ಲೋಕವಳ್ಳಿಗೆ ಲಗ್ಗೆಯಿಟ್ಟ ಕಾಡೆಮ್ಮೆ: ಓಡಿಸಲು ಹರಸಾಹಸ ಪಟ್ಟ ಸ್ಥಳೀಯರು
Recommended Video

ಚಿಕ್ಕಮಗಳೂರು, ಜುಲೈ.18: ಜಿಲ್ಲೆಯ ಮೂಡಿಗೆರೆ ತಾಲೂಕಿನ ಲೋಕವಳ್ಳಿ ಬಳಿ ಇಂದು ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಏಕಾಏಕಿ ಕಾಡೆಮ್ಮೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಕಾಫಿತೋಟದ ಮೂಲಕ ಊರಂಚಿಗೆ ಬಂದ ಕಾಡೆಮ್ಮೆಯನ್ನು ಓಡಿಸಲು ಗ್ರಾಮಸ್ಥರು ಕೆಲ ಕಾಲ ಹರಸಾಹಸಪಟ್ಟಿದ್ದಾರೆ.
ಇನ್ನು ಕೆಲ ಯುವಕರು ಅಪರೂಪದ ಅತಿಥಿ ಗ್ರಾಮಕ್ಕೆ ಲಗ್ಗೆ ಇಟ್ಟಿದ್ದನ್ನು ಕಂಡು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದು ಎಂಜಾಯ್ ಮಾಡಿದ್ದಾರೆ. ಕಾಡೆಮ್ಮೆ ಬೆಳಗ್ಗೆಯಿಂದ ಗ್ರಾಮದಲ್ಲಿ ಬೀಡು ಬಿಟ್ಟಿದ್ದು, ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡೆಮ್ಮೆ ಓಡಿಸಲು ಹರಸಾಹಸ ಪಡುತ್ತಿದ್ದಾರೆ.
ಹಾವು ಪ್ರತ್ಯಕ್ಷ: ಮತ್ತೊಂದು ಘಟನೆಯಲ್ಲಿ ಚಿಕ್ಕಮಗಳೂರಿನ ಕಾಳಿದಾಸನಗರದ ಸತ್ಯನಾರಾಯಣ ಎಂಬುವರ ಮನೆಯ ಸ್ನಾನದ ಕೊಠಡಿಯಲ್ಲಿ ನಾಲ್ಕು ಅಡಿ ಉದ್ದದ ಗೋಧಿ ನಾಗರ ಹಾವು ಪ್ರತ್ಯಕ್ಷವಾಗಿದೆ. ಸತ್ಯನಾರಾಯಣ ನಾದಿನಿ ಮೈತ್ರಿ ಬೆಡ್ ರೂಂ ಗೆ ವಿಶ್ರಾಂತಿ ಪಡೆಯಲು ಹೋದಾಗ ಈ ನಾಗರಹಾವು ಕಾಣಿಸಿದೆ.

ಸ್ನಾನದ ಕೊಠಡಿ ಬೆಡ್ ರೂಂ ಪಕ್ಕದಲ್ಲೇ ಇದ್ದು, ರಟ್ಟಿನ ಬಾಕ್ಸ್ ಮೇಲಿದ್ದ ಹಾವು ನೋಡಿ ಮೈತ್ರಿ ಭಯಗೊಂಡಿದ್ದಾರೆ. ನಂತರ ಮನೆಯವರೆಲ್ಲಾ ಹಾವು ನೋಡಿ ಭಯಗೊಂಡು ಹೊರಬಂದಿದ್ದಾರೆ.
ನಂತರ ಮನೆ ಮಾಲೀಕ ಸ್ನೇಕ್ ನರೇಶ್ ಗೆ ಮಾಹಿತಿ ನೀಡಿದ ಮೇಲೆ, ಸ್ನೇಕ್ ನರೇಶ್ ಹಾವನ್ನು ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications