Bhavya Narasimhamurthy: ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಸೇನಾ ಅನುಭವ ಹಂಚಿಕೊಂಡ ಭವ್ಯ ನರಸಿಂಹಮೂರ್ತಿ
ಬೆಂಗಳೂರು, ಜೂನ್ 04: ಭಾರತೀಯ ಸೇನೆಯ ಟೆರಿಟೋರಿಯಲ್ ಆರ್ಮಿ ಸೇರ್ಪಡೆಯಾಗಿ ತರಬೇತಿ ಪಡೆದ ನಂತರ ಕಾಂಗ್ರೆಸ್ ವಕ್ತಾರೆ ಭವ್ಯಾ ನರಸಿಂಹಮೂರ್ತಿ (Bhavya Narasimhamurthy) ಅವರು ಬೆಂಗಳೂರಿಗೆ ಮರಳಿದ್ದು, ಮುಖ್ಯಮಂತ್ರಿಗಳಿಂದ ಆಶೀರ್ವಾದ ಪಡೆದಿದ್ದಾರೆ.
ಭಾರತೀಯ ಸೇನೆಯ ಘಟಕವಾದ ಟೆರಿಟೋರಿಯಲ್ ಆರ್ಮಿಯ ಭಾಗವಾಗಿದ್ದಕ್ಕೆ ಹೆಮ್ಮೆ ವ್ಯಕ್ತಪಡಿಸಿ ಅವರು ಭವ್ಯಾ ನರಸಿಂಹಮೂರ್ತಿ (Bhavya Narasimhamurthy) ಅವರು ಟ್ವೀಟ್ ಮಾಡಿದ್ದರು. ಹಲವು ಫೋಟೋಗಳನ್ನು ಹಂಚಿಕೊಂಡಿದ್ದರು.

ಇದೀಗ ಸೇನೆಯಲ್ಲಿ ತರಬೇತಿ ಪಡೆದು ಬೆಂಗಳೂರಿಗೆ ಮರಳಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಭವ್ಯ ನರಸಿಂಹಮೂರ್ತಿ ಅವರಿಗೆ ಸಿಹಿ ತಿನಿಸಿ ಶುಭಾಶಯ ಕೋರಿದ್ದಾರೆ.
ಇದೇ ವೇಳೆ ಅವರು ಸೇನೆಯಲ್ಲಿ ತಮಗೆ ನೀಡಿದ ತರಬೇತಿ, ಆದ ಅನುಭವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆಶೀರ್ವಾದ ಪಡೆದಿರುವುದಾಗಿ ಸೋಮವಾರ ರಾತ್ರಿ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಸೇನೆಗೆ ಸೇರಿದ ಭವ್ಯ ನರಸಿಂಹಮೂರ್ತಿ ಅವರಿಗೆ ಸಂಬಂಧಿಸಿ ಪತ್ರಗಳನ್ನು ನೋಡಿದ ಸಿಎಂ ಸಿದ್ದರಾಮಯ್ಯ ಅವರಿಗೆ ಸಿತಿ ತಿನಿಸಿ ಶುಭ ಕೋರಿದ್ದಾರೆ. ತಮ್ಮ ಪಕ್ಷದ ವಕ್ತಾರೆ ಸೇನೆ ಸೇರಿದ್ದಕ್ಕೆ ಅವರು ಹೆಮ್ಮೆ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಂತೋಷದ ಕ್ಷಣ ಎಂದ ಭವ್ಯ ನರಸಿಂಹಮೂರ್ತಿ
ಇದರೊಂದಿಗೆ ಮನೆಯಲ್ಲಿ ತಂದೆ ತಾಯಿ ಜೊತೆಗೆ ಫೋಟೋಗಳನ್ನು ಹಂಚಿಕೊಂಡಿರುವ ಭವ್ಯ ನರಸಿಂಹಮೂರ್ತಿ ಅವರು ಇದು ನನ್ನ ಖಷಿಯ ಕ್ಷಣಗಳು ಎಂದು ತಂದೆ ತಾಯಿ ಜೊತೆಗೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇವುಗಳನ್ನು ಅವರ ಅಭಿಮಾನಿಗಳು ಶೇರ್ ಮಾಡಿಕೊಂಡಿದ್ದಾರೆ.

ಅವರು ಸೇನೆ ಸೇರಿದ್ದು ಗೊತ್ತಾಗುತ್ತಿದ್ದಂತೆ ಕಾಂಗ್ರೆಸ್ನ ಹಲವು ನಾಯಕರು, ಸ್ಥಳೀಯ ಮುಖಂಡರು ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಶುಭ ಕೋರಿದ್ದಾರೆ.
ನಾನು ಭಾರತೀಯ ಸೇನೆಯ ಭಾಗವಾಗಿರುವುದಕ್ಕೆ ಹೆಮ್ಮೆ ಇದೆ. ಟೆರಿಟೋರಿಯಲ್ ಆರ್ಮಿಕಯಲ್ಲಿ ದಕ್ಷಿಣ ಭಾರತದ ಕಮಿಷನ್ಡ್ ಅಧಿಕಾರಿಯಾದ ಏಕೈಕ ಮಹಿಳೆ ನಾನಾಗಿದ್ದೇನೆ. 2022ರಲ್ಲಿ ನಡೆದ ಟಿಎ ಪರೀಕ್ಷೆಯಲ್ಲಿ ನಾನು ಉತ್ತೀರ್ಣಗೊಂಡ ಏಕೈಕ ಮಹಿಳೆಯು ಆಗಿದ್ದೇನೆ ಎಂದು ಅವರು ಇತ್ತೀಚೆಗೆ ಮಾಹಿತಿ ನೀಡಿದ್ದರು.
ಖ್ಯಾತ ಕ್ರಿಕೇಟಿಗ ಎಂ.ಎಸ್.ಧೋನಿ, ಕೇಂದ್ರ ಸಚಿವ ಅನುರಾಗ್ ಠಾಕೂರ್, ಕರ್ನಾಟಕ ಕೇಡರ್ನ ಹಿರಿಯ ಐಎಎಸ್ ಅಧಿಕಾರ ಕ್ಯಾಪ್ಟನ್ ಮಣಿವಣ್ಣನ್ ಸೇರಿದಂತೆ ಹಲವರು ಈ ಟೆರಿಟೋರಿಯಲ್ ಆರ್ಮಿಯ ಸದಸ್ಯರಾಗಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಸರ್ ಅವರನ್ನು ಭೇಟಿಯಾಗಿ ನನ್ನ ಕಾಶ್ಮೀರದ ತರಬೇತಿಯ ಬಗ್ಗೆ ತಿಳಿಸಿ ಆಶೀರ್ವಾದ ಪಡೆದೆ.
— Bhavya Narasimhamurthy (@Bhavyanmurthy) June 3, 2024
Met with CM of Karnataka Sri @siddaramaiah sir and informed him about my training in Kashmir and took his blessings. #Territorialarmy pic.twitter.com/MQXstfoxkT
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications