ಭಟ್ಕಳದ ಶಂಕಿತರಿಂದ ಬಯಲಾಗುತ್ತಾ ಉಗ್ರರ ಜಾಲ?
ಎರಡು ವಾರಗಳಲ್ಲಿ ಕರ್ನಾಟಕದಲ್ಲಿ ಹರಡಿರುವ ಉಗ್ರ ಜಾಲದ ನಾಲ್ವರು ಸದಸ್ಯರನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.
ಇವರೆಲ್ಲ ಭಟ್ಕಳ ಮೂಲದವರು ಹಾಗೂ ಇಂಡಿಯನ್ ಮುಜಾಹಿದೀನ್ ಕಾರ್ಯಕರ್ತರು ಎಂಬುದು ತಿಳಿದುಬಂದಿದೆ. ಆದರೆ, ಅವರು ಎಂತಹ ಜಾಲ ಬೀಸಿದ್ದರು ಎಂಬುದು ಇನ್ನು ಮೇಲಿನ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
ಅಲ್ಲದೆ, ದಿಲ್ಸುಖ್ನಗರ ಸ್ಫೋಟ ಹಾಗೂ ಮುಂಬಯಿಯಲ್ಲಿ ನಡೆದ 13/7 ಸ್ಫೋಟದಲ್ಲಿ ಇವರು ಪಾಲ್ಗೊಂಡಿದ್ದರೇ ಎಂಬುದರ ಕುರಿತೂ ತನಿಖೆಯಾಗಬೇಕಿದೆ. [ಬೆಂಗಳೂರಲ್ಲಿ ಮತ್ತಿಬ್ಬರು ಶಂಕಿತರ ವಶ]

ಈ ಪ್ರಕರಣದಲ್ಲೀಗ ರಿಯಾಜ್ ಭಟ್ಕಳ್, ಯಾಸಿನ್ ಭಟ್ಕಳ್, ವಕಾಸ್ ಅಹ್ಮದ್, ತಹಸೀನ್ ಅಕ್ತರ್ ಹಾಗೂ ಅಸಾದುಲ್ಲಾ ಅಖ್ತರ್ ವಿರುದ್ಧ ಮಾತ್ರ ಪ್ರಕರಣ ದಾಖಲಾಗಿದೆ. [ಓರ್ವ ಶಂಕಿತ ಉಗ್ರ ಎಂಬಿಎ ವಿದ್ಯಾರ್ಥಿ]
ಪಾಕಿಸ್ತಾನದಲ್ಲಿರುವ ರಿಯಾಜ್ ಭಟ್ಕಳ್ ಯಾಸಿನ್ ಮೂಲಕ ಈ ಸ್ಫೋಟ ನಡೆಸಿರುವುದು ತನಿಖೆಯಲ್ಲಿ ಇಲ್ಲಿಯವರೆಗೆ ತಿಳಿದುಬಂದಿರುವ ಅಂಶ. ಇದಕ್ಕಾಗಿ ಅವರಿಗೆ ಹವಾಲಾ ಜಾಲದ ಮೂಲಕ ಹಣ ಹರಿದುಬಂದಿತ್ತು. [ಬಿರಿಯಾನಿಗೆ ಹೆಸರಾಗಿದ್ದ ಭಟ್ಕಳದಲ್ಲಿ ಉಗ್ರರು ಹುಟ್ಟಿದ್ದು ಹೇಗೆ?]
ಈ ಸ್ಫೋಟಕ್ಕೆ ಬಾಂಬ್ ಪೂರೈಸಿದ್ದು ರಿಯಾಜ್ ಭಟ್ಕಳ್ ಆಗಿದ್ದರೂ, ಅದನ್ನು ಭಾರತದ ಮಂಗಳೂರಿಗೆ ಸಾಗಿಸಿದ್ದು ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ಈಗ ಪೊಲೀಸರು ಬಂಧಿಸಿರುವ ಐವರ ಮೂಲಕ ಈ ವಿಷಯ ತಿಳಿಯುತ್ತದೆಯೇ ನೋಡಬೇಕು.
ಪೊಲೀಸರ ಪ್ರಕಾರ ಭಟ್ಕಳದಲ್ಲಿದ್ದ ಪ್ರಮುಖ ಜಾಲವೊಂದನ್ನು ಪತ್ತೆಹಚ್ಚಲಾಗಿದೆ. ಅವರು ಹೆಚ್ಚಿನ ಸ್ಫೋಟ ನಡೆಸಲು ಉದ್ದೇಶಿಸಿದ್ದೇ ನಿಜವಾಗಿದ್ದಲ್ಲಿ ಇಂಡಿಯನ್ ಮುಜಾಹಿದೀನ್ ಭಾರತದಲ್ಲಿ ಮತ್ತೆ ಜೀವ ತಳೆಯುವ ಸೂಚನೆ ಕಂಡುಬರುತ್ತಿದೆ. [ಐಎಸ್ಐಎಸ್ ನೇಮಕಾತಿಯ ಕೊಂಡಿ ಸುಲ್ತಾನ್]
ಇವರ ಜಾಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿದ್ದಂತೆ ಕಾಣುತ್ತಿಲ್ಲ. ಆದ್ದರಿಂದ ಬೆಂಗಳೂರು ಸಿಸಿಬಿ ಪೊಲೀಸರಿಗೆ ದಿಲ್ಸುಖ್ನಗರ ಸ್ಫೋಟ ತನಿಖೆ ನಡೆಸಿರುವ ಎನ್ಐಎ ಹಾಗೂ ಮುಂಬೈ 13/7 ದಾಳಿಯ ತನಿಖೆಯಲ್ಲಿರುವ ಮಹಾರಾಷ್ಟ್ರ ಎಟಿಎಸ್ ಸಹಕಾರ ಪಡೆಯುವುದು ಅನಿವಾರ್ಯವಾಗಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications