ಮಕ್ಕಳ ಕಳ್ಳರೆಂಬ ಸುಳ್ಳು ವದಂತಿ, ಇಬ್ಬರ ಜೀವ ಉಳಿಸಿದ ಎಸ್.ಪಿ ದೇವರಾಜ್
ಬೀದರ್, ಜುಲೈ 15: ಮಕ್ಕಳ ಕಳ್ಳರೆಂದು ತಪ್ಪಾಗಿ ಭಾವಿಸಿ ಅಪಘಾತ ಹೊಂದಿದ ಕಾರಿನ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿದ ಘಟನೆಯಲ್ಲಿ ಇಬ್ಬರು ಅಮಾಯಕರ ಜೀವ ಉಳಿಸುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮುರ್ಕಿ ಗ್ರಾಮದ ಬಳಿ ಅತೀ ವೇಗವಾಗಿ ಬಂದ ಕಾರನಲ್ಲಿದ್ದ ಮೂವರು ಉಮೇಶ ಬಿರಾದರ ಎಂಬಾತರ ಬೈಕ್ ಮೇಲೆ ಡಿಕ್ಕಿ ಮಾಡಿ ಅಪಘಾತಕ್ಕಿಡಾದರು. ಈ ವೇಳೆಯಲ್ಲಿ ಪಲ್ಟಿಯಾದ ಕಾರಿನಲ್ಲೆ ಮೂವರನ್ನು ಸುತ್ತುವರಿದ ಸ್ಥಳೀಯರು ಸುಮಾರು ಎರಡು ಗಂಟೆಗಳ ಕಾಲ ಕಾರಿನ ಮೇಲೆ ಹಲ್ಲೆ ಯತ್ನ ಮಾಡಿದ್ದಾರೆ.
ಇದೇ ವೇಳೆಯಲ್ಲಿ ಕಮಲನಗರ ಪೊಲೀಸರು ಘಟನಾ ಸ್ಥಳಕ್ಕೆ ಭೆಟಿ ಕೊಟ್ಟಿದ್ದು ಸಾವಿರಾರು ಜನರನ್ನು ನಿಯಂತ್ರಿಸುವುದು ಕಷ್ಟವಾಗಿತ್ತು. ಜಮಾಯಿಸಿದ ಜನರ ಗುಂಪು ಕಾರಿನ ಸವಾರರ ಮೇಲೆ ಹಲ್ಲೆಗೆ ಮುಂದಾದರು ಈ ವೇಳೆಯಲ್ಲಿ ಪೊಲೀಸರನ್ನು ಥಳಿಸಿದ ಜನರ ಗುಂಪನ್ನು ಸತತ ಎರಡು ಗಂಟೆಗಳ ಕಾಲ ಕಲ್ಲುಗಳ ಏಟು ತಿಂದ ಔರಾದ್ ಪಿಎಸ್ ಐ.ನಾನಾಗೌಡ, ಪೇದೆ ರಜನಿಕಾಂತ ಇನ್ನೂ ಇಬ್ಬರು ಗಾಯಗೊಂಡಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಹಂತದಲ್ಲಿ ಸಕಾಲಕ್ಕೆ ಭೇಟಿಕೊಟ್ಟ ಎಸ್.ಪಿ.ದೇವರಾಜ್ ಅವರು ಸಾವಿರಾರು ಜನರ ಸೇರಿದ್ದ ಗುಂಪಿನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿ ಪಲ್ಟಿಯಾದ ಕಾರಿನ ಅವಶೆಷ ಅಡಿಯಲ್ಲಿ ಸಿಲುಕಿದ್ದ ಇಬ್ಬರ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದು ಘಟನೆಯಲ್ಲಿ ಕಾರನಲ್ಲಿದ್ದ ಒಬ್ಬ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.
ಕಾರಿನಲ್ಲಿ ಬಂದ ಈ ಮೂವರು ಹೈದ್ರಾಬಾದ್ ಮೂಲದವರಾಗಿದ್ದು ಹಂದಿಖೆರಾ ಗ್ರಾಮದ ಬಸೀರಸಾಬ್ ಎಂಬಾತರ ಮನೆಗೆ ಊಟಕ್ಕೆ ಬಂದಿದ್ದರು ಎನ್ನಲಾಗಿದ್ದು ಊಟ ಮುಗಿಸಿ ಸಂಜೆ ಮಹಾರಾಷ್ಟ್ರದ ಉದಗಿರ ಕಡೆ ಹೊಗುವಾಗ ಬೊಟಕುಳ ತಾಂಡ ಹತ್ರ ವಿಧ್ಯಾರ್ಥಿನಿಯರಿಗೆ ಚಾಕಲೇಟ್ ಕೊಟ್ಟಿದ್ದಾರೆ. ಇದನ್ನೆ ಅಪಾರ್ಥ ಮಾಡಿಕೊಂಡ ಕೆಲವರು ಮಕ್ಕಳ ಕಳ್ಳರು ಎಂದು ಆರೋಪಿಸಿ ಹಲ್ಲೆ ಮಾಡಿದ್ದಾರೆ ಅಲ್ಲಿಂದ ತಪ್ಪಿಸಿಕೊಂಡು ಪರಾರಿಯಾದವರು ಮುರ್ಕಿಯಲ್ಲಿ ಅಪಘಾತಕ್ಕೀಡಾಗಿದ್ದಾರೆ. ನಂತರ ಇವರನ್ನು ಮಕ್ಕಳ ಕಳ್ಳರು ಎಂದು ಸುಳ್ಳು ವದಂತಿ ಹರಡಿಸಿ ಸಿಕ್ಕಾಪಟ್ಟೆ ಗದ್ದಲ ಎಬ್ಬಿಸಿ ಜನರು ಜಮಾಯಿಸುವ ಹಾಗೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.
ಘಟನಾ ಸ್ಥಳಕ್ಕೆ ಕಲ್ಬುರ್ಗಿ ಐಜಿ ಮುರುಗನ್ ಭೇಟಿ ನೀಡಿದ್ದು ಇದಕ್ಕೆ ಸಂಬಂಧಿಸಿದಂತೆ 30 ಕ್ಕೂ ಹೆಚ್ಚು ಕೀಡಿಗೇಡಿಗಳನ್ನು ಬಂಧಿಸಿರುವ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಮಕ್ಕಳ ಕಳ್ಳರು ಸುಳ್ಳು ವದಂತಿ- ಕೇಸ್ ದಾಖಲು.
ಈ ಘಟನೆಗೆ ಸಂಬಂಧಿಸಿದಂತೆ ವಾಟ್ಸ್ ಆಪ್ ಮತ್ತು ಫೇಸ್ ಬುಕ್ ನಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂದು ಸುಳ್ಳು ವದಂತಿ ಹರಡಿಸಿ ಮುರ್ಕಿ ಗ್ರಾಮದಲ್ಲಿನ ಘಟನೆಗೆ ಕಾರಣರಾದ ವಾಟ್ಸ್ ಆಪ್ ಅಡ್ಮಿನ್ ಹಾಗೂ ಫೇಸ್ ಬುಕ್ ಖಾತೆದಾರರನ್ನು ಕೂಡ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications