ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಂಬಳಬೇಕು ಚಳವಳಿಗಾರರಿಗೆ ಗುಡ್ ನ್ಯೂಸ್, ಎರಡು ದಿನದಲ್ಲಿ ಒಳ್ಳೆ ಸುದ್ದಿ

ಕಂಬಳಕ್ಕೆ ಅವಕಾಶ ನೀಡಲು ಮಸೂದೆ ಸಿದ್ಧವಾಗಿದೆ. ಒಂದೆರಡು ದಿನದಲ್ಲಿ ಮಸೂದೆಯನ್ನು ನಾವು ಸದನದಲ್ಲಿ ಮಂಡಿಸಲಿದ್ದೇವೆ, ಎಂದು ಕಾನೂನು ಸಚಿವ ಟಿ.ಬಿ ಜಯಚಂದ್ರ ಹೇಳಿದ್ದಾರೆ.

By Sachhidananda Acharya
|
Google Oneindia Kannada News

ಬೆಂಗಳೂರು, ಫೆಬ್ರವರಿ 6: "ಕಂಬಳಕ್ಕೆ ಅವಕಾಶ ನೀಡಲು ಮಸೂದೆ ಸಿದ್ಧವಾಗಿದೆ. ಒಂದೆರಡು ದಿನದಲ್ಲಿ ಮಸೂದೆಯನ್ನು ನಾವು ಸದನದಲ್ಲಿ ಮಂಡಿಸಲಿದ್ದೇವೆ," ಎಂದು ಕಾನೂನು ಸಚಿವ ಟಿ.ಬಿ ಜಯಚಂದ್ರ ಹೇಳಿದ್ದಾರೆ. [ಕಂಬಳ ಎಂದರೇನು? ಕಂಬಳ ನಮಗೇಕೆ ಬೇಕು?]

ಇಂದು (ಸೋಮವಾರ) ಕರ್ನಾಟಕ ವಿಧಾನಸಭೆಯ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ರಾಜ್ಯಪಾಲರು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಮಂಗಳವಾರ ಅಥವಾ ಬುಧವಾರ ಸರಕಾರ ಸದನದ ಮುಂದೆ ಮಸೂದೆ ಮಂಡಿಸಲಿದೆ. ಮಸೂದೆಗೆ ಒಪ್ಪಿಗೆ ಸಿಗುತ್ತಿದ್ದಂತೆ ಕಂಬಳ ನಡೆಸಲು ಇದ್ದ ಅಡ್ಡಿ ನಿವಾರಣೆಯಾಗಲಿದೆ. ಈ ಮೂಲಕ ಕರಾವಳಿ ಜಿಲ್ಲೆಗಳ ವರ್ಷಗಳ ಬೇಡಿಕೆ ಕೊನೆಗೂ ಇಡೇರಲಿದೆ.[ಕಂಬಳ ಆಡುವವರಿಗೆ ಮಾನ ಮರ್ಯಾದೆ ಇಲ್ಲ: ಇಲ್ಲೊಂದು ಅಪಸ್ವರ]

Bill is ready for introduction of Kambala – TB Jayachandra

ತಮಿಳುನಾಡಿನಲ್ಲಿ ಜಲ್ಲಿಕಟ್ಟು ಪ್ರತಿಭಟನೆ ಆರಂಭವಾಗಿ ಯಶಸ್ವಿಯಾಗಿತ್ತು. ಅಲ್ಲಿನ ಸರಕಾರ ಪ್ರತಿಭಟನೆ ಹಿನ್ನಲೆಯಲ್ಲಿ ತಿದ್ದುಪಡಿ ತಂದು ಜಲ್ಲಿಕಟ್ಟಿಗೆ ಅನುವು ಮಾಡಿಕೊಟ್ಟಿತ್ತು. ಇದೇ ಹೊತ್ತಿಗೆ ಕರ್ನಾಟಕದಲ್ಲಿಯೂ ಕಂಬಳಕ್ಕೆ ಅನುವು ನೀಡಬೇಕು ಎಂದು ಕೋರಿ ಪ್ರತಿಭಟನೆಗಳು ಆರಂಭವಾಗಿದ್ದವು. ಕೊನೆಗೆ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು. ಈ ಮೂಲಕ ಕಂಬಳ ನಡೆಸಲು ಅವಕಾಶ ನೀಡುವುದಾಗಿ ಕರ್ನಾಟಕ ಸರಕಾರ ಭರವಸೆ ನೀಡಿತ್ತು. ಅದರಂತೆ ಈಗ ಮಸೂದೆ ಸಿದ್ದವಾಗಿದ್ದು ಒಂದೆರಡು ದಿನಗಳಲ್ಲಿ ಮಂಡನೆಯಾಗಲಿದೆ.

English summary
Good news for KambalaBelu Army in Karnataka. The Law Minister TB Jayachandra on Monday said that, bill on Kambala is ready for introduction and in a day or two it will be introduced in the house.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X