ಲೋಕವಳ್ಳಿಗೆ ಲಗ್ಗೆಯಿಟ್ಟ ಕಾಡೆಮ್ಮೆ: ಓಡಿಸಲು ಹರಸಾಹಸ ಪಟ್ಟ ಸ್ಥಳೀಯರು
Recommended Video

ಚಿಕ್ಕಮಗಳೂರು, ಜುಲೈ.18: ಜಿಲ್ಲೆಯ ಮೂಡಿಗೆರೆ ತಾಲೂಕಿನ ಲೋಕವಳ್ಳಿ ಬಳಿ ಇಂದು ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಏಕಾಏಕಿ ಕಾಡೆಮ್ಮೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಕಾಫಿತೋಟದ ಮೂಲಕ ಊರಂಚಿಗೆ ಬಂದ ಕಾಡೆಮ್ಮೆಯನ್ನು ಓಡಿಸಲು ಗ್ರಾಮಸ್ಥರು ಕೆಲ ಕಾಲ ಹರಸಾಹಸಪಟ್ಟಿದ್ದಾರೆ.
ಇನ್ನು ಕೆಲ ಯುವಕರು ಅಪರೂಪದ ಅತಿಥಿ ಗ್ರಾಮಕ್ಕೆ ಲಗ್ಗೆ ಇಟ್ಟಿದ್ದನ್ನು ಕಂಡು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದು ಎಂಜಾಯ್ ಮಾಡಿದ್ದಾರೆ. ಕಾಡೆಮ್ಮೆ ಬೆಳಗ್ಗೆಯಿಂದ ಗ್ರಾಮದಲ್ಲಿ ಬೀಡು ಬಿಟ್ಟಿದ್ದು, ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡೆಮ್ಮೆ ಓಡಿಸಲು ಹರಸಾಹಸ ಪಡುತ್ತಿದ್ದಾರೆ.
ಹಾವು ಪ್ರತ್ಯಕ್ಷ: ಮತ್ತೊಂದು ಘಟನೆಯಲ್ಲಿ ಚಿಕ್ಕಮಗಳೂರಿನ ಕಾಳಿದಾಸನಗರದ ಸತ್ಯನಾರಾಯಣ ಎಂಬುವರ ಮನೆಯ ಸ್ನಾನದ ಕೊಠಡಿಯಲ್ಲಿ ನಾಲ್ಕು ಅಡಿ ಉದ್ದದ ಗೋಧಿ ನಾಗರ ಹಾವು ಪ್ರತ್ಯಕ್ಷವಾಗಿದೆ. ಸತ್ಯನಾರಾಯಣ ನಾದಿನಿ ಮೈತ್ರಿ ಬೆಡ್ ರೂಂ ಗೆ ವಿಶ್ರಾಂತಿ ಪಡೆಯಲು ಹೋದಾಗ ಈ ನಾಗರಹಾವು ಕಾಣಿಸಿದೆ.

ಸ್ನಾನದ ಕೊಠಡಿ ಬೆಡ್ ರೂಂ ಪಕ್ಕದಲ್ಲೇ ಇದ್ದು, ರಟ್ಟಿನ ಬಾಕ್ಸ್ ಮೇಲಿದ್ದ ಹಾವು ನೋಡಿ ಮೈತ್ರಿ ಭಯಗೊಂಡಿದ್ದಾರೆ. ನಂತರ ಮನೆಯವರೆಲ್ಲಾ ಹಾವು ನೋಡಿ ಭಯಗೊಂಡು ಹೊರಬಂದಿದ್ದಾರೆ.
ನಂತರ ಮನೆ ಮಾಲೀಕ ಸ್ನೇಕ್ ನರೇಶ್ ಗೆ ಮಾಹಿತಿ ನೀಡಿದ ಮೇಲೆ, ಸ್ನೇಕ್ ನರೇಶ್ ಹಾವನ್ನು ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
-
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ












Click it and Unblock the Notifications