9,000 ಸಣ್ಣ ವ್ಯಾಪಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಗುಡ್ ನ್ಯೂಸ್: ತೆರಿಗೆ ಮನ್ನಾ...GST Notice
ಬೆಂಗಳೂರು, ಜುಲೈ 24: ಕರ್ನಾಟಕದ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಜಿಎಸ್ಟಿ ನೋಟಿಸ್ ನೀಡಿದ್ದಾರೆ. ತೆರಿಗೆಗಾಗಿ ಕೇಂದ್ರ ಸರ್ಕಾರ ನೀತಿ ನಿಯಮಾವಳಿ ರಚಿಸಿದೆ. ಅವುಗಳ ಪಾಲನೆ ಮಾಡುವುದಷ್ಟೇ ರಾಜ್ಯ ಸರ್ಕಾರಗಳ ಕರ್ತವ್ಯವಾಗಿದೆ. ಈ ನೀತಿ-ನಿಯಮಾವಳಿಗಳ ರಚನೆಯಲ್ಲಿ ರಾಜ್ಯಗಳ ಪಾತ್ರ ಇಲ್ಲ. ವ್ಯಾಪಾರಿಗಳಿಗೆ ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೋಟಿಸ್ ನೀಡಿದ್ದರೆ ಆ ಹಳೇ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ರಾಜ್ಯದಲ್ಲಿ ಕಳೆದ ಎರಡು ಮೂರು ವರ್ಷಗಳಲ್ಲಿ ಸುಮಾರು 18,000 ಜಿಎಸ್ಟಿ ನೋಟಿಸ್ಗಳನ್ನು ಪಡೆದಿದ್ದ ಸಣ್ಣ ವ್ಯಾಪಾರಿಗಳಲ್ಲಿ ಸುಮಾರು 9,000 ವ್ಯಾಪಾರಿಗಳ ರಾಜ್ಯ ಸರ್ಕಾರದ ತೆರಿಗೆ ಮನ್ನಾ ನಿರ್ಧಾರ ಖುಷಿ ನೀಡಿದೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ಈ ಒಂದು ನಿಯಮ ಕಡ್ಡಾಯವಾಗಿರಬೇಕು ಎಂದಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಬುಧವಾರ ಸಭೆಯಲ್ಲಿ ಚರ್ಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಈ ನಿರ್ಧಾರ ಕೇಳಿದ ನಂತರಗುರುವಾರ ಯೋಜಿಸಿದ್ದ ಪ್ರತಿಭಟನೆಯನ್ನು ರದ್ದುಗೊಳಿಸಲು ವ್ಯಾಪಾರಿಗಳು ನಿರ್ಧರಿಸಿದರು.

ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್ಟಿ ನೋಟಿಸ್ ಕುರಿತು ಗೊಂದಲ ಇದೆ. ಜಿಎಸ್ಟಿ ಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಇದಕ್ಕೆ ಸಂಬಂಧಿಸಿದ ಎಲ್ಲ ನೀತಿ-ನಿಯಮಾವಳಿಗಳನ್ನು ಕೇಂದ್ರ ಸರ್ಕಾರವೇ ರಚಿಸಿದೆ. ಅವುಗಳ ಪಾಲನೆ ಮಾಡುವುದಷ್ಟೇ ರಾಜ್ಯ ಸರ್ಕಾರಗಳ ಕರ್ತವ್ಯವಾಗಿದೆ ಎಂದು ಪುನರುಚ್ಚರಿಸಿದರು. ಈ ಮೂಲಕ ನೋಟಿಸ್ ನೀಡಿದ್ದರಲ್ಲಿ ರಾಜ್ಯದ ಪಾತ್ರ ಇಲ್ಲ ಎಂದರು.
ಜಿಎಸ್ಟಿ ನೋಂದಣಿ ಕಡ್ಡಾಯ: ಸಿಎಂ
ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲಿ ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು. ಯಾರಿಗಾದರೂ ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೋಟಿಸ್ ನೀಡಿದ್ದರೆ ಆ ಹಳೆ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ ಟಿ ನೋಂದಣಿ ಆಗಿರಬೇಕು. ಅಂತಹ ವ್ಯಾಪಾರಿಗಳ ತೆರಿಗೆ ಮನ್ನ ಆಗಲಿದೆ ಎಂದರು.
ವ್ಯಾಪಾರಿ ಸಂಘ ಹೇಳಿದ್ದೇನು?
ಸರ್ಕಾರ ತೆರಿಗೆ ಮನ್ನಾ ಘೋಷಣೆ ಬೆನ್ನಲ್ಲೆ ಮಾತನಾಡಿದ, ಕರ್ನಾಟಕ ರಾಜ್ಯ ಬೇಕರಿಗಳು, ಕಾಂಡಿಮೆಂಟ್ಸ್ ಮತ್ತು ಸಣ್ಣ ಉದ್ಯಮಗಳ ಸಂಘದ ಅಭಿಲಾಷ್ ಶೆಟ್ಟಿ ಅವರು ಹರ್ಷ ವ್ಯಕ್ತಪಡಿಸಿದರು. ವ್ಯಾಪಾರಿಗಳ ಬೇಡಿಕೆ ಈಡೇರಿದ್ದು, ಅನೇಕ ವಿಧದ ಸರಕುಗಳನ್ನು ಮಾರಾಟ ಮಾಡಲಾಗುತ್ತದೆ. ಅದರಲ್ಲಿ ಹಲವರಿಗೆ ಜಿಎಸ್ಟಿಯಿಂದ ವಿನಾಯಿತಿ ನೀಡಲಾಗಿದೆ. ಹೀಗಿದ್ದರೂ, ಅನೇಕರಿಗೆ ಶೇಕಡಾ 3-40 ರಷ್ಟು ತೆರಿಗೆ ವಿಧಿಸಲಾಗಿದೆ. ಆದರೆ ಅದನ್ನು ನೋಟಿಸ್ ಜಾರಿ ವೇಳೆ ಪರಿಗಣಿಸಲಾಗಿಲ್ಲ. ಇದೆಲ್ಲ ಗೊಂದಲಗಳ ಮಧ್ಯ ಮುಖ್ಯಮಂತ್ರಿಯ ಅವರ ಸ್ವತಃ ಸ್ಪಷ್ಟನೆ, ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications