'ರಾಜ್ಯದಲ್ಲಿ ಬೆದರಿಕೆ, ಕೊಲೆಗೆ ಸುಪಾರಿ ನೀಡುವ ಕಾಂಗ್ರೆಸ್: BJP'
ಬೆಂಗಳೂರು, ಜೂನ್ 07: ಕರ್ನಾಟಕ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದರು. ಶುಕ್ರವಾರ ಸುಪ್ರೀಂ ಕೋರ್ಟ್ ಆ ಜಾಮೀನು ರದ್ದು ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ರಾಜ್ಯ ಸರ್ಕಾರ ಆರೋಪಿ ಮತ್ತು ಅಪರಾಧಿಗಳಿಂದ ಕೂಡಿರುವ ಒಂದು ಪಕ್ಷವಾಗಿದೆ ಎಂದು ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.
ವಿನಯ್ ಕುಲಕರ್ಣಿ ಜಾಮೀನು ರದ್ದಾದ ಬಳಿಕ ಪ್ರತಿಕ್ರಿಯಿಸಿರುವ ಕರ್ನಾಟಕ ಬಿಜೆಪಿಯು, ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಇದರಿಂದಾಗಿ ಮತ್ತೆ ಜೈಲಿನತ್ತ ವಿನಯ್ ಕುಲಕರ್ಣಿ ಹೆಜ್ಜೆ ಇಟ್ಟಿದ್ದಾರೆ.

ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡನನ್ನು ಕೊಲೆ ಮಾಡಿಸಿದ್ದೇ ಕರ್ನಾಟಕ ರಾಜ್ಯ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಎಂದು ಆತನ ಆಪ್ತನೇ ಆದ ಬಸವರಾಜ ಮುತ್ತಗಿ ಕೋರ್ಟ್ನಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಸಿಬಿಐ ಮನವಿ ಪುರಸ್ಕರಿಸುವ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದೆ. ಇದೆಲ್ಲ ನೋಡಿದರೆ ಕರ್ನಾಟಕದಲ್ಲಿ ರಾಜ್ಯದಲ್ಲಿ ಕೊಲೆ, ಬೆದರಿಕೆ, ಆತ್ಮಹತ್ಯೆಗೆ ಸುಪಾರಿ ನೀಡುವ ಮುಖ್ಯ ಕಚೇರಿ ರಾಜ್ಯ ಕಾಂಗ್ರೆಸ್ಸೇ ಆಗಿದೆ ಎಂದು ಬಿಜೆಪಿ ದೂರಿದೆ.
ಇನ್ನೊಂದು ವಾರದಲ್ಲಿ ಮತ್ತೆ ಜೈಲಿನತ್ತ ಶಾಸಕ
ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿ ಆದೇಶಿಸುತ್ತಿದ್ದಂತೆ ಕೊಲೆ ಆರೋಪಿ ಶಾಸಕ ವಿನಯ್ ಕುಲಕರ್ಣಿ ಅವರು ಒಂದು ವಾರದಲ್ಲಿ ಜೈಲಾಧಿಕಾರಿಗಳ ಮುಂದೆ ಹಾಜರಾಗಲಿದ್ದಾರೆ. ಇಲ್ಲವೇ ಸಿಬಿಐ ಕೋರ್ಟ್ ಮುಂದೆ ಹಾಜರಾಗುವಂತೆ ಸೂಚನೆ ಇದೆ. ಈ ಹಿಂದೆ ಜಾಮೀನು ಪಡೆದುಕೊಂಡಿದ್ದ ಶಾಸಕರಿಗೆ ಕೋರ್ಟ್ ಧಾರವಾಡ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿತ್ತು. ಈ ನಡುವೆ ಬಂದ ಕರ್ನಾಟಕ ವಿಧಾನಸಭಾ ಚುನವಣೆಯಲ್ಲಿ ಕ್ಷೇತ್ರದಿಂದ ಹೊರಗಿದ್ದುಕೊಂಡು ಚುನಾಯಿಸಿ ಗೆದ್ದು ಬಂದರು. ಇನ್ನೇನು ಕೊಂಚ ನೆಮ್ಮದಿ ಸಿಕ್ಕಿತು ಎನ್ನುಷ್ಟರಲ್ಲಿ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ವಿಚಾರಣೆ ಮುಂದುವರಿಯಲಿದೆ.
-
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ












Click it and Unblock the Notifications