ಬಂಧನ ಭೀತಿಯಲ್ಲಿ ಹೈಕೋರ್ಟ್ ಮೊರೆ ಹೋದ ಭವಾನಿ ರೇವಣ್ಣ
ಬೆಂಗಳೂರು, ಜೂನ್ 01: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣ ಬಂಧನ ಭೀತಿಯಲ್ಲಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್. ನಗರ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಕೆ.ಆರ್. ನಗರ ಠಾಣೆಯಲ್ಲಿ ಮಹಿಳೆಯ ಅಪಹರಣ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ತನಿಖೆಯನ್ನು ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಹಸ್ತಾಂತರ ಮಾಡಲಾಗಿದೆ.

ಈ ಪ್ರಕರಣದಲ್ಲಿ ಎಸ್ಐಟಿ ಭವಾನಿ ರೇವಣ್ಣ ವಿಚಾರಣೆ ನಡೆಸಬೇಕಿದೆ. ಬಂಧನ ಭೀತಿಯಲ್ಲಿರುವ ಅವರು ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್ಗೆ ಶನಿವಾರ ಅರ್ಜಿ ಸಲ್ಲಿಸಿದ್ದಾರೆ. ಇದೇ ಪ್ರಕರಣದಲ್ಲಿ ಮಾಜಿ ಸಚಿವ ಎಚ್. ಡಿ. ರೇವಣ್ಣ ಎಸ್ಐಟಿಯಿಂದ ಬಂಧನಕ್ಕೊಳಗಾಗಿ ಸದ್ಯ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.
ಜಾಮೀನು ಅರ್ಜಿ ತಿರಸ್ಕಾರ: ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ನಡೆಸಲಾಗಿದೆ ಎಂಬುದು ದೂರು. ಈ ದೂರು ನೀಡಿದ್ದ ಮಹಿಳೆ ಅಪಹರಣವಾಗಿತ್ತು. ಮಹಿಳೆಯ ಪುತ್ರ ಕೆ.ಆರ್. ನಗರ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ (ಎ1), ಎಚ್. ಡಿ. ರೇವಣ್ಣ (ಎ2) ಮತ್ತು ಭವಾನಿ ರೇವಣ್ಣ ಸಹ ಆರೋಪಿಗಳು. ಈ ಪ್ರಕರಣದಲ್ಲಿ ಭವಾನಿ ರೇವಣ್ಣ ವಿಚಾರಣೆ ನಡೆಸಲು ಎಸ್ಐಟಿ ಪೊಲೀಸರು ಪ್ರಯತ್ನ ನಡೆಸಿದ್ದಾರೆ. ಆದರೆ ಪೊಲೀಸರ ಕೈಗೆ ಭವಾನಿ ರೇವಣ್ಣ ಸಿಕ್ಕಿಲ್ಲ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಕೋರ್ಟ್ ಅರ್ಜಿ ತಿರಸ್ಕಾರ ಮಾಡಿದೆ. ಶನಿವಾರ ಹೊಳೆನರಸೀಪುರ ಮನೆಗೆ ಭವಾನಿ ರೇವಣ್ಣ ವಿಚಾರಣೆಗೆ ಎಸ್ಐಟಿ ಪೊಲೀಸರು ತೆರಳಿದ್ದಾರೆ. ಆದರೆ ಮಧ್ಯಾಹ್ನದ ತನಕ ಭವಾನಿ ರೇವಣ್ಣ ಪತ್ತೆಯಾಗಿಲ್ಲ.
ಈ ಪ್ರಕರಣದಲ್ಲಿ ಎಸ್ಐಟಿ ಈಗಾಗಲೇ ಮಾಜಿ ಸಚಿವ ಎಚ್. ಡಿ. ರೇವಣ್ಣ ಬಂಧಿಸಿ, ವಿಚಾರಣೆ ನಡೆಸಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಈ ಪ್ರಕರಣದಲ್ಲಿ ಎಚ್. ಡಿ. ರೇವಣ್ಣಗೆ ಜಾಮೀನು ನೀಡಿದೆ.
ವಿದೇಶದಿಂದ ಆಗಮಿಸಿ ಎಸ್ಐಟಿಯಿಂದ ಬಂಧನಕ್ಕೆ ಒಳಗಾಗಿರುವ ಪ್ರಜ್ವಲ್ ರೇವಣ್ಣರನ್ನು ಸಹ ಎಸ್ಐಟಿ ಅಧಿಕಾರಿಗಳು ಈ ಪ್ರಕರಣದಲ್ಲಿ ವಿಚಾರಣೆ ನಡೆಸಲಿದ್ದಾರೆ. ಈಗಾಗಲೇ ಜೂನ್ 6ರ ತನಕ ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಭವಾನಿ ರೇವಣ್ಣ ಶನಿವಾರ ಸಂಜೆಯ ತನಕ ವಿಚಾರಣೆಗೆ ಬಾರದಿದ್ದರೆ ಎಸ್ಐಟಿ ಅಧಿಕಾರಿಗಳು ಲುಕ್ ಔಟ್ ನೋಟಿಸ್ ಜಾರಿಗೊಳಿಸುವ ನಿರೀಕ್ಷೆ ಇದೆ. 15 ದಿನಗಳಿಂದ ಭವಾನಿ ರೇವಣ್ಣ ಎಲ್ಲೂ ಕಾಣಿಸಿಕೊಂಡಿಲ್ಲ. ನಿರೀಕ್ಷಣಾ ಜಾಮೀನು ರದ್ದುಗೊಂಡರೂ ಸಹ ಶುಕ್ರವಾರ ಅವರು ಎಲ್ಲೂ ಬಹಿರಂಗವಾಗಿ ಕಾಣಿಸಿಕೊಳ್ಳಲಿಲ್ಲ.
ಶನಿವಾರ ಭವಾನಿ ರೇವಣ್ಣ ವಿಚಾರಣೆಗೆ ಸಹಕಾರ ನೀಡದ ಹಿನ್ನಲೆಯಲ್ಲಿ ಎಸ್ಐಟಿ ಅವರನ್ನು ಬಂಧಿಸುವ ಸಾಧ್ಯತೆಯೂ ಇದೆ. ಈಗಾಗಲೇ ಅವರ ನಿರೀಕ್ಷಣಾ ಜಾಮೀನು ಅರ್ಜಿ ಕೋರ್ಟ್ನಲ್ಲಿ ತಿರಸ್ಕಾರವಾಗಿದೆ.
ಅಪಹರಣಗೊಂಡ ಮಹಿಳೆಯ ಮನವೊಲಿಸುವ ಬಗ್ಗೆ ಭವಾನಿ ರೇವಣ್ಣ, ರೇವಣ್ಣ ಆಪ್ತ ಸಹಾಯಕನ ಜೊತೆ ದೂರವಾಣಿ ಮೂಲಕ ಮಾತನಾಡಿರುವ ಕರೆಗಳ ರೆಕಾರ್ಡ್ ಎಸ್ಐಟಿ ಬಳಿ ಇದೆ. ಇದೇ ಪ್ರಕರಣದಲ್ಲಿ ಎಸ್ಐಟಿ ರೇವಣ್ಣ ಆಪ್ತ ಸಹಾಯಕನನ್ನು ಬಂಧಿಸಿ ವಿಚಾರಣೆ ನಡೆಸಿದೆ, ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications