ರಾಜ್ಯಸಭೆಗೆ ಕರ್ನಾಟಕದಿಂದ ವೆಂಕಯ್ಯ ಬದಲಿಗೆ ನಿರ್ಮಲಾ
ಬೆಂಗಳೂರು, ಮೇ 29: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಸ್ಪರ್ಧಿಗಳ ನಾಮಾಂಕಿತರ ಪಟ್ಟಿಯಲ್ಲಿ ಭಾರಿ ಬದಲಾವಣೆಯಾಗಿದೆ. ಕರ್ನಾಟಕದಿಂದ ಈ ಬಾರಿ ಎಂ ವೆಂಕಯ್ಯ ನಾಯ್ಡು ಸ್ಪರ್ಧಿಸುತ್ತಿಲ್ಲ. ಅವರ ಬದಲಿಗೆ ನಿರ್ಮಲಾ ಸೀತಾರಾಮನ್ ಅವರಿಗೆ ಅವಕಾಶ ನೀಡಲಾಗಿದೆ. ವೆಂಕಯ್ಯ ಅವರ ವಿರುದ್ಧ ಐಟಿ ಕನ್ನಡಿಗರು ಸಂಘಟನೆಗಳು ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
ವೆಂಕಯ್ಯ ನಾಯ್ಡು ಅವರು ಕರ್ನಾಟಕದ ಬದಲಿಗೆ ರಾಜಸ್ಥಾನದಿಂದ ಸ್ಪರ್ಧಿಸಲಿದ್ದಾರೆ. ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಕ್ವಿ ಅವರನ್ನು ಜಾರ್ಖಂಡ್ ನಿಂದ ಸ್ಪರ್ಧಿಸಲು ಸೂಚಿಸಲಾಗಿದೆ. ಮಿಕ್ಕಂತೆ ಕಳೆದ ವಾರ ಬಿಡುಗಡೆಯಾದ ಪಟ್ಟಿಯಂತೆಯೇ ಹೊಸ ಪಟ್ಟಿ ಇದೆ.[ಕಾಂಗ್ರೆಸ್ ಪಟ್ಟಿಯಲ್ಲಿ ಬದಲಾವಣೆ, ರಾಮಮೂರ್ತಿಗಿಲ್ಲ ಟಿಕೆಟ್]

ಈ ನಡುವೆ ಎಂಎಲ್ಸಿ ಸ್ಥಾನಕ್ಕಾಗಿ ಮಾಜಿ ಸಚಿವ ವಿ. ಸೋಮಣ್ಣ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿದೆ.
ಎಂಎಲ್ಸಿ ಸ್ಥಾನಕ್ಕಾಗಿ ಕಟ್ಟಾ ಸುಬಮಣ್ಯ ನಾಯ್ಡು, ನಗರ ಬಿಜೆಪಿ ಅಧ್ಯಕ್ಷ ಸುಬ್ಬುನರಸಿಂಹ, ಮಾಜಿ ಸಚಿವ ವಿ ಸೋಮಣ್ಣ ಹೆಸರು ಚಾಲ್ತಿಯಲ್ಲಿದೆ. ಈ ಪೈಕಿ ವಿ ಸೋಮಣ್ಣ ಆಯ್ಕೆಗೆ ಯಡಿಯೂರಪ್ಪ ಅವರು ವಿರೋಧ ವ್ಯಕ್ತಪಡಿಸಿದ್ದು, ಜಗದೀಶ್ ಶೆಟ್ಟರ್ ಅವರು ಸೋಮಣ್ಣ ಪರ ನಿಂತಿದ್ದರು.[ರಾಜ್ಯಸಭೆ ಚುನಾವಣಾ ವೇಳಾಪಟ್ಟಿ 2016]

ಕೇಂದ್ರ ನಗರಾಭಿವೃದ್ಧಿ ಸಚಿವ ಬಿಜೆಪಿಯ ಎಂ.ವೆಂಕಯ್ಯನಾಯ್ಡು, ಆಯನೂರು ಮಂಜುನಾಥ್, ಕಾಂಗ್ರೆಸ್ನ ಆಸ್ಕರ್ ಫರ್ನಾಂಡೀಸ್ ಹಾಗೂ ಉದ್ಯಮಿ ವಿಜಯಮಲ್ಯ ಅವರ ಅವಧಿ ಜೂನ್ 30ಕ್ಕೆ ಮುಗಿಯಲಿದೆ.
ವೆಂಕಯ್ಯ ಸಾಕಯ್ಯ ಎಂಬ ಟ್ಯಾಗ್ ನೊಂದಿಗೆ ಇತ್ತೀಚೆಗೆ ಐಟಿ ಬಿಟಿ ಕನ್ನಡಿಗರು ಅಭಿಯಾನ ನಡೆಸಿ, ಕರ್ನಾಟಕದ ಮೂಲದವರನ್ನೇ ಶಿಫಾರಸು ಮಾಡುವಂತೆ ಆಗ್ರಹಿಸಿದ್ದರು.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ












Click it and Unblock the Notifications