ಶಿವನಸಮುದ್ರ ಬಳಿ ಬಿಎಚ್ಇಎಲ್ ಸೌರ ವಿದ್ಯುತ್ ಘಟಕ
ಬೆಂಗಳೂರು, ಜು. 28 : ಬಿಎಚ್ಇಎಲ್ ಮಂಡ್ಯ ಜಿಲ್ಲೆಯ ಶಿವನಸಮುದ್ರ ಬಳಿ 10 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರ ಸ್ಥಾಪಿಸಲಿದೆ. ಕರ್ನಾಟಕ ವಿದ್ಯುತ್ ನಿಗಮದೊಂದಿಗೆ ಈ ಬಗ್ಗೆ ಬಿಎಚ್ಇಎಲ್ ಒಪ್ಪಂದ ಮಾಡಿಕೊಂಡಿದೆ.
ಮಂಡ್ಯ ಜಿಲ್ಲೆಯ ಶಿವನಸಮುದ್ರ ಬಳಿಯ ಬೆಳಕವಾಡಿ ಗ್ರಾಮದಲ್ಲಿ ಈ 10 ಮೆಗಾವ್ಯಾಟ್ ಸೌರ ವಿದ್ಯುತ್ ಸ್ಥಾವರ ನಿರ್ಮಾಣಗೊಳ್ಳಲಿದೆ. ಸುಮಾರು 68 ಕೋಟಿ ರೂ.ಗಳ ವೆಚ್ಚದಲ್ಲಿ ಬಿಎಚ್ಇಎಲ್ ಇದನ್ನು ನಿರ್ಮಿಸುತ್ತಿದ್ದು, ಮೂರು ವರ್ಷಗಳ ಅವಧಿಗೆ ಸ್ಥಾವರವನ್ನು ಸಂಸ್ಥೆಯೇ ಸಂರಕ್ಷಣೆ ಮಾಡಲಿದೆ.

ಬಿಎಚ್ಇಎಲ್ ಈಗಾಗಲೇ ರಾಯಚೂರಿನ ಬಳಿ 3 ಮೆಗಾವ್ಯಾಟ್ ಹಾಗೂ ಶಿವನಸಮುದ್ರದ ಬಳಿ 5 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದೆ. ಸದ್ಯ ಶಿವನಸಮುದ್ರ ಬಳಿ 10 ಮೆಗಾವ್ಯಾಟ್ ಸಾಮರ್ಥ್ಯದ ಮತ್ತೊಂದು ಸ್ಥಾವರ ಸ್ಥಾಪಿಸಲು ಮುಂದಾಗಿದೆ. [ಶಿವನಸಮುದ್ರ ಬಳಿ ತಲೆ ಎತ್ತಿದ ಸೌರ ವಿದ್ಯುತ್ ಘಟಕ]
2ರಿಂದ 10 ಮೆಗಾವ್ಯಾಟ್ ಸಾಮರ್ಥ್ಯದ ಸೌರವಿದ್ಯುತ್ ಸ್ಥಾವರ ಸ್ಥಾಪಿಸುವಲ್ಲಿ ಮುಂಚೂಣಿಯಲ್ಲಿರುವ ಬಿಎಚ್ಇಎಲ್ ಈಗಾಗಲೇ ನೆರೆಯ ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ತ್ರಿಪುರ ಹಾಗೂ ಉತ್ತರ ಪ್ರದೇಶದಲ್ಲಿ ಸೌರವಿದ್ಯುತ್ ಉತ್ಪಾದಿಸಿ ಪ್ರಮುಖ ಜಾಲಕ್ಕೆ ವರ್ಗಾವಣೆ ಮಾಡುತ್ತಿದೆ. [ಅಬ್ದುಲ್ ಕಲಾಂನಷ್ಟೇ ಬುದ್ದಿವಂತ ರೈತ ಕೃಷ್ಣಪ್ಪ]
ಸೌರ ವಿದ್ಯುತ್ ಘಟಕ ಸ್ಥಾಪನೆ ಕುರಿತು ಕರ್ನಾಟಕ ವಿದ್ಯುತ್ ನಿಗಮದೊಂದಿಗೆ ಬಿಎಚ್ಇಎಲ್ ಒಪ್ಪಂದ ಮಾಡಿಕೊಂಡಿದ್ದು, ಈ ಯೋಜನೆಯಲ್ಲಿ ಬಿಎಚ್ಇಎಲ್ ಕಾರ್ಯವ್ಯಾಪ್ತಿಯಲ್ಲಿ ಸೌರವಿದ್ಯುತ್ ಸ್ಥಾವರದ ವಿನ್ಯಾಸ, ಉತ್ಪಾದನೆ, ಸರಬರಾಜು, ಸ್ಥಾಪನೆ ಮತ್ತು ಕಾರ್ಯಾಚರಣೆ ಸೇರಿದೆ.
ಹೊಸ ಘಟಕಗಳ ಸ್ಥಾಪನೆ : 2012ರಲ್ಲಿ ಬಿಎಚ್ಇಎಲ್ ರಾಜ್ಯದ 10 ಕಡೆ ಸೌರ ವಿದ್ಯುತ್ ಘಟಕ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿತ್ತು. ಹಾವೇರಿ, ಬಾಗಲಕೋಟೆ, ತುಮಕೂರು, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳಲ್ಲಿ ತಲಾ 10 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಘಟಕಗಳು ನಿರ್ಮಾಣಗೊಳ್ಳಲಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications