ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗಾಗಿ ಬೃಹತ್ ಜಾಥಾ
ಬೀದರ್, ಜುಲೈ 20: ಲಿಂಗಾಯತ ಸ್ವತಂತ್ರ ಧರ್ಮ ಮನ್ನಣೆ ಪಡೆಯಲು ಜನಜಾಗೃತಿ ಮೆರವಣಿಗೆ ಜಾಥಾ ಯಶಸ್ವಿಯಾಗಿದೆ ಎಂದು ಎಂದು ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಘೋಷಿಸಿದ್ದಾರೆ. ಆದರೆ, ಮಾತೆ ಮಹಾದೇವಿಗೆ ಪ್ರಚಾರದ ಹುಚ್ಚು ಎಂದು ಇತಿಹಾಸ ತಜ್ಞ ಸಂಶೋಧಕ ಎಂ. ಚಿದಾನಂದ ಮೂರ್ತಿ ಟೀಕಿಸಿದ್ದಾರೆ. ಒಟ್ಟಾರೆ ಮತೊಮ್ಮೆ ವೀರಶೈವ ಹಾಗೂ ಲಿಂಗಾಯತ ನಡುವಿನ 'ಧರ್ಮ ಕದನ' ಮೊದಲುಗೊಂಡಿದೆ.
ಬೀದರ್ ನ ನೆಹರೂ ಕ್ರೀಡಾಂಗಣದಿಂದ ಆರಂಭವಾದ ಬುಧವಾರ ಆರಂಭವಾದ ಮೆರವಣಿಗೆ ಜಾಥಾ ಪ್ರಮುಖ ರಸ್ತೆಗಳಲ್ಲಿ ಸಾಗಿ ಬಸವೇಶ್ವರ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೊನೆಗೊಂಡಿತು. ನೆರೆಯ ತೆಲಂಗಾಣ ಹಾಗೂ ಮಹಾರಾಷ್ಟ್ರದ ಜಿಲ್ಲೆಗಳಿಂದ ಬಂದಿದ್ದ ಲಿಂಗಾಯತರು ಈ ಜಾಥಾದಲ್ಲಿ ಪಾಲ್ಗೊಂಡಿದ್ದರು.
ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಹಾಗೂ ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಮಹಾದೇವ ಅವರಿಗೆ ಸಲ್ಲಿಸಿದರು.
'ತಹಶೀಲ್ದಾರ್ ಗಳು ಲಿಂಗಾಯತರಿಗೆ ವೀರಶೈವ-ಲಿಂಗಾಯತ ಎಂದು ಜಾತಿ ಪ್ರಮಾಣಪತ್ರ ನೀಡುತ್ತಿದ್ದಾರೆ. ಲಿಂಗಾಯತರಲ್ಲಿ ಹಲವು ಉಪ ಜಾತಿಗಳಿವೆ. ಎಲ್ಲರಿಗೂ ವೀರಶೈವ ಲಿಂಗಾಯತ ಜಾತಿ ಪ್ರಮಾಣಪತ್ರ ಕೊಡುವುದು ಸರಿ ಅಲ್ಲ' ಎಂದು ಬಸವಲಿಂಗ ಪಟ್ಟದೇವರು ಹೇಳಿದ್ದಾರೆ. ಚಿತ್ರಕೃಪೆ: ವೀರಶೈವ ಲಿಂಗಾಯತ ಯುವ ವೇದಿಕೆ ಫೇಸ್ ಬುಕ್ ಪುಟ

ಬೀದರ್ ನಲ್ಲಿ ಬೃಹತ್ ಮೆರವಣಿಗೆ
'ಲಿಂಗಾಯತ ಸ್ವತಂತ್ರ ಧರ್ಮ' ಎಂದು ಬರೆಯಲಾದ ಟೋಪಿ, ಷಟ್ಸ್ಥಲ ಧ್ವಜ, ಬಸವೇಶ್ವರ ಚಿತ್ರ,ಕೇಸರಿ ಧ್ವಜ, ವಚನಗಳ ಫಲಕ ಸೇರಿದಂತೆ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದ ವಸ್ತುಗಳನ್ನು ಪ್ರದರ್ಶಿಸುತ್ತಾ ಘೋಷಣೆ ಕೂಗುತ್ತಾ ಬೀದರ್ ನ ತುಂಬಾ ಮೆರವಣಿಗೆ ಮಾಡಲಾಯಿತು.

ಮಾತೆ ಮಹಾದೇವಿಗೆ ಪ್ರಚಾರದ ಹುಚ್ಚು
'ಮಾತೆ ಮಹಾದೇವಿ ಅವರು ತಪ್ಪು ಮಾಹಿತಿ ಹರಡುತ್ತಿದ್ದಾರೆ. ಅವರಿಗೆ ಪ್ರಚಾರದ ಹುಚ್ಚು ಹಿಡಿದಿದೆ. ಅಖಿಲ ಭಾರತ ವೀರಶೈವ ಮಹಾಸಭಾದವರು ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಿಸಲು ಒತ್ತಾಯಿಸುತ್ತಿರುವುದು ಸರಿಯಲ್ಲ. ಲಿಂಗಾಯತರು ಹಿಂದೂ ಧರ್ಮದ ಭಾಗ ಎನ್ನುವುದನ್ನು ಅಲಕ್ಷಿಸಿ ಅವರು ಸ್ಥಾನಮಾನ ಕೇಳುತ್ತಿದ್ದಾರೆ' ಎಂದು ಸಂಶೋಧಕ ಎಂ. ಚಿದಾನಂದ ಮೂರ್ತಿ ಟೀಕಿಸಿದ್ದಾರೆ

ವೀರಶೈವ ಪಂಥಕ್ಕೆ ಹೊಸ ಆಯಾಮ
ಲಿಂಗಾಯತ ಶ್ರೀಸಾಮಾನ್ಯನ ಧರ್ಮ. ಬಸವಣ್ಣ ಧರ್ಮಗುರು. ಆದರೆ ಪಂಚಪೀಠಗಳು ಇದನ್ನು ಒಪ್ಪಿಕೊಳ್ಳುವುದಿಲ್ಲ. ಅವರು ಬೇಕಿದ್ದರೆ ವೀರಶೈವಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಪಡೆಯಲಿ. ಆದರೆ, ಲಿಂಗಾಯತ ಧರ್ಮಕ್ಕೆ ತಗಲು ಹಾಕುವುದು ಬೇಡ' ಎಂದು ಮಾತೆ ಮಹಾದೇವಿ ವಾದಿಸಿದ್ದಾರೆ. ಆದರೆ, ಪಂಚಪೀಠಗಳ ಪ್ರಕಾರ ಬಸವಣ್ಣ ಅವರು ಹೊಸ ಧರ್ಮ ಸ್ಥಾಪಕರಲ್ಲ, ವೀರಶೈವ ಪಂಥಕ್ಕೆ ಹೊಸ ಆಯಾಮ ನೀಡಿದರು ಎನ್ನಲಾಗಿದೆ.

ಮಹಾಸಭಾದಿಂದ ಅನ್ಯಾಯ
ಲಿಂಗಾಯತ ಪದಕ್ಕೆ ಸಮನಾರ್ಥಕವಾಗಿ ವೀರಶೈವ ಪದ ಬಳಕೆ ಮಾಡುತ್ತಿರುವ ಕಾರಣ ಇಲ್ಲಿಯವರೆಗೆ ಸ್ವತಂತ್ರ ಧರ್ಮ ಸ್ಥಾನಮಾನ ಸಿಕ್ಕಿಲ್ಲ. ಮಹಾಸಭಾದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬೀದರ್ನ ಖಂಡ್ರೆ ಪರಿವಾರ, ಈಗಿನ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಗೊಂದಲ ಹೆಚ್ಚಿಸುತ್ತಿದ್ದಾರೆ. ಎಲ್ಲಾ ವಿಚಾರ ಗೊತ್ತಿರುವ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಅವರು ಅರ್ಧ ಸತ್ಯ ಮಾತ್ರ ಹೇಳುತ್ತಿದ್ದಾರೆ ಎಂದು ಮಾತೆ ಮಹಾದೇವಿ ಬೇಸರ ವ್ಯಕ್ತಪಡಿಸಿದರು.
R

ವೀರಶೈವ ಎಂಬುದು ಉಪ ಪಂಗಡ
ವೀರಶೈವ ಎಂಬುದು ವೇದ ಮತ್ತು ಆಗಮಗಳ ಆಧಾರದ ಮೇಲೆ ರೂಪುಗೊಂಡ ಶೈವ ಪಂಥದ ಶಾಖೆಯಾಗಿದೆ. ಅದಕ್ಕೆ ಸ್ವತಂತ್ರ ಧರ್ಮದ ಮನ್ನಣೆ ಸಾಧ್ಯವಿಲ್ಲ. ಹಾಗಾಗಿ ಲಿಂಗಾಯತ ಹಾಗೂ ವೀರಶೈವ ಪದಗಳ ಸಮಾನಾರ್ಥಕ ಬಳಕೆ ಸರಿಯಲ್ಲ. ವೀರಶೈವ ಎಂಬುದು ಲಿಂಗಾಯತ ಸಮುದಾಯದಲ್ಲಿ ನಂತರ ಬಂದು ಸೇರಿಕೊಂಡ ಒಂದು ಉಪ ಪಂಗಡ ಮಾತ್ರ'
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ












Click it and Unblock the Notifications