ಜುಲೈನಿಂದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಕ್ರಿಕೆಟ್ ಕಪ್
ಈಗ ಎಲ್ಲೆಲ್ಲೂ ಕ್ರಿಕೆಟ್ ಆಟದ್ದೇ ಧ್ಯಾನ. ವಿಶ್ವಕಪ್ ಕ್ರಿಕೆಟ್ ಜ್ವರ ತಣ್ಣಾಗಾಗುತ್ತಿದ್ದಂತೆ ಐಪಿಎಲ್ ಜ್ವರ ಜರ್ರನೆ ಕಾವೇರುತ್ತಿದೆ. ಈ ಮಧ್ಯೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್(ಸಿಸಿಎಲ್) ಕಣ್ಣಿಗೆ ಹಬ್ಬವನ್ನುಂಟು ಮಾಡಲು ಸಿದ್ಧತೆ ನಡೆಸುತ್ತಿದೆ. ಈ ಸಡಗರ, ಸಂಭ್ರಮದಲ್ಲೇ ಕನ್ನಡ ಚಿತ್ರರಂಗದ ಅಭಿನೇತ್ರಿ ಭಾರತಿ ವಿಷ್ಣುವರ್ಧನ್ ಹೊಸ ಕ್ರಿಕೆಟ್ ಕಪ್ ಪ್ರಕಟಿಸಿ ಅಭಿಮಾನಿಗಳ ಸಡಗರವನ್ನು ಇಮ್ಮಡಿಸಿದ್ದಾರೆ.
ಜುಲೈತಿಂಗಳಲ್ಲಿ ಡಾ.ವಿಷ್ಣುವರ್ಧನ್ ಕ್ರಿಕೆಟ್ ಕಪ್ ಶುರುವಾಗಲಿದೆ. ಸಾಹಸಸಿಂಹ ವಿಷ್ಣುವರ್ಧನ್ ಅವರ ಹುಟ್ಟುಹಬ್ಬವಾದ ಸೆಪ್ಟೆಂಬರ್ 18ರಂದು ವಿಷ್ಣು ಕಪ್ ಫೈನಲ್ಸ್ ನಡೆಯಲಿವೆ. ಅಂದೇ ವಿಷ್ಣುವರ್ಧನ್ ಕಪ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ವರ್ಣರಂಜಿತವಾಗಿ ನಡೆಯಲಿದೆ ಎಂದು ಭಾರತಿ ಪ್ರಸ್ ಕ್ಲಬ್ನಲ್ಲಿ ಇತ್ತೀಚೆಗೆ ತಿಳಿಸಿದರು.
ಜುಲೈ ತಿಂಗಳಿಂದ ಸೆಪ್ಟೆಂಬರ್ವರೆಗೆ ಭಾನುವಾರಗಳಂದು ಜಯನಗರ ನ್ಯಾಶನಲ್ ಕಾಲೇಜು ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದೆ. ಅತ್ಯುತ್ತಮ ಬೌಲರ್, ಬ್ಯಾಟ್ಸ್ ಮನ್, ಫೀಲ್ಡರ್ ಹಾಗೂ ಅಂಫೈಲ್ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಸೆಪ್ಟೆಂಬರ್ 18ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಭಾರತಿ ವಿವರ ನೀಡಿದರು.
ನೀವೂ ಡಾ.ವಿಷ್ಣುವರ್ಧನ್ ಕಪ್ನಲ್ಲಿ ಪಾಲ್ಗೊಳ್ಳಬೇಕು ಎಂಬ ಆಸೆ ಇದೆಯೇ. ಹಾಗಿದ್ದರೆ ತಕ್ಷಣ ನಿಮ್ಮ ಮೊಬೈಲ್ ಫೋನನ್ನು ತೆಗೆದು ಈ ಸಂಖ್ಯೆಗೆ ಕರೆ ಮಾಡಿ. ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9900325990, 9845971004. ಹಿರಿಯ ಕಲಾವಿದ ಶಿವರಾಮ್ ಹಾಗೂ ಅನಿರುದ್ಧ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications