ವಿಜಾಪುರದಲ್ಲಿ ಘರ್ಷಣೆ, ಮೂರು ದಿನ ನಿಷೇಧಾಜ್ಞೆ
ಬಿಜಾಪುರ, ಮೇ 27 : ವಿಜಾಪುರ ನಗರದಲ್ಲಿ ಬಿಜೆಪಿ ವಿಜಯೋತ್ಸವದ ವೇಳೆ ನಡೆದ ಗುಂಪು ಘರ್ಷಣೆಯಲ್ಲಿ ಪೊಲೀಸರು ಸೇರಿದಂತೆ ಎಂಟು ಮಂದಿ ಗಾಯಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸೋಮವಾರ ಸಂಜೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಯತ್ನಾಳ್ ನಗರದಲ್ಲಿ ವಿಜಯೋತ್ಸವ ಹಮ್ಮಿಕೊಳ್ಳಲಾಗಿತ್ತು. ಸಿದ್ಧೇಶ್ವರ ದೇವಸ್ಥಾನದಿಂದ ಆರಂಭಗೊಂಡ ಈ ಮೆರವಣಿಗೆ ಗಾಂಧಿ ಚೌಕ್ ಸಮೀಪ ಬಂದಾಗ ಗಲಭೆ ಉಂಟಾಯಿತು. ಪೊಲೀಸರು ಲಾಠಿ ಪ್ರಹಾರ ನಡೆಸಿ ಎರಡೂ ಗುಂಪಿನವರನ್ನು ಚದುರಿಸಿದರು.

ಗಲಭೆ ಸುದ್ದಿ ತಿಳಿಯುತ್ತಿದ್ದಂತೆ ಅಂಗಡಿ ಮಾಲೀಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಆರಂಭಿಸಿದರು. ಆದರೆ, ಅಂಗಡಿಗಳ ಮೇಲೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದರಿಂದ, ಹಲವು ಅಂಗಡಿ ಮತ್ತು ವಾಹನಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಪೊಲೀಸರು ಸೇರಿದಂತೆ ಎಂಟಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. [ನರೇಂದ್ರ ಮೋದಿ ಸಂಪುಟ ಹೀಗಿದೆ ನೋಡಿ]
ಘಟನೆಗೆ ಕಾರಣವೇನು : ವಿಜಯೋತ್ಸವದ ಮೆರಮಣಿಗೆಯಲ್ಲಿ ಬಂದವರು ಬಣ್ಣ ಎರಚುತ್ತಿದ್ದರು. ಕೆಲವರು ಗಾಂಧಿಚೌಕ್ ಬಳಿ ತರಕಾರಿ ಮಾರುತ್ತಿದ್ದ ಮಹಿಳೆಯರ ಮೇಲೂ ಬಣ್ಣ ತೂರಿದರು. ನಂತರ ತರಕಾರಿ ಮಾರುಕಟ್ಟೆಗೆ ನುಗ್ಗಿ ಹಣ್ಣು-ತರಕಾರಿಗಳನ್ನು ಚೆಲ್ಲಾಪಿಲ್ಲಿ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎಂದು ಗುಂಪಿನವರು ಆರೋಪಿಸುತ್ತಿದ್ದಾರೆ.
ವಿಜಯೋತ್ಸವದ ಮೆರವಣಿಗೆ ಮೇಲೆ ಕಲ್ಲು ತೂರಲಾಯಿತು. ನಮ್ಮ ಮುಖಂಡರ ವಾಹನಗಳನ್ನು ಜಖಂಗೊಳಿಸಲಾಯಿತು. ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಮತ್ತೊಂದು ಗುಂಪಿನವರು ಪ್ರತ್ಯಾರೋಪ ಮಾಡಿದ್ದಾರೆ. ಆದರೆ, ಘಟನೆಗೆ ನಿಖರವಾದ ಕಾರಣ ಏನು ಎಂದು ತಿಳಿದುಬಂದಿಲ್ಲ.
ಸ್ಥಳಕ್ಕೆ ಆಗಮಿಸಿದ ಶಾಸಕ ಡಾ.ಮಕ್ಬೂಲ್ ಬಾಗವಾನ "ಘಟನೆಗೆ ಯಾರು ಕಾರಣ ಎಂಬ ಬಗ್ಗೆ ತನಿಖೆ ನಡೆಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಜನರು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ".
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications