ಲೋಕಾಯುಕ್ತದಲ್ಲಿ ಭ್ರಷ್ಟಾಚಾರ, ಭಾಸ್ಕರರಾವ್ ವಿಚಾರಣೆ ಏಕೆ?
ಬೆಂಗಳೂರು, ಮಾರ್ಚ್ 01 : ಮಾಜಿ ಲೋಕಾಯುಕ್ತ ನ್ಯಾ.ಭಾಸ್ಕರರಾವ್ ಅವರ ವಿರುದ್ಧ ಮೊಕದ್ದಮೆ ದಾಖಲಿಸಲು ಎಸ್ಐಟಿ ಸರ್ಕಾರದ ಅನುಮತಿ ಕೇಳಿದೆ. ಭಾಸ್ಕರರಾವ್ ವಿರುದ್ಧ ಮೊಕದ್ದಮೆ ದಾಖಲು ಮಾಡುವ ಕುರಿತು ಸರ್ಕಾರಕ್ಕೆ 500 ಪುಟಗಳ ವಿವರಣೆ ನೀಡಲಾಗಿದೆ.
ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ, ತಮ್ಮ ಪುತ್ರ ಅಶ್ವಿನ್ ರಾವ್ ಭ್ರಷ್ಟಾಚಾರದಲ್ಲಿ ತೊಡಗಿದ್ದರೂ ಭಾಸ್ಕರರಾವ್ ಅವರು ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿಲ್ಲ ಎಂಬ ಆರೋಪದಡಿ ಅವರ ವಿರುದ್ಧ ಮೊಕದ್ದಮೆ ದಾಖಲು ಮಾಡಲಿದೆ. [ಭಾಸ್ಕರರಾವ್ ರಾಜೀನಾಮೆ]

ಭಾಸ್ಕರರಾವ್ ವಿರುದ್ಧ ಮೊಕದ್ದಮೆ ದಾಖಲು ಮಾಡಲು ಅನುಮತಿ ನೀಡುವಂತೆ ಕೋರಿ ಎಸ್ಐಟಿ ಕರ್ನಾಟಕ ಸರ್ಕಾರಕ್ಕೆ 500 ಪುಟಗಳ ವರದಿಯನ್ನು ನೀಡಿದೆ. ಕರ್ನಾಟಕ ಸರ್ಕಾರ ಮೊಕದ್ದಮೆ ದಾಖಲು ಮಾಡಲು ಅನುಮತಿ ನೀಡಿದ ಬಳಿಕ, ರಾಜ್ಯಪಾಲರು ಅದಕ್ಕೆ ಒಪ್ಪಿಗೆ ನೀಡಬೇಕಾಗಿದೆ. [ಲೋಕಾ ಹಗರಣ : ಭಾಸ್ಕರರಾವ್ ಗೆ ಸಂಕಟ?]
ಸರ್ಕಾರಕ್ಕೆ ಎಸ್ಐಟಿ ಸಲ್ಲಿಸಿರುವ ವರದಿಯಲ್ಲಿ ಐಪಿಸಿ ಸೆಕ್ಷನ್ 202 (ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡದಿರುವುದು), 217 (ಅಪರಾಧವನ್ನು ಉದ್ದೇಶಪೂರ್ವಕ ಮರೆಮಾಚುವುದು) ರ ಅನ್ವಯ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಹೇಳಿದೆ. [ಲೋಕಾಯುಕ್ತದಲ್ಲಿ ಏನಿದು ಹಗರಣ?]
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನ್ಯಾ.ಭಾಸ್ಕರರಾವ್ ಅವರನ್ನು ವಿಚಾರಣೆ ನಡೆಸಲಿದೆ. ಅಶ್ವಿನ್ ರಾವ್ ಮತ್ತು ಇತರ ಆರೋಪಿಗಳು ಲೋಕಾಯುಕ್ತ ಕಚೇರಿಯ ಮುಖ್ಯ ಹಾಲ್ ಮತ್ತು ಲೋಕಾಯುಕ್ತರ ನಿವಾಸವನ್ನು ಬೆದರಿಕೆ ಹಾಕಲು ಬಳಸಿಕೊಂಡಿದ್ದರು ಎಂಬ ಆರೋಪಗಳಿವೆ.
ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಅವರು ಮೊದಲ ಆರೋಪಿಯಾಗಿದ್ದು, ಎಸ್ಐಟಿ ಅವರನ್ನು ಬಂಧಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಎಸ್ಐಟಿ 10ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications