕರ್ನಾಟಕಕ್ಕೆ 'ರಾಹುಕಾಲ' ಸರಣಿ ಟ್ವೀಟ್‌ ಮಾಡಿದ ಬಿಜೆಪಿ!

ಚಾಮರಾಜ ನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಶುಕ್ರವಾರ ಬೆಳಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.

 ರಾಜ್ಯ ಪ್ರವೇಶಿಸಿದ ಭಾರತ್ ಜೋಡೋ; ರಾಹುಲ್ ಗಾಂಧಿ ಸ್ವಾಗತಿಸಿದ ರಾಜ್ಯ ನಾಯಕರು ರಾಜ್ಯ ಪ್ರವೇಶಿಸಿದ ಭಾರತ್ ಜೋಡೋ; ರಾಹುಲ್ ಗಾಂಧಿ ಸ್ವಾಗತಿಸಿದ ರಾಜ್ಯ ನಾಯಕರು

Bharat Jodo Yatra Karnataka BJP Tweet To Congress

ವೇದಿಕೆ ಕಾರ್ಯಕ್ರಮ ಉದ್ಘಾಟನೆ ವೇಳೆ ರಾಹುಲ್ ಗಾಂಧಿ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಕೈ ಹಿಡಿದು ನಗಾರಿ ಬಾರಿಸಿದರು. ಕರ್ನಾಟಕ ಬಿಜೆಪಿ ಈ ಕುರಿತು ವಿಡಿಯೋವೊಂದನ್ನು ಟ್ವೀಟ್ ಮಾಡಿದ್ದು, ಕಾಂಗ್ರೆಸ್‌ಗೆ ಪ್ರಶ್ನೆಯೊಂದನ್ನು ಕೇಳಿದೆ.

'ಭಾರತ್‌ ಜೋಡೋ ಯಾತ್ರೆಯೋ ಅಥವಾ ಸಿದ್ದು- ಡಿಕೆಶಿ ಜೋಡಿಸುವ ಜಾತ್ರೆಯೋ?' ಎಂದು ವಿಡಿಯೋವನ್ನು ಹಾಕಿ ಬಿಜೆಪಿ ಪ್ರಶ್ನಿಸಿದೆ. ಇದಕ್ಕೂ ಮೊದಲು 'ಕರ್ನಾಟಕಕ್ಕೆ ರಾಹುಕಾಲ' ಎಂದು ಬಿಜೆಪಿ ಸರಣಿ ಟ್ವೀಟ್ ಮಾಡಿತ್ತು.

Bharat Jodo Yatra in Karnataka : ಭಾರತ್‌ ಜೋಡೋ ಯಾತ್ರೆ ಉತ್ತಮ ಸ್ಪಂದನೆ; ಯಾವ ಶಕ್ತಿಯಿಂದಲೂ ನಿಲ್ಲಿಸಲಾಗಲ್ಲ: ರಾಹುಲ್Bharat Jodo Yatra in Karnataka : ಭಾರತ್‌ ಜೋಡೋ ಯಾತ್ರೆ ಉತ್ತಮ ಸ್ಪಂದನೆ; ಯಾವ ಶಕ್ತಿಯಿಂದಲೂ ನಿಲ್ಲಿಸಲಾಗಲ್ಲ: ರಾಹುಲ್

ಮುಖ್ಯಮಂತ್ರಿಗಳ ಪ್ರತಿಕ್ರಿಯೆ; ಭಾರತ್ ಜೋಡೋ ಯಾತ್ರೆ ಬಗ್ಗೆ ವಿಜಯಪುರದಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಭಾರತವನ್ನು ಒಡೆದರೋ (ತೋಡೋ) ಮಾಡಿದ್ದಾರೋ ಅವರಿಂದಲೇ ಭಾರತ ಜೋಡಿಸುವ ಯಾತ್ರೆ ನಡೆದಿದೆ" ಎಂದರು.

"ಇತಿಹಾಸವನ್ನು ಯಾರೂ ಮರೆತಿಲ್ಲ. ರಾಜಕೀಯ ಅಸ್ತಿತ್ವಕ್ಕೆ ಹಾಗೂ ಅವರ ಒಳಗಿನ ಹುಳುಕು ಮುಚ್ಚಿಕೊಳ್ಳಲು ಯಾತ್ರೆ ನಡೆಸಿರುವುದು ವಿಪರ್ಯಾಸ" ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

English summary
Congress leader Rahul Gandhi lead Bharat Jodo Yatra reached Karnataka. BJP tweet to Congress on the issue of D. K. Shivakumar and Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X