Job News: ಕನ್ನಡಿಗರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ
ಬೆಂಗಳೂರು, ಸೆಪ್ಟೆಂಬರ್, 7: ಕರ್ನಾಟಕದಲ್ಲಿದ್ದುಕೊಂಡೇ, ಕನ್ನಡದ ಅನ್ನ ತಿನ್ನುವ ಬಹುತೇಕ ಐಟಿ, ಬಿಟಿ ಕಂಪನಿಗಳ ಮಾಲೀಕರು ಕನ್ನಡಿಗರಿಗೆ ಉದ್ಯೋಗ ನೀಡಲು ನಿರಾಕರಿಸುತ್ತಿರುವ ಘಟನೆಗಳು ನಡೆದಿವೆ. ಇನ್ನೂ ಇದೀಗ ಕನ್ನಡಿಗರಿಗೆ ಉದ್ಯೋಗವಕಾಶಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಇಲ್ಲಿದೆ ನೋಡಿ ಮಾಹಿತಿ.
ರಾಜ್ಯ ಸರ್ಕಾರ ಜನರಿಗೆ ಶುಭಸುದ್ದಿ ಜೊತೆಗೆ ಉದ್ಯೋಗವಕಾಶಗಳನ್ನು ಒದಗಿಸುವ ಬಗ್ಗೆಯೂ ಮಾಹಿತಿ ನೀಡುತ್ತಲೇ ಇರುತ್ತದೆ. ಇದೀಗ ರಾಜ್ಯ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 2029ರ ವೇಳೆಗೆ ಬಿಟಿ ಕ್ಷೇತ್ರದಲ್ಲಿ 30,000 ಉದ್ಯೋಗ ಸೃಷ್ಟಿ ಹಾಗೂ 20,000 ಜನರಿಗೆ ವಿಶೇಷ ಕೌಶಲ್ಯ ತರಬೇತಿ ನೀಡುವ ಗುರಿಯೊಂದಿಗೆ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆ 2024-29ನೇ ಸಾಲಿನ ಜೈವಿಕ ತಂತ್ರಜ್ಞಾನ ನೀತಿಯನ್ನು ಪ್ರಕಟಿಸಿದೆ.

ರಾಜ್ಯ ಸರ್ಕಾರ ಕರ್ನಾಟಕ ಬಿಟಿ ಕ್ಷೇತ್ರಕ್ಕೆ ಹೊಸ ನವೋದ್ಯಮ, ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಪ್ರವೇಶಕ್ಕೆ ಉತ್ತೇಜನ ನೀಡುವುದು ಸೇರಿದಂತೆ ಹಲವು ಅಂಶಗಳನ್ನೊಳಗೊಂಡ ಬಿಟಿ ನೀತಿ 2024-29 ಅನ್ನು ಸಿದ್ದಪಡಿಸಿದೆ. ಬಿಟಿ ಚಟುವಟಿಕೆಗಳಿಗೆ ಬೆಂಬಲ ಮತ್ತು ಬಿಟಿ ಉದ್ಯಮದಲ್ಲಿ ಕೆಲಸ ಮಾಡುವವರಿಗೆ ಹಣಕಾಸಿನ ಪ್ರೋತ್ಸಾಹ ಹಾಗೂ ವಿವಿಧ ರಿಯಾಯಿತಿಗಳನ್ನ ನೀಡುವ ಪ್ರಮುಖಂಶಗಳಿವೆ.
ಹೊಸ ಬಿಟಿ ನೀತಿಯಲ್ಲಿ 2029ರ ವೇಳೆಗೆ 50 ಹೊಸ ಸಂಸ್ಥೆಗಳು ಸೇರಿದಂತೆ 300 ಜೈವಿಕ ತಂತ್ರಜ್ಞಾನ ಕಂಪನಿಗಳ ಓಪನ್, 30,000 ಉದ್ಯೋಗ ಸೃಷ್ಟಿ, 20,000 ಜನರಿಗೆ ಕೌಶಲ್ಯ ತರಬೇತಿ ನೀಡಲು 200ಕ್ಕೂ ಹೆಚ್ಚು ಸಂಸ್ಥೆಗಳೊಂದಿಗೆ ಪಾಲುದಾರಿಕೆ ಹೊಂದುವ ಗುರಿಯನ್ನು ಹಾಕಿಕೊಂಡಿದೆ. ಒಟ್ಟಿನಲ್ಲಿ ಇದರಿಂದ ಕನ್ನಡಿಗರುಗೆ ತುಂಬಾ ಉಪಯುಕ್ತ ಆದಂತಾಗಲಿದೆ.
ನೇರ ನೇಮಕಾತಿ ಸಂದರ್ಶನ: ಇಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ಸೆಪ್ಟೆಂಬರ್ 11ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3ರ ವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ. ಹಾಗಾದರೆ ಅಭ್ಯರ್ಥಿಗಳನ್ನು ಯಾವೆಲ್ಲಾ ದಾಖಲೆಗಳನ್ನು ತರನೇಕು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಆಸಕ್ತ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಸಂದರ್ಶನದಲ್ಲಿ 3ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದೆ.
ಇನ್ನು ಆಸಕ್ತ ಅಭ್ಯರ್ಥಿಗಳು 3 ಬಯೋಡಾಟಾ ಪ್ರತಿಗಳು, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಅಗತ್ಯ ದಾಖಲೆಗಳು ಹಾಗೂ ಫೋಟೊಗಳೊಂದಿಗೆ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ಸ್ಟೇಡಿಯಂ ರಸ್ತೆಯಲ್ಲಿನ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 7019759147ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications