ಬೆಳೆ ವಿಮೆ ನೋಂದಣಿಯಲ್ಲಿ ರಾಜ್ಯದಲ್ಲಿಯೇ ಬೀದರ್ ನಂ.1
ಬೀದರ್, ಜನವರಿ 03: ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪಟ್ಟಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂತ ಹಿಂದಿರುವ ಜಿಲ್ಲೆ ಎಂದು ಬಿಂಬಿಸಿಕೊಂಡಿರುವ ಬೀದರ್, ಬೆಳೆ ವಿಮೆ ನೋಂದಣಿಯಲ್ಲಿ ರಾಜ್ಯದಲ್ಲಿಯೇ ನಂಬರ್ ಸ್ಥಾನ ಪಡೆದುಕೊಂಡಿದೆ.
ಬೀದರ್ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿದ್ದರಾಮಯ್ಯ ಭರವಸೆ
ಬೆಳೆ ವಿಮೆ ನೋಂದಣಿಯಲ್ಲಿ ಬೀದರ್ ಜಿಲ್ಲೆ ಈ ಬಾರಿಯೂ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದುಕೊಂಡಿದೆ. 2017-18ರ ಪ್ರಸಕ್ತ ಮುಂಗಾರಿಗೆ ಜಿಲ್ಲೆಯಲ್ಲಿ 1,80,239 ಜನ ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಈ ಕಾರ್ಯಕ್ಕೆ ಕೇಂದ್ರ ಸರ್ಕಾರ ಕೂಡ ಶ್ಲಾಘನೆ ವ್ಯಕ್ತಪಡಿಸಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಕೃಷಿ ಭಾಗ್ಯ" ಯೋಜನೆಯಡಿ 2013-14ರಿಂದ ಇಲ್ಲಿಯವರೆಗೆ ಜಿಲ್ಲೆಯಾದ್ಯಂತ ಒಟ್ಟು 2311 ಕೃಷಿ ಹೊಂಡಗಳು ಹಾಗೂ 30 ಪಾಲಿಹೌಸ್ ಗಳ ನಿರ್ಮಾಣ ಪೂರ್ಣಗೊಂಡಿದೆ.
ಹಾಗೂ ಈ ಸಾಲಿನಲ್ಲಿ "ಕೃಷಿ ಭಾಗ್ಯ" ಯೋಜನಾ ವ್ಯಾಪ್ತಿಗೆ 5 ತಾಲೂಕುಗಳು ಸೇರಿದ್ದು, ಅದರ ಯೋಜನಾ ಮೊತ್ತ 2143.57 ಲಕ್ಷರೂ ಆಗಿದೆ. 2311 ಜನರು ಯೋಜನೆಯ ಲಾಭ ಪಡೆದುಕೊಂಡಿದ್ದಾರೆ ಎಂದು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೀದರ್ ನಲ್ಲಿ ನಡೆದ ನವ ಕರ್ನಾಟಕ ನಿರ್ಮಾಣ ಯಾತ್ರೆಯಲ್ಲಿ ಹೇಳಿದ್ದರು.