Get Updates
Get notified of breaking news, exclusive insights, and must-see stories!

ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಬಿಜೆಪಿ

ಮಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಕುಟುಂಬಕ್ಕೆ ಬಿಜೆಪಿ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಮೃತ ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಸುಹಾಸ್‌ ಅವರ ಅಂತಿಮ ದರ್ಶನ ಪಡೆದ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಶ್ಮೀರದಲ್ಲಿ ಪಹಲ್ಗಾಮ್ ಹತ್ಯೆ ಮಾಸುವ ಮುನ್ನವೇ ಮಂಗಳೂರಿನಲ್ಲಿ ಈ ಘಟನೆ ನಡೆದಿರುವುದು ಖಂಡನಾರ್ಹ ಎಂದು ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಇಲಾಖೆ ವೈಫಲ್ಯ ಎನ್ನುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆಯೇ ಇಲ್ಲ. ಜೀವಕ್ಕೆ ರಕ್ಷಣೆ ನೀಡದಿರುವುದು ಪೊಲೀಸರ ವೈಫಲ್ಯ ಎಂದು ದೂರಿದ್ದಾರೆ. ಮೃತರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ ಅವರ ಕುಟುಂಬಕ್ಕೆ ಧೈರ್ಯ ಹೇಳಲು ಪ್ರಯತ್ನಿಸಿದ್ದೇನೆ. ಬಿಜೆಪಿಯವರು ಅವರ ಕುಟುಂಬದ ಜೊತೆಗಿದ್ದೇವೆ. ಏನೇ ಆದರೂ ಕುಟುಂಬದ ಆಧಾರ ಸ್ತಂಬವೇ ಕಳಚಿ ಬಿದ್ದಂತಾಗಿದೆ ಎಂದು ವಿಜಯೇಂದ್ರ ಕಂಬನಿ ಮಿಡಿದಿದ್ದಾರೆ.

BJP Announces 25 Lakh Rupees Compensation To Family Of Hindu Activist Suhas Shetty

ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ಪೂರ್ವನಿಯೋಜಿತ ಕೃತ್ಯ ಎನ್ನುವುದು ಸ್ಪಷ್ಟವಾಗಿದೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ್ರೋಹಿಗಳ, ಕೊಲೆಗಡುಕರ ಆತ್ಮವಿಶ್ವಾಸ ಹೆಚ್ಚಿದೆ. ಕರ್ನಾಟಕ ರಾಜ್ಯದಲ್ಲಿ ಗುಪ್ತಚರ ಇಲಾಖೆ ಸತ್ತು ಹೋಗಿದೆಯೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

Take a Poll

ಬೀದಿಗಳಲ್ಲಿ ಮತ್ತು ಸಾರ್ವಜನಿಕರ ಸಮ್ಮುಖದಲ್ಲಿ ನಡೆದ ಸುಹಾಸ್ ಶೆಟ್ಟಿಯವರ ಕ್ರೂರ ಹತ್ಯೆಯು, ವಝಾರ್-ಎ-ಅಲಾ ಸರ್ಕಾರದ ಅಡಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಆತಂಕಕಾರಿ ಕುಸಿತದ ಒಂದು ಭಯಾನಕ ಪ್ರತಿಬಿಂಬವಾಗಿದೆ. ಅವರು ಸ್ವಲ್ಪವೂ ಭಯವಿಲ್ಲದೆ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ಎತ್ತಿ ತೋರಿಸುತ್ತದೆ ಎಂದಿದ್ದಾರೆ.

ಸುಹಾಸ್ ಶೆಟ್ಟಿಯವರ ಜೀವಕ್ಕೆ ಬೆದರಿಕೆ ಇದೆ ಎಂದು ಅಧಿಕಾರಿಗಳಿಗೆ ತಿಳಿದಿತ್ತು. ಆದರೆ ಯಾವುದೇ ತಡೆಗಟ್ಟುವ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಪೊಲೀಸ್ ಆಯುಕ್ತರು ಒಪ್ಪಿಕೊಂಡಿರುವುದು ಇನ್ನೂ ಹೆಚ್ಚು ಕಳವಳಕಾರಿಯಾಗಿದೆ. ಪೊಲೀಸ್ ಇಲಾಖೆ ಮತ್ತು ಸರ್ಕಾರದೊಳಗಿನ ಕೆಲವು ಅಂಶಗಳ ಸಂಭಾವ್ಯ ಜಟಿಲತೆಯ ಬಗ್ಗೆ ಇದು ಗಂಭೀರ ಕಳವಳವನ್ನು ಹುಟ್ಟುಹಾಕುತ್ತದೆ. ಈ ಉಗ್ರಗಾಮಿ ಶಕ್ತಿಗಳನ್ನು ಉದ್ದೇಶಪೂರ್ವಕವಾಗಿ ಸಕ್ರಿಯಗೊಳಿಸಲಾಗುತ್ತಿದೆ ಮತ್ತು ರಕ್ಷಿಸಲಾಗುತ್ತಿದೆಯೇ? ಎಂದು ಕೇಳಿದ್ದಾರೆ.

ಹಿಂದೂ ಕಾರ್ಯಕರ್ತರನ್ನು ನಿರಂತರವಾಗಿ ಗುರಿಯಾಗಿಸಿಕೊಳ್ಳುತ್ತಿರುವುದು ಕಾಂಗ್ರೆಸ್‌ ಸರ್ಕಾರವು ಸುರಕ್ಷಿತ ತಾಣಗಳು, ರಾಜ್ಯದೊಳಗೆ 'ಮಿನಿ ಪಾಕಿಸ್ತಾನ' ಹೊರಹೊಮ್ಮಲು ಮೌನವಾಗಿ ಅವಕಾಶ ನೀಡುತ್ತಿದೆಯೇ ಎಂದು ಪ್ರಶ್ನಿಸುವಂತೆ ಮಾಡುತ್ತದೆ. ಕರ್ನಾಟಕದಲ್ಲಿ ಹೆಚ್ಚುತ್ತಿರುವ ಉಗ್ರವಾದ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಕುಸಿತವನ್ನು ತಕ್ಷಣ ಮತ್ತು ನಿರ್ಣಾಯಕವಾಗಿ ಗಮನಿಸಬೇಕೆಂದು ನಾನು ಗೌರವಾನ್ವಿತ ರಾಜ್ಯಪಾಲರನ್ನು ಒತ್ತಾಯಿಸುತ್ತೇನೆ. ಸುಹಾಸ್ ಶೆಟ್ಟಿ ಅವರ ನಿಧನಕ್ಕೆ ನನ್ನ ಸಂತಾಪಗಳು. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ಸರಿಪಡಿಸಲಾಗದ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿ ಮತ್ತು ಬೆಂಬಲವನ್ನು ಅವರು ಪಡೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+