ಭಟ್ಕಳ ಮೂಲದ ಐಎಸ್ಐಎಸ್ ಉಗ್ರ ಶಫಿ ಅರ್ಮರ್ ಸಾವು
ಬೆಂಗಳೂರು, ಮಾರ್ಚ್ 26 : ಐಎಸ್ಐಎಸ್ ಉಗ್ರ ಸಂಘಟನೆಯಲ್ಲಿದ್ದ ಭಟ್ಕಳ ಮೂಲದ ಶಫಿ ಅರ್ಮರ್ ಮೃತಪಟ್ಟಿದ್ದಾನೆ. ಹಲವು ಸುತ್ತಿನ ಪರಿಶೀಲನೆಗಳ ಬಳಿಕ ಗುಪ್ತಚರ ಇಲಾಖೆ ಈ ಮಾಹಿತಿಯನ್ನು ಖಚಿತಪಡಿಸಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
2016ರ ಏಪ್ರಿಲ್ ಸಮಯದಲ್ಲಿ ಶಫಿ ಅರ್ಮರ್ ಸಾವನ್ನಪ್ಪಿದ್ದಾನೆ ಎಂದು ಒನ್ ಇಂಡಿಯಾಕ್ಕೆ ಗುಪ್ತಚರ ಇಲಾಖೆ ಮೂಲಗಳು ಖಚಿತಪಡಿಸಿವೆ. ಐಎಸ್ಐಸ್ಗೆ ಭಾರತದಿಂದ ಉಗ್ರರನ್ನು ಶಫಿ ಅರ್ಮರ್ ಯೂಸೂಫ್ ಅಲ್ ಹಿಂದಿ ಎಂಬ ಹೆಸರಿನಿಂದ ನೇಮಕ ಮಾಡಿಕೊಳ್ಳುತ್ತಿದ್ದ.
26 ವರ್ಷದ ಕರ್ನಾಟಕದ ಭಟ್ಕಳ ಮೂಲದ ಶಫಿ ಅರ್ಮರ್ ಉಗ್ರ ಸಂಘಟನೆಗೆ ಭಾರತದಿಂದ ಯುವಕರನ್ನು ಗುರುತಿಸುತ್ತಿದ್ದ, ತಾನೇ ನೇಮಕವನ್ನು ಮಾಡಿಕೊಳ್ಳುತ್ತಿದ್ದ. ಸಿರಿಯಾದಲ್ಲಿ ನಡೆದ ವಾಯು ಸೇನೆಯ ದಾಳಿಯಲ್ಲಿ ಆತ ಮೃತಪಟ್ಟಿದ್ದಾನೆ.

ಶಫಿ ಅರ್ಮರ್ ಸಹೋದರ ಸುಲ್ತಾನ್ ಅರ್ಮರ್ 2015ರಲ್ಲಿ ಮೃತಪಟ್ಟಿದ್ದ. ಬಳಿಕ ಈತ ಭಾರತದಲ್ಲಿನ ಚಟುವಟಿಕೆಗಳನ್ನು ನೋಡಿಕೊಳ್ಳುತ್ತಿದ್ದ. ಸಹೋದರರಿಬ್ಬರು ಮೊದಲು ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯಲ್ಲಿದ್ದರು. ಬಳಿಕ ಐಎಸ್ಐಎಸ್ ಸೇರಿದ್ದರು.
ಭಾರತದಲ್ಲಿನ ಐಎಸ್ಐಎಸ್ ಉಗ್ರ ಸಂಘಟನೆ ಚಟುವಟಿಕೆಯನ್ನು ಎನ್ಐಎ ಪತ್ತೆ ಹಚ್ಚಿದಾಗ ಮೊದಲು ಸಿಕ್ಕ ಹೆಸರುಗಳು ಸುಲ್ತಾನ್ ಅರ್ಮರ್ ಮತ್ತು ಶಫಿ ಅರ್ಮರ್.
ಸುಲ್ತಾನ್ ಅರ್ಮರ್ ಐಎಸ್ಐಎಸ್ನ ಭಾರತೀಯ ಶಾಖೆ ಅನ್ಸರ್-ಉತ್-ತಾಹಿದ್ ಅನ್ನು ಸ್ಥಾಪನೆ ಮಾಡಿದ್ದ. 2015ರಲ್ಲಿ ಸುಲ್ತಾನ್ ಸಾವನ್ನಪ್ಪಿದ ಬಳಿಕ ಶಫಿ ಅರ್ಮರ್ ಸಂಘಟನೆಯ ನೇತೃತ್ವ ವಹಿಸಿಕೊಂಡಿದ್ದ.
ಅರ್ಮರ್ ಹತ್ಯೆಯಾದಾಗ ಐಎಸ್ಐಎಸ್ ಸಾಮಾಜಿಕ ಜಾಲತಾಣದಲ್ಲಿ ಶೋಕ ಸಂದೇಶಗಳನ್ನು ಹಾಕಲಾಗಿತ್ತು. ಇವುಗಳ ಮೇಲೆ ಕಣ್ಣಿಟ್ಟಿದ್ದ ಗುಪ್ತಚರ ಇಲಾಖೆ ಶಫಿ ಅರ್ಮರ್ ಮೃತಪಟ್ಟಿರಬಹುದು ಎಂದು ಶಂಕಿಸಿತ್ತು. ಈಗ ಅಧಿಕೃತ ಮಾಹಿತಿ ಸಿಕ್ಕಿದೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications