ಎಂಎಲ್ಸಿ ತುಳಸಿ ಮುನಿರಾಜುಗೌಡಗೆ ಬಿಗ್ ರಿಲೀಫ್, 2 ಕ್ರಿಮಿನಲ್ ಕೇಸ್ ರದ್ದು
ಬೆಂಗಳೂರು, ಆ.17. ವಿಧಾನಪರಿಷತ್ ಸದಸ್ಯ ತುಳಸೀ ಮುನಿರಾಜುಗೌಡಗೆ ಹೈಕೋರ್ಟ್ ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ಅವರ ವಿರುದ್ಧ ಎರಡು ಕೇಸುಗಳನ್ನು ಹೈಕೋರ್ಟ್ ರದ್ದು ಮಾಡಿದೆ.
2014 ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ, ಹಾಲಿ ವಿಧಾನಪರಿಷತ್ ಸದಸ್ಯ ಪಿ.ಎಂ.ಮುನಿರಾಜುಗೌಡ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿದೆ.
ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಮುನಿರಾಜುಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯಪೀಠ ರದ್ದುಗೊಳಿಸಿ ಆದೇಶಿಸಿತು.

'2014ರ ಲೋಕಸಭಾ ಚುನಾವಣೆ ವೇಳೆ ಮುನಿರಾಜುಗೌಡ, ಕನಕಪುರ ತಾಲ್ಲಕು ಮರಳವಾಡಿ ಹೋಬಳಿ ಗ್ರಾಮದಲ್ಲಿ 2014ರ ಏಪ್ರಿಲ್ 4ರಂದು ಸಾರ್ವಜನಿಕರಿಗೆ ಕರಪತ್ರ ವಿತರಣೆ ಮಾಡುತ್ತಿದ್ದರು. ಈ ಕರಪತ್ರಗಳಲ್ಲಿ ಹಳೆಯ ದಿನಾಂಕವಾದ 2014 ಫೆ. 27 ಅನ್ನು ನಮೂದು ಮಾಡಲಾಗಿತ್ತು' ಎಂದು ಒಟ್ಟು 350 ಕರಪತ್ರ ವಶಪಡಿಸಿಕೊಂಡಿದ್ದ ಸ್ಥಳೀಯ ಚುನಾವಣಾಧಿಕಾರಿ ಚುನಾವಣೆ ನಿಯಮ ಉಲ್ಲಂಘನೆ ಆರೋಪ ಹೊರಿಸಿ ಜನತಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 127 ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
2ನೇ ಪ್ರಕರಣವೂ ರದ್ದು: 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪಿ.ಎಂ. ಮುನಿರಾಜುಗೌಡ ಪರ ಕೆಲ ಯುವಕರು 'ನೀತಿ ಸಂಹಿತೆ ಉಲ್ಲಂಘಿಸಿ ಪ್ರಚಾರ ಮಾಡುತ್ತಿದ್ದಾರೆ' ಎಂದು ಆರೋಪಿಸಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನೂ ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯಪೀಠ ರದ್ದುಗೊಳಿಸಿದೆ.
'ಜೆ.ಪಿ.ಪಾರ್ಕ್ ವಾರ್ಡ್ ವ್ಯಾಪ್ತಿಯ ಎಚ್ಎಂಟಿ ಲೇಔಟ್ನ ಚೌಡೇಶ್ವರಿ ದೇವಾಲಯದ ಬಳಿ ಮುನಿರಾಜುಗೌಡ ಪರ ಸಂತೋಷ್, ಮಾರುತಿ, ಚೇತನ್ ಕುಮಾರ್, ಮಂಜುನಾಥ್ ಮನೆಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ' ಎಂದು ಆರೋಪಿಸಲಾಗಿತ್ತು. 'ಅಭ್ಯರ್ಥಿ ಪರ ಪ್ರಚಾರ ನಡೆಸುವವರು 2018ರ ಮೇ 26ರಂದೇ ಮತಕ್ಷೇತ್ರ ಬಿಟ್ಟು ತೆರಳುವಂತೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಈ ನಾಲ್ವರು ನೀತಿ ಸಂಹಿತೆ ಉಲ್ಲಂಘನೆ ಮಾಡಿ ಪ್ರಚಾರ ನಡೆಸಿದ್ದಾರೆ' ಎಂದು ಆರೋಪಿಸಲಾಗಿತ್ತು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications