ಬೀದರ್ : ಲಿಂಗಾಯತ ಸ್ವತಂತ್ರ ಧರ್ಮ ಮನ್ನಣೆಗಾಗಿ ಹೋರಾಟ
ಬೀದರ್, ಜುಲೈ 10: ಲಿಂಗಾಯತ ಸ್ವತಂತ್ರ ಧರ್ಮ ಮನ್ನಣೆ ಪಡೆಯಲು ಜನಜಾಗೃತಿ ಮೂಲಕ ಹೋರಾಟ ಸಂಘಟಿಸಲಾಗುತ್ತಿದೆ. ಅದಕ್ಕಾಗಿ ಸಮಾನ ಮನಸ್ಕ ಮಠಾಧೀಶರು, ಗಣ್ಯರು, ಸಾಹಿತಿಗಳನ್ನು ಒಳಗೊಂಡ ಲಿಂಗಾಯತ ಸಮನ್ವಯ ಸಮಿತಿ ರಚಿಸಲಾಗಿದೆ. ರಾಜ್ಯದ ಎಲ್ಲ ಮಠಾಧೀಶ ರನ್ನು ಸಂಪರ್ಕಿಸಿ ಹೋರಾಟ ರೂಪಿಸಲಾಗುವುದು. ಜುಲೈ 19ರಂದು ಬೀದರ್ನಲ್ಲಿ ಮೆರವಣಿಗೆ ಜಾಥಾ ಆಯೋಜಿಸಲಾಗಿದೆ ಎಂದು ಮಾತೆ ಮಹಾದೇವಿ ಹೇಳಿದರು.
'ಲಿಂಗಾಯತ ಶ್ರೀಸಾಮಾನ್ಯನ ಧರ್ಮ. ಬಸವಣ್ಣ ಧರ್ಮಗುರು. ಆದರೆ ಪಂಚಪೀಠಗಳು ಇದನ್ನು ಒಪ್ಪಿಕೊಳ್ಳುವುದಿಲ್ಲ. ಅವರು ಬೇಕಿದ್ದರೆ ವೀರಶೈವಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಪಡೆಯಲಿ. ಆದರೆ, ಲಿಂಗಾಯತ ಧರ್ಮಕ್ಕೆ ತಗಲು ಹಾಕುವುದು ಬೇಡ' ಎಂದರು.

'ವೀರಶೈವ ಎಂಬುದು ವೇದ ಮತ್ತು ಆಗಮಗಳ ಆಧಾರದ ಮೇಲೆ ರೂಪುಗೊಂಡ ಶೈವ ಪಂಥದ ಶಾಖೆಯಾಗಿದೆ. ಅದಕ್ಕೆ ಸ್ವತಂತ್ರ ಧರ್ಮದ ಮನ್ನಣೆ ಸಾಧ್ಯವಿಲ್ಲ. ಹಾಗಾಗಿ ಲಿಂಗಾಯತ ಹಾಗೂ ವೀರಶೈವ ಪದಗಳ ಸಮಾನಾರ್ಥಕ ಬಳಕೆ ಸರಿಯಲ್ಲ. ವೀರಶೈವ ಎಂಬುದು ಲಿಂಗಾಯತ ಸಮುದಾಯದಲ್ಲಿ ನಂತರ ಬಂದು ಸೇರಿಕೊಂಡ ಒಂದು ಉಪ ಪಂಗಡ ಮಾತ್ರ' ಎಂದು ವಿವರಿಸಿದರು.
ಲಿಂಗಾಯತ ಪದಕ್ಕೆ ಸಮನಾರ್ಥಕವಾಗಿ ವೀರಶೈವ ಪದ ಬಳಕೆ ಮಾಡುತ್ತಿರುವ ಕಾರಣ ಇಲ್ಲಿಯವರೆಗೆ ಸ್ವತಂತ್ರ ಧರ್ಮ ಸ್ಥಾನಮಾನ ಸಿಕ್ಕಿಲ್ಲ. ಮಹಾಸಭಾದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬೀದರ್ನ ಖಂಡ್ರೆ ಪರಿವಾರ, ಈಗಿನ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಗೊಂದಲ ಹೆಚ್ಚಿಸುತ್ತಿದ್ದಾರೆ. ಎಲ್ಲಾ ವಿಚಾರ ಗೊತ್ತಿರುವ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಅವರು ಅರ್ಧ ಸತ್ಯ ಮಾತ್ರ ಹೇಳುತ್ತಿದ್ದಾರೆ ಎಂದು ಮಾತೆ ಮಹಾದೇವಿ ಬೇಸರ ವ್ಯಕ್ತಪಡಿಸಿದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications