ಬಿಟ್ ಕಾಯಿನ್ ಹಗರಣ: ಡಿವೈಎಸ್ಪಿ ಬಂಧನಕ್ಕೆ ಹೈಕೋರ್ಟ್ ತಡೆ
ಬೆಂಗಳೂರು, ಜೂನ್ 07: ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪಿಗಳನ್ನು ಅಕ್ರಮವಾಗಿ ತಮ್ಮ ವಶದಲ್ಲಿಟ್ಟುಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್ಗಳ ವರ್ಗಾವಣೆ ಮತ್ತು ಪಾಸ್ವರ್ಡ್ ಬದಲಾವಣೆ ಮಾಡಿದ ಆರೋಪ ಎದುರಿಸುತ್ತಿರುವ ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಶ್ರೀಧರ್ ಕೆ. ಪೂಜಾರ್ ಬಂಧನಕ್ಕೆ ಹೈಕೋರ್ಟ್ ತಡೆ ನೀಡಿದೆ.
ನ್ಯಾಯಾಲಯ ಅವರನ್ನು ಮುಂದಿನ ವಿಚಾರಣೆಯ ತನಕ ಬಂಧಿಸದಂತೆ ಆದೇಶಿಸಿದೆ. ಹಾಗಾಗಿ ಸದ್ಯ ಅವರು ಬಂಧನ ಭೀತಿಯಿಂದ ಪಾರಾಗಿದ್ದಾರೆ. ಪೊಲೀಸ್ ಅಧಿಕಾರಿ ಶ್ರೀಧರ್ ಕೆ. ಪೂಜಾರ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ಜಿ. ಉಮಾ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ತನಿಖೆಗೆ ಹಾಜರಾಗಲು ಸಿದ್ಧ: ಅರ್ಜಿದಾರರ ಪರ ವಕೀಲರು, 'ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೊಸದಾಗಿ ನಿರೀಕ್ಷಣಾ ಜಾಮೀನು ಕೋರಲಾಗಿದೆ. ಈ ಹಿಂದೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್ ಸೂಚನೆಯಂತೆ ತನಿಖಾಧಿಕಾರಿಯ ಮುಂದೆ ಪೂಜಾರ್ ವಿಚಾರಣೆಗೆ ಒಳಪಟ್ಟಿದ್ದರು. ಈ ಸಂದರ್ಭದಲ್ಲಿ ಪೂಜಾರ್ ಅವರ ಮೊಬೈಲ್ ಫೋನ್, ಲ್ಯಾಪ್ಟಾಪ್ ಮತ್ತು ಪೆನ್ಡ್ರೈವ್ ಅನ್ನು ಜಪ್ತಿ ಮಾಡಲಾಗಿದೆ. ಈಗ ಅಹಂಕಾರವನ್ನು ತೃಪ್ತಿಪಡಿಸಿಕೊಳ್ಳಲು ಪೂಜಾರ್ ಅವರನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ' ಎಂದು ಆಕ್ಷೇಪಿಸಿದರು.
'ಶ್ರೀಕಿಯು ತನ್ನ ಸ್ನೇಹಿತರನ್ನು ಸಂಧಿಸಲು ಅವಕಾಶ ಮಾಡಿಕೊಟ್ಟಿರುವುದು ಮತ್ತು ಶ್ರೀಕಿ ಇತರರನ್ನು ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡಿರುವ ಆರೋಪ ಪೂಜಾರ್ ಮೇಲಿದೆ. ಈ ಹಿಂದೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್ ಆದೇಶದಂತೆ ಮೂರು ಬಾರಿ ತನಿಖಾಧಿಕಾರಿಯ ಮುಂದೆ ಪೂಜಾರ್ ಹಾಜರಾಗಿದ್ದು, ತನಿಖಾಧಿಕಾರಿ ಹಿಂಬರಹ ನೀಡಿದ್ದಾರೆ'.
'ಪೂಜಾರ್ ತನಿಖಾಧಿಕಾರಿಯ ಮುಂದೆ ಹಾಜರಾಗಲು ಸಿದ್ಧರಿದ್ದಾರೆ. ಆದರೆ, ಅವರ ಹಿತಾಸಕ್ತಿ ಕಾಪಾಡಬೇಕು. ಪೂಜಾರ್ ಅವರು ಡಿವೈಎಸ್ಪಿ ಶ್ರೇಣಿಯ ಅಧಿಕಾರಿಯಾಗಿದ್ದು, ಹಲವು ಪ್ರಕರಣಗಳಲ್ಲಿ ತನಿಖಾಧಿಕಾರಿಯಾಗಿದ್ದಾರೆ. ಒಂದೊಮ್ಮೆ ಪೂಜಾರ್ ಬಂಧನವಾದರೆ ಪ್ರತಿವಾದಿಗಳು ಪೂಜಾರ್ ಬಂಧನದ ವಿಚಾರವನ್ನು ಪ್ರಸ್ತಾಪಿಸಬಹುದು'
'ಅವರ ಇಡೀ ಸೇವೆಯು ಕಳಂಕಿತವಾಗಲಿದೆ. ಪೂಜಾರ್ ತನಿಖೆಯಲ್ಲಿ ಭಾಗಿಯಾಗಲಿದ್ದಾರೆ. ಹಿಂದಿನ ಹೈಕೋರ್ಟ್ ಆದೇಶದಲ್ಲಿ ಪೂಜಾರ್ ಸಲ್ಲಿಸುವ ಜಾಮೀನು ಅರ್ಜಿಗೆ ಪ್ರಾಸಿಕ್ಯೂಷನ್ ವಿರೋಧಿಸಬಾರದು ಎಂದು ಷರತ್ತು ವಿಧಿಸಲಾಗಿತ್ತು. ಇದಕ್ಕೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪೂಜಾರ್ಗೆ ಹೊಸದಾಗಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಬಹುದು ಎಂದಿತ್ತು. ಅದರಂತೆ ಹೊಸದಾಗಿ ನಿರೀಕ್ಷಣಾ ಜಾಮೀನು ಕೋರಲಾಗಿದೆ. ಒಂದೊಮ್ಮೆ ಪೂಜಾರ್ ಬಂಧನವಾದರೆ ಅವರ ಇಡೀ ವೃತ್ತಿ ಬದುಕು ನಾಶವಾಗಲಿದೆ' ಎಂದರು.
ರಾಜ್ಯ ಸರ್ಕಾರವಾಗಿ ಹಾಜರಾಗಿದ್ದ ವಿಶೇಷ ಸರ್ಕಾರಿ ಅಭಿಯೋಜಕರು, 'ಈ ಪ್ರಕರಣದಲ್ಲಿ ಕೆಲವು ಪರಿಕರಗಳನ್ನು ಜಪ್ತಿ ಮಾಡಬೇಕಿದೆ. ಬಿಟ್ ಕಾಯಿನ್ ಹಗರಣದ ರೂವಾರಿ ಶ್ರೀಕಾಂತ್ ಅಲಿಯಾಸ್ ಶ್ರೀಕಿ ಭಾಗಿಯಾಗಿರುವ ಪ್ರಕರಣದಲ್ಲಿ ಆತನನ್ನು ಕೆಲವು ಲೈವ್ ಸರ್ವರ್ಗಳನ್ನು ಹ್ಯಾಕ್ ಮಾಡಲಾಗಿದೆ. ಅಲ್ಲಿಂದ ಬಿಟ್ಕಾಯಿನ್ಗಳನ್ನು ಕದಿಯಲಾಗಿದೆ. ಇದೊಂದು ಗಂಭೀರ ಪ್ರಕರವಾಗಿದ್ದು, ಸಾವಿರಾರೂ ಕೋಟಿ ರೂಪಾಯಿ ಮೌಲ್ಯದ ಹಗರಣವಾಗಿದೆ. ಇದಕ್ಕೆ ವಿಸ್ತೃತವಾದ ಆಕ್ಷೇಪಣೆ ಸಲ್ಲಿಸಬೇಕಿದೆ' ಎಂದರು.
'ಮೇ 2ರಂದು ಹೈಕೋರ್ಟ್ನ ಏಕಸದಸ್ಯ ಪೀಠವು ಪೂಜಾರ್ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿತ್ತು. ಈ ಪ್ರಕರಣದಲ್ಲಿ ಕೆಲವು ಪರಿಕರಗಳನ್ನು ಜಪ್ತಿ ಮಾಡಬೇಕಿದೆ. ಪೂಜಾರ್ ಅವರು ತನಿಖಾಧಿಕಾರಿಯ ಮುಂದೆ ಹಾಜರಾಗಿ, ಇಡೀ ತನಿಖೆಯನ್ನು ದಾರಿ ತಪ್ಪಿಸಿದ್ದಾರೆ. ತನಿಖೆ ಹಳಿ ತಪ್ಪಿದೆ, ಅವರಿಗೆ ಮಧ್ಯಂತರ ರಕ್ಷಣೆ ನೀಡುವುದು ಸೂಕ್ತವಲ್ಲ. ವಾಟ್ಸಾಪ್ ಸಂವಹನ ಪತ್ತೆಯಾದ ಮೇಲೆ ಶ್ರೀಧರ್ ಪೂಜಾರ್ ಮತ್ತು ಇತರೆ ಅಧಿಕಾರಿಗಳು ಎಸಗಿರುವ ಅಪರಾಧ ಬಹಿರಂಗವಾಗಿದೆ. ಪ್ರಕರಣ ನಡೆದ ಸಂದರ್ಭದಲ್ಲಿ ಒಂದು ಬಿಟ್ ಕಾಯಿನ್ ಮೌಲ್ಯ 40 ಲಕ್ಷ ರೂಪಾಯಿ ಇತ್ತು. ಈಗ ಅದು 50 ಲಕ್ಷಕ್ಕೆ ಏರಿಕೆಯಾಗಿದೆ' ಎಂದು ವಾದ ಮಂಡಿಸಿದರು.
ಪ್ರಕರಣದ ಹಿನ್ನೆಲೆ: ಡಾರ್ಕ್ ನೆಟ್ ಮೂಲಕ ಮಾದಕ ವಸ್ತು ಖರೀದಿಸಿದ ಆರೋಪದ ಮೇಲೆ 2020ರ ನವೆಂಬರ್ನಲ್ಲಿ ಶ್ರೀಕಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದರು. ಆಗ ಸಿಸಿಬಿಯಲ್ಲಿ ಪೂಜಾರ್ ತನಿಖಾಧಿಕಾರಿಯಾಗಿದ್ದರು. ಶ್ರೀಕಿ ಬಂಧನದೊಂದಿಗೆ ಕರ್ನಾಟಕದಲ್ಲಿ ಸೈಬರ್ ಅಪರಾಧಗಳು ಬೆಳಕಿಗೆ ಬಂದಿದ್ದವು.
ಇದರಲ್ಲಿ 2019ರ ಜುಲೈ-ಆಗಸ್ಟ್ ಅವಧಿಯಲ್ಲಿ ಕರ್ನಾಟಕ ಸರ್ಕಾರದ ಇ-ಆಡಳಿತ ಘಟಕದ 11.5 ಕೋಟಿ ರೂಪಾಯಿ ದೋಚಿದ್ದ ಪ್ರಕರಣವು ಬೆಳಕಿಗೆ ಬಂದಿತ್ತು. ಆರೋಪಿಗಳನ್ನು ಅಕ್ರಮವಾಗಿ ವಶದಲ್ಲಿಟ್ಟುಕೊಂಡು ಬಿಟ್ ಕಾಯಿನ್ ವರ್ಗಾವಣೆ, ಪಾಸ್ವರ್ಡ್ ಬದಲಾವಣೆ ಇತ್ಯಾದಿ ಕೃತ್ಯಕ್ಕೆ ಬಳಕೆ ಮಾಡಿದ ಆರೋಪ ಪೂಜಾರ್ ಮತ್ತಿತರರ ವಿರುದ್ದ ಇದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications