ಕರ್ನಾಟಕದಲ್ಲಿ ಸರ್ಕಾರಿ ವೈದ್ಯರಿಗೆ ದಿನಕ್ಕೆ 3 ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ
ಬೆಂಗಳೂರು, ಫೆಬ್ರವರಿ 2: ಕರ್ನಾಟಕದ ಪ್ರತಿಯೊಂದು ವೈದ್ಯಕೀಯ ಮಹಾವಿದ್ಯಾಲಯ, ಕಾಲೇಜು ಮತ್ತು ಸಂಸ್ಥೆಗಳಲ್ಲಿ ಒಂದು ದಿನಕ್ಕೆ ಮೂರು ಬಾರಿ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿಯೇ ಇರುವುದಿಲ್ಲ. ತಮ್ಮ ಕೆಲಸದ ಅವಧಿಯಲ್ಲಿ ಬೇರೆ ಕಡೆಗೆ ಹೋಗಿ ಕೆಲಸ ಮಾಡುತ್ತಾರೆ ಎಂಬ ಬಗ್ಗೆ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವೈದ್ಯಕೀಯ ಮಹಾವಿದ್ಯಾಲಯಗಳು, ಕಾಲೇಜುಗಳು ಮತ್ತು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರುಗಳು ಬಯೋಮೆಟ್ರಿಕ್ ಹಾಜರಾತಿಯನ್ನು ಪಾಲಿಸುವ ಕುರಿತು ಬುಧವಾರ ಆದೇಶಿಸಲಾಗಿದೆ.

ಒಂದು ದಿನಕ್ಕೆ ಮೂರು ಬಾರಿ ಬಯೋಮೆಟ್ರಿಕ್:
ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಒಂದು ದಿನದಲ್ಲಿ ಮೂರು ಬಾರಿ ಬಯೋಮೆಟ್ರಿಕ್ ಹಾಜರಾತಿ ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ. ಬೆಳಗ್ಗೆ ಕೆಲಸ ಆರಂಭಿಸುವ ವೇಳೆಯಲ್ಲಿ ಮೊದಲ ಬಯೋಮೆಟ್ರಿಕ್ ಹಾಜರಾತಿ, ಮಧ್ಯಾಹ್ನ ಊಟದ ವಿರಾಮದ ನಂತರದಲ್ಲಿ ಎರಡನೇ ಬಯೋಮೆಟ್ರಿಕ್ ಹಾಜರಾತಿ ಹಾಗೂ ಸಂಜೆ ದಿನದ ಕರ್ತವ್ಯದ ಅವಧಿ ಅಂತ್ಯದ ವೇಳೆಯಲ್ಲಿ ಮೂರನೇ ಬಯೋಮೆಟ್ರಿಕ್ ಹಾಜರಾತಿಯನ್ನು ಹಾಕುವುದು ಕಡ್ಡಾಯವಾಗಿದೆ.
ಆರೋಗ್ಯ ಸಚಿವರಿಗೆ ದೂರು ನೀಡಿದ್ದ ಶಾಸಕರು:
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಸರಿಯಾಗಿ ಸೇವೆ ಸಲ್ಲಿಸುತ್ತಿಲ್ಲ. ಬೆಳಗ್ಗೆ ಆಸ್ಪತ್ರೆಗೆ ಆಗಮಿಸುವ ವೈದ್ಯರು ಹಾಜರಾತಿಗೆ ಸಹಿ ಮಾಡಿ ಒಂದು ಗಂಟೆಯಷ್ಟೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಾರೆ. ಅನಂತರದಲ್ಲಿ ಖಾಸಗಿ ಆಸ್ಪತ್ರೆಗೆ ತೆರಳಿ ತಮ್ಮ ಕಾರ್ಯ ನಿರ್ವಹಿಸುತ್ತಾರೆ ಎಂದು ಬಿಜೆಪಿ ಶಾಸಕರೇ ಆರೋಪಿಸಿದ್ದರು. ಹುಬ್ಬಳ್ಳಿಯಲ್ಲಿ ಈ ಬಗ್ಗೆ ಸ್ವತಃ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಗಮನಕ್ಕೆ ತಂದಿದ್ದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications