ಕರ್ನಾಟಕ ಚುನಾವಣೋತ್ತರ ಫಲಿತಾಂಶ ತಿರಸ್ಕರಿಸಿದ ಕಾಂಗ್ರೆಸ್-ಬಿಜೆಪಿ
ಬೆಂಗಳೂರು, ಮೇ 12: ಕರ್ನಾಟಕದಲ್ಲಿ ಮೇ 10ರಂದು ಮತದಾನ ನಡೆದಿದ್ದು, ನಾಳೆ ಶನಿವಾರ ಮೇ 13ರಂದು ಮತ ಎಣಿಕೆ ನಡೆಯಲಿದೆ. ಈ ಮಧ್ಯೆ ಬುಧವಾರವೇ ಸಂಜೆ ಹೊರಬಿದ್ದ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶವನ್ನು ರಾಜಕೀಯ ಪಕ್ಷಗಳು ತಳ್ಳಿ ಹಾಕಿವೆ.
ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಆಡಳಿತಾರೂಢ ಬಿಜೆಪಿಯು ಮತದಾನೋತ್ತರ ಸಮೀಕ್ಷೆಯನ್ನು ಒಪ್ಪಿಕೊಂಡಿಲ್ಲ, ನಿರಾಕರಿಸಿವೆ. ನಾಳೆ ಮೇ 13 ರವರೆಗೆ ಕಾಯೋಣ ಎಂದಿವೆ. ಅಲ್ಲದೇ ಯಾರೊಂದಿಗೂ ಮೈತ್ರಿ ಇಲ್ಲದೇ ಪೂರ್ಣ ಬಹುಮತದಿಂದ ನಾವೇ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ಉಭಯ ಪಕ್ಷದ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚುನಾವಣೋತ್ತರ ಸಮೀಕ್ಷೆ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಿಜೆಪಿಗೆ ಪ್ರಚಂಡ ಬಹುಮತದ ಮೂಲಕ ಬೃಹತ್ ಪಕ್ಷವಾಗಿ ಹೊರ ಹೊಮ್ಮಲಿದೆ. ಚುನಾವಣೆ ನಂತರದ ಸಮೀಕ್ಷೆಗಳು ಕೆಲವೊಮ್ಮೆ ನಿಖರವಾಗಿರುವುದಿಲ್ಲ. ಕಳೆದ ಬಾರಿ 2018ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ 107 ಮತ್ತು ಬಿಜೆಪಿಗೆ 78 ಸ್ಥಾನ ಲಭಿಸಲಿವೆ ಎಂದು ಹೇಳಲಾಗಿತ್ತು. ಆದರೆ ಆಯೋಗದ ಫಲಿತಾಂಶದಲ್ಲಿ ಬಿಜೆಪಿ 104 ಮತ್ತು ಕಾಂಗ್ರೆಸ್ 78 ಗಳಿಸಿತು. ಈ ಮೂಲಕ ಮತದಾನೋತ್ತರ ಸಮೀಕ್ಷೆ ನಿಖರವಲ್ಲ ಎಂಬುದು ಗೊತ್ತಾಯಿತು.
ಬಿಜೆಪಿ-ಕಾಂಗ್ರೆಸ್ ನಾಯಕರಲ್ಲಿ ಬಹುಮತದ ವಿಶ್ವಾಸ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಈ ಕುರಿತು ಪ್ರತಿಕ್ರಿಸಿದ್ದು, ಈ ಬಾರಿ ಬಿಜೆಪಿಗೆ ಸ್ಪಷ್ಟ 120ರಿಂದ 125ರವರೆಗೆ ಸೀಟುಗಳು ಬರಲಿವೆ. ಹೀಗಾಗಿ ಆಪರೇಷನ್ ಕಮಲದ ಅಗತ್ಯವಿಲ್ಲ. ಬಿಜೆಪಿ ಮೈತ್ರಿ ಇಲ್ಲದೆಯೇ ಬೃಹತ್ ಪಕ್ಷವಾಗಿ ಅಧಿಕಾರ ಹಿಡಿಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರು, ಕಳೆದ ಬಾರಿ 2018ರಲ್ಲಿ ಕೇವಲ 14 ಕ್ಷೇತ್ರಗಳಲ್ಲಿ ಶೂನ್ಯ ಮುನ್ನಡೆ ಇದ್ದ ಬಿಜೆಪಿ 24000 ಬೂತ್ಗಳಲ್ಲಿ ಮುನ್ನಡೆ ಸಾಧಿಸಿತು. ಈ ಬಾರಿ 31ಸಾವಿರ ಬೂತ್ಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳಲಿದೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ ಪಕ್ಷ ಈ ಬಾರಿ ಒಟ್ಟು 141 ಕ್ಷೇತ್ರಗಳನ್ನು ಪಡೆಯುವ ಮೂಲಕ ಸರ್ಕಾರ ರಚನೆ ಮಾಡಲಿದೆ ಎಂದು ವಿಶ್ವಸ ವ್ಯಕ್ತಪಡಿಸಿದ್ದಾರೆ. ಅದೇ ಕಾಂಗ್ರೆಸ್ ಪಕ್ಷದ ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರು ಪಕ್ಷಕ್ಕೆ 120 ಸೀಟು ಸಿಗುವುದಾಗಿ ಭವಿಷ್ಯ ನುಡಿದಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ನಾಯಕರು ಈ ಮತದಾನೋತ್ತರ ಸಮೀಕ್ಷೆ ಕುರಿತು ಸುದ್ದಿಗಾರರ ಜೊತೆಗೆ ಮಾತನಾಡಿದ್ದಾರೆ. ಜೆಡಿಎಸ್ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಈ ಕುರಿತು ಪ್ರತಿಕ್ರಿಯೆ ನೀಡಿಲ್ಲ ಎನ್ನಲಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications