ಡಾ. ಸಿಎನ್ಆರ್ ರಾವ್ - ಕರ್ನಾಟಕ ವರ್ಷದ ವ್ಯಕ್ತಿ 2014
ಬೆಂಗಳೂರು, ಡಿ. 31 : ಕನ್ನಡ ನಾಡಿನ ಖ್ಯಾತ ವಿಜ್ಞಾನಿ, 63 ವಿಶ್ವವಿದ್ಯಾಲಯಗಳಿಂದ ಗೌರವ ಡಾಕ್ಟರೇಟ್ ಪಡೆದ ಮೇಧಾವಿ 'ಭಾರತ ರತ್ನ' ಡಾ. ಚಿಂತಾಮಣಿ ನಾಗೇಶ ರಾಮಚಂದ್ರ ರಾವ್ (ಸಿಎನ್ಆರ್ ರಾವ್) ಅವರನ್ನು ಒನ್ಇಂಡಿಯಾ ಕನ್ನಡದ ಓದುಗರು 'ಕರ್ನಾಟಕ ವರ್ಷದ ವ್ಯಕ್ತಿ 2014' ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಸಿಎನ್ಆರ್ ರಾವ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಓದುಗರಿಗೆ ಮನದಂತರಾಳದ ಧನ್ಯವಾದಗಳು.
2013ರಲ್ಲಿ ಕೂಡ ಡಾ. ಸಿಎನ್ಆರ್ ರಾವ್ (80) ಅವರು ಕರ್ನಾಟಕ ವರ್ಷದ ವ್ಯಕ್ತಿ ಪ್ರಶಸ್ತಿಗೆ ನಾಮನಿರ್ದೇಶನವಾಗಿದ್ದರು. ಆದರೆ, ಕೂದಲೆಳೆಯ ಅಂತರದಲ್ಲಿ ಈ ಪ್ರಶಸ್ತಿ, ಭ್ರಷ್ಟಾಚಾರದ ವಿರುದ್ಧ ಏಕಾಂಗಿ ಹೋರಾಟ ನಡೆಸಿರುವ ಸಾಮಾಜಿಕ ಚಳವಳಿಗಾರ ಎಸ್ಆರ್ ಹಿರೇಮಠ ಅವರ ಪಾಲಾಗಿತ್ತು. ಇದೇ ವರ್ಷದ ಆರಂಭದಲ್ಲಿ ಹಿರೇಮಠ ಅವರನ್ನು ನಮ್ಮ ಕಚೇರಿಗೆ ಬರಮಾಡಿ ಸನ್ಮಾನ ಮಾಡಲಾಗಿತ್ತು.
ಈ ಬಾರಿ, ಒನ್ಇಂಡಿಯಾ ಕನ್ನಡ ಆನ್ ಲೈನ್ ಮೂಲಕ ನಡೆಸಿದ ಈ ಚುನಾವಣೆಯಲ್ಲಿ ಶೇ.38.36ರಷ್ಟು ಅಂಕ ಪಡೆದು ಸಿಎನ್ಆರ್ ರಾವ್ ಅವರು ಪ್ರಥಮ ಸ್ಥಾನದಲ್ಲಿದ್ದರೂ, ರೌಡಿಶೀಟರ್ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ಗುಂಡಿಗೆ ಬಲಿಯಾದ 'ಕಲಬುರಗಿ ಸಿಂಗಂ' ಮಲ್ಲಿಕಾರ್ಜುನ ಬಂಡೆ ಅವರು ಓದುಗರ ಹೃದಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕಾಮೆಂಟ್ ಬಾಕ್ಸಲ್ಲಿ ಮಲ್ಲಿಕಾರ್ಜು ಬಂಡೆ ಅವರಿಗೇ ಈ ಪ್ರಶಸ್ತಿ ಸಿಗಬೇಕು ಎಂದು ಹಲವಾರು ಓದುಗರು ಅಭಿಪ್ರಾಯ ಮಂಡಿಸಿದ್ದಾರೆ. (ಕೆಲ ಅಭಿಪ್ರಾಯಗಳು ಕೆಳಗಿವೆ ಓದಿರಿ)

ಅಚ್ಚರಿಯ ಸಂಗತಿಯೆಂದರೆ, ಈ ಬಾರಿ ಡಾ. ಸಿಎನ್ಆರ್ ರಾವ್ ಮತ್ತು ಮಲ್ಲಿಕಾರ್ಜುನ ಬಂಡೆ ಅವರ ನಡುವೆ ಮೊದಲಿನಿಂದಲೂ ತುರುಸಿನ ಸ್ಪರ್ಧೆ ಏರ್ಪಟ್ಟಿತ್ತು. ಒಂದು ಕಡೆ ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಮೇಲುಗೈಯಾಗುತ್ತಿದ್ದರೆ, ಮತ್ತೊಂದೆಡೆ ಪ್ರಾಣದ ಹಂಗು ತೊರೆದು ಹೋರಾಡಿದ ವ್ಯಕ್ತಿಯ ಮೇಲಿದ್ದ ಭಾವುಕತೆ ಮೇಲುಗೈ ಸಾಧಿಸುತ್ತಿತ್ತು. ಇಬ್ಬರೂ ಈ ಪ್ರಶಸ್ತಿಗೆ ಅರ್ಹರಿದ್ದರೂ ಮತಗಳ ಆಧಾರದ ಮೇಲೆ ಡಾ. ಸಿಎನ್ಆರ್ ರಾವ್ ಅವರು ಕರ್ನಾಟಕ ವರ್ಷದ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.
ಪ್ರಸಕ್ತ ವರ್ಷ ವಿಭಿನ್ನ ಕ್ಷೇತ್ರಗಳಲ್ಲಿ ಮಾಡಿರುವ ಸಾಧನೆ, ಕರ್ನಾಟಕಕ್ಕೆ ಅವರು ನೀಡಿರುವ ಕೊಡುಗೆಯ ಆಧಾರದ ಮೇಲೆ ಡಾ. ಸಿಎನ್ಆರ್ ರಾವ್, ಮಲ್ಲಿಕಾರ್ಜುನ ಬಂಡೆ ಸೇರಿದಂತೆ ಆರು ಜನರನ್ನು ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿತ್ತು. ಸ್ಪರ್ಧೆಯಲ್ಲಿದ್ದ ಉಳಿದವರೆಂದರೆ, ಪೇಜಾವರ ಶ್ರೀಗಳಾದ ವಿಶ್ವೇಶ್ವರ ತೀರ್ಥರು, ಮೂಢನಂಬಿಕೆ ಪಿಡುಗಿನ ವಿರುದ್ಧ ಹೋರಾಡುತ್ತಿರುವ ನಿಡುಮಾಮಿಡಿ ಶ್ರೀ, ಕರ್ನಾಟಕಕ್ಕೆ ಅಭೂತಪೂರ್ವ ಯಶಸ್ಸು ತಂದುಕೊಡುತ್ತಿರುವ ಕ್ರಿಕೆಟರ್ ವಿನಯ್ ಕುಮಾರ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ.
ಸ್ಪರ್ಧೆ ಸಿಎನ್ಆರ್ ರಾವ್ ಮತ್ತು ಮಲ್ಲಿಕಾರ್ಜುನ ಬಂಡೆ ನಡುವೆ ಏರ್ಪಟ್ಟಿದ್ದರೂ ಉಳಿದ ಸಾಧಕರು ಮಾಡಿದ ಸಾಧನೆಯನ್ನು ತೆಗೆದುಹಾಕುವಂತಿಲ್ಲ. ಇಂಥವರ ನಿಸ್ವಾರ್ಥದ ದುಡಿಮೆಯೇ ನಮಗೆ ಸ್ಫೂರ್ತಿಯ ಚಿಲುಮೆ. ಯಾರ್ಯಾರಿಗೆ ಎಷ್ಟೆಷ್ಟು ಮತ ಬಂದಿವೆ ಎಂಬುದನ್ನು ಕೆಳಗಿನ ಚಿತ್ರ ತೋರಿಸುತ್ತದೆ.

ಓದುಗರ ಕೆಲ ಕಾಮೆಂಟುಗಳು ಹೀಗಿವೆ...
ವೀರ ಆರಕ್ಷಕ ರಾದ ಶ್ರೀ ಮಲ್ಲೀಕರ್ಜುನ್ ಬಂಡೆ ಅವರಿಗೆ ಕೊಡ್ಬೇಕು. ಅಂತಹ ವೀರ ಯೋಧನಿಗೆ ಜನ್ಮ ನೀಡಿದ ತಾಯಿಗೆ ವಂದನೆ ........ ಮತ್ತೆ ಹುಟ್ಟಿ ಬನ್ನಿ ಎಂದು ಹಾರೈಸೋಣ - ಸುನೀಲ್ ಕುಮಾರ್.
ಡಾ. ಸಿಎನ್ಆರ್ ರಾವ್ ಅವರಿಗಾದರೇ ಮುಂದೊಂದು ದಿನ ಕೊಡಬಹುದು, ಆದರೆ ಮಲ್ಲಿಕಾರ್ಜುನ ಬಂಡೆ ಅವರನ್ನು ನಾವು ಮೆರೆತು ಹೋಗುತ್ತೇವೆ. - ಹರೀಶ್.
ಹೌದು! ಈ ಸನ್ಮಾನ ಗುಂಡಿಗೆ ಬಲಿಯಾದ ಬಂಡೆ ಅವರಿಗೆ ಸಲ್ಲಬೇಕು. ಜೀವದ ಹಂಗು ತೊರೆದು ಕರ್ನಾಟಕಕ್ಕೆ ಕೀರ್ತಿ ತರುವ ಕೆಲಸವನ್ನು ಅವರು ಮಾಡಿದ್ದಾರೆ. ಹಾಟ್ಸ್ ಆಫ್. ಆವರಿಗೊಂದು ಸಲಾಮ - ಪ್ರಿಯಾ
ಮಲ್ಲಿಕಾರ್ಜುನ್ ಬಂಡೆ ಈಸ್ ಓನ್ಲಿ ಫಿಟ್ ಫಾರ್ that. ಲೇಟ ಹಿಸ್ ಸೋಲ್ ರೆಸ್ಟ್ ಇನ್ ಪೀಸ್ ... - ಸಂತೋಷ್ ಕೊರ್ಬು.
ಚಿ ನಾ ರಾ ರಾವ್ ಅವರೇ ವರ್ಷದ ವ್ಯಕ್ತಿಯಾಗಲಿ. ಧನ್ಯವಾದಗಳು. - ದಶರಥ ರೆಡ್ಡಿ
ವಿನಯ್ ಕುಮಾರ್ ನಿಮ್ಮ ಕ್ಯಾಪ್ಟನ್ ಶಿಪ್ ನಲ್ಲಿ ರಣಜಿ ಟ್ರೋಫಿ ಮತ್ತು ಅನೇಕ ಟೂರ್ನಮೆಂಟ್ಗಳನ್ನು ಗೆದ್ದಿದೇವೆ. - ರವಿ ಕುಮಾರ್ ಜಿ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications