Government Employee: ಸಾಮಾನ್ಯ ಭವಿಷ್ಯ ನಿಧಿ ಕುರಿತು ಬಿಗ್ ಅಪ್ಡೇಟ್
ಬೆಂಗಳೂರು, ಫೆಬ್ರವರಿ 24: ಸಾಮಾನ್ಯ ಭವಿಷ್ಯ ನಿಧಿ (GPF) ಸರ್ಕಾರಿ ಉದ್ಯೋಗಿಗಳ ನಿವೃತ್ತಿ ಉಳಿತಾಯ ಖಾತೆಯಾಗಿದೆ. ಕರ್ನಾಟಕ ಸರ್ಕಾರ ಈಗ ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಸಾಮಾನ್ಯ ಭವಿಷ್ಯ ನಿಧಿ ಖಾತೆಯ ಭಾಗಶಃ ಹಿಂಪಡೆಯುವಿಕೆ ಮತ್ತು ಅಂತಿಮ ಹಿಂಪಡೆಯುವಿಕೆಯ ಅಧೀಕರಣದ ಪ್ರತಿಗಳನ್ನು ವೆಚ್ಚ ಪೋರ್ಟ್ನಲ್ಲಿ ವೀಕ್ಷಿಸಲು ಮತ್ತು ಪ್ರತಿಯನ್ನು ಪಡೆಯಲು ಅವಕಾಶವನ್ನು ಕಲ್ಪಿಸಿರುವ ಕುರಿತು ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತು ಸರ್ಕಾರಿ ನೌಕರರಿಗೆ ಮಾಹಿತಿ ನೀಡಲಾಗಿದೆ.
ಈ ಕುರಿತು ನೇತ್ರಪ್ರಭಾ ಎಂ. ಧಾಯಪುಲೆ ಸರ್ಕಾರದ ಅಧೀನ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಆಡಳಿತ & ಮುಂಗಡಗಳು) ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರು ಅವರ ಸಾಮಾನ್ಯ ಭವಿಷ್ಯ ನಿಧಿ ಖಾತೆಯ ಭಾಗಶಃ ಹಿಂಪಡೆಯುವಿಕೆ ಮತ್ತು ಅಂತಿಮ ಹಿಂಪಡೆಯುವಿಕೆಯ ಅಧೀಕರಣದ ಪ್ರತಿಗಳನ್ನು ವೆಬ್ ಪೋರ್ಟಲ್ನಲ್ಲಿ ವೀಕ್ಷಿಸಲು ಮತ್ತು ಪ್ರತಿಯನ್ನು ಪಡೆಯಲು ಅವಕಾಶವನ್ನು ಕಲ್ಪಿಸಿರುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.

ಆದೇಶದ ವಿವರಗಳು: ಸಾಮಾನ್ಯ ಭವಿಷ್ಯ ನಿಧಿ ಖಾತೆಯನ್ನು ಹೊಂದಿರುವ ಚಂದಾದಾರರು ತಮ್ಮ ಸಾಮಾನ್ಯ ಭವಿಷ್ಯ ನಿಧಿಯ ಅಧೀಕರಣಗಳನ್ನು ನೋಡುವ ಹಾಗೂ ಡೌನ್ಲೋಡ್ ಮಾಡಿಕೊಳ್ಳುವ ಸೌಲಭ್ಯವನ್ನು ಪ್ರಸ್ತುತ ಅಸ್ತಿತ್ವದಲ್ಲಿರುವ AG (A&E) Public Portal ನ ಕರ್ನಾಟಕ ವೆಬ್ಸೈಟ್ (https://agopublic.kar.nic.in) ದಿನಾಂಕ 01.09.2024 ರಿಂದ ಲಭ್ಯಪಡಿಸಲಾಗಿರುತ್ತದೆ ಎಂದು ಹೇಳಿದೆ.
ಈ ಸಂಬಂಧ ಮಹಾಲೇಖಪಾಲರ ಕಛೇರಿಯು ಸಾಮಾನ್ಯ ಭವಿಷ್ಯ ನಿಧಿ ಖಾತೆಯ ಚಂದಾದಾರರ ಭಾಗಶಃ ಹಿಂಪಡೆಯುವಿಕೆ ಮತ್ತು ಅಂತಿಮ ಹಿಂಪಡೆಯುವಿಕೆಯ ಅಧೀಕರಣದ ಇ-ಸಹಿಯುಳ್ಳ ಚಂದಾದಾರರ ಪ್ರತಿಯನ್ನು ಮೇಲ್ಕಂಡ ವೆಬ್ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಲಾಗುತ್ತಿದ್ದು, ಅದನ್ನು ಚಂದಾದಾರರು/ ಚಂದಾದಾರರ ಕಾನೂನುಬದ್ಧ ವಾರಸುದಾರರು ಲಾಗಿನ್ ಆಗಿ ನೋಡಲು ಹಾಗೂ ಡೌನ್ಲೋಡ್ ಮಾಡಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ.
ಅಧೀಕರಣದ ಭೌತಿಕ ಪ್ರತಿಗಳನ್ನು ಚಂದಾದಾರರಿಗೆ ಹಿಂದಿನಂತೆ ಮೊದಲ ಮೂರು ತಿಂಗಳುಗಳ ಅವಧಿಗೆ ರವಾನಿಸಲಾಗುತ್ತಿದ್ದು, ಈ ಸೌಲಭ್ಯದ ಯಶಸ್ವಿ ಅನುಷ್ಠಾನದ ನಂತರ ಅವುಗಳನ್ನು ರವಾನಿಸುವುದನ್ನು ಸ್ಥಗಿತಗೊಳಿಸಲಾಗುವುದು. ಪ್ರಸ್ತುತ ಅಸ್ತಿತ್ವದಲ್ಲಿರುವ ಸಾಮಾನ್ಯ ಭವಿಷ್ಯ ನಿಧಿಯ ಅಂಶಿಕ/ ಪೂರ್ಣ ಹಿಂಪಡೆಯುವಿಕೆಯ ಅರ್ಜಿಗಳ ಸ್ವೀಕೃತಿ ಹಾಗೂ ಪ್ರಸ್ತುತ ಹಂತದ ಮಾಹಿತಿಯನ್ನು SMSನ ಮೂಲಕ ತಿಳಿಯಪಡಿಸುವ ಸೌಲಭ್ಯವು ಮುಂದುವರೆಯುವುದು ಎಂದು ಸ್ಪಷ್ಟಪಡಿಸಲಾಗಿದೆ.
ಇದರಿಂದ ಮೇಲ್ಕಂಡ ವೆಬ್ ಪೋರ್ಟಲ್ನಲ್ಲಿ ಪತ್ರಾಂಕಿತ ಅಧಿಕಾರಿಗಳ ವೇತನ ಹಾಗೂ ರಜೆಯ ಅಧೀಕರಣಗಳನ್ನು ಮತ್ತು ಪಿಂಚಣಿ ಅಧೀಕರಣಗಳ ಜೊತೆಗೆ ಸಾಮಾನ್ಯ ಭವಿಷ್ಯ ನಿಧಿ ಹಿಂಪಡೆಯುವಿಕೆ ಅಧೀಕರಣಗಳನ್ನು ನೋಡುವ ಹಾಗೂ ಡೌನ್ಲೋಡ್ ಮಾಡಿಕೊಳ್ಳುವ ಸೌಲಭ್ಯಗಳು ಲಭ್ಯವಿರುವಂತಾಗುತ್ತದೆ.
ಈ ವೆಬ್ ಪೋರ್ಟಲ್ ಅನ್ನು ಉಪಯೋಗಿಸುವ ಕುರಿತು ಖಜಾನೆ ಅಧಿಕಾರಿಗಳಿಗೆ/ ವೇತನ ಬಟವಾಡೆ ಅಧಿಕಾರಿಗಳಿಗೆ/ ಸಾಮಾನ್ಯ ಭವಿಷ್ಯ ನಿಧಿಯನ್ನು ಮಂಜೂರು ಮಾಡುವ ಪ್ರಾಧಿಕಾರಗಳಿಗೆ ನೀಡಲಾಗಿರುವ ಸೂಚನೆಗಳ ಪ್ರತಿಯನ್ನು ಲಗತ್ತಿಸಲಾಗಿದೆ. ಸದರಿ ಸೂಚನೆಗಳಂತ ಸಂಬಂಧಪಟ್ಟ ಅಧಿಕಾರಿಗಳು ಕ್ರಮಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ತಿಳಿಸಿದೆ.
ಬಡ್ಡಿದರ ಎಷ್ಟಿದೆ?; ಅಧಿಸೂಚನೆಯಲ್ಲಿ ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿ ದರವನ್ನು ದಿನಾಂಕ 01/01/2025 ರಿಂದ ದಿನಾಂಕ 31/03/2025 ರವರೆಗಿನ ಅವಧಿಗೆ ವಾರ್ಷಿಕ ಶೇ.7.1 ಕ್ಕೆ ನಿಗದಿಪಡಿಸಲಾಗಿದೆ ಎಂದು ತಿಳಿಸಲಾಗಿದೆ.
-
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ












Click it and Unblock the Notifications