ರಾಜ್ಯಪಾಲರಿಗೆ ಬಿಜೆಪಿ ದೂರು : ಆರ್.ಬಿ.ತಿಮ್ಮಾಪುರ ಹೇಳುವುದೇನು?
ಬೆಂಗಳೂರು, ಸೆಪ್ಟೆಂಬರ್ 01 : 'ಒಬ್ಬ ದಲಿತ ವ್ಯಕ್ತಿ ಸಚಿವನಾಗುವುದನ್ನು ಸಹಿಸದ ಮನುವಾದಿಗಳು ರಾಜ್ಯಪಾಲರಿಗೆ ದೂರು ನೀಡುತ್ತಿದ್ದಾರೆ' ಎಂದು ನಿಯೋಜಿತ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು. ತಿಮ್ಮಾಪುರ ವಿರುದ್ಧ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದ್ದು, ರಾಜ್ಯಪಾಲರು ಸಚಿವ ಟಿ.ಬಿ.ಜಯಚಂದ್ರ ಬಳಿ ವಿವರಣೆ ಕೇಳಿದ್ದಾರೆ.
ಶುಕ್ರವಾರ ಸಂಜೆ ವಿಧಾನ ಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಬೆಳಗ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ್ದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ಯಾವ ಖಾತೆಯ ನಿರೀಕ್ಷೆಯೂ ಇಲ್ಲ. ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ. ಕಡಿಮೆ ಅವಧಿ ಇದ್ದರೂ ಸಮರ್ಥವಾಗಿ ಕೆಲಸ ಮಾಡುತ್ತೇನೆ' ಎಂದರು.
'ಮನುವಾದಿಗಳು ಒಬ್ಬ ದಲಿತ ಸಚಿವ ಆಗುವುದನ್ನು ಸಹಿಸುತ್ತಿಲ್ಲ. ಆದ್ದರಿಂದ ರಾಜ್ಯಪಾಲರಿಗೆ ದೂರು ಕೊಡುವ ನಾಟಕವಾಡುತ್ತಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ. ಇದಕ್ಕೆಲ್ಲ ಹೆದರುವುದಿಲ್ಲ' ಎಂದು ಹೇಳಿದರು.
ಆರ್.ಬಿ.ತಿಮ್ಮಾಪುರ ಅವರು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ವರದಿ ನೀಡಿದ್ದರು. ಅವರು ಈಗ ಬೆಂಗಳೂರಿನ ಮತದಾರರು. ಆದರೆ, ಬಾಗಲಕೋಟೆಯ ವಿಳಾಸ ನೀಡಿ ವಿಧಾನಪರಿಷತ್ ಭತ್ಯೆ ಪಡೆಯುತ್ತಿದ್ದಾರೆ ಎಂದು ಆಯೋಗಕ್ಕೆ ನೀಡಿದ್ದ ವರದಿಯಲ್ಲಿ ತಿಳಿಸಿದ್ದರು.
ವಿಧಾನಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ ಅವರು ತಪ್ಪು ಮಾಡಿರುವುದು ವರದಿಯಲ್ಲಿ ಸಾಬೀತಾಗಿದೆ. ಆದ್ದರಿಂದ, ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬಾರದು ಎಂದು ಬಿಜೆಪಿ ದೂರು ನೀಡಿದೆ.
ವಿವರಣೆ ಕೇಳಿದ ರಾಜ್ಯಪಾಲರು ? : ರಾಜ್ಯಪಾಲ ವಜುಭಾಯಿ ವಾಲಾ ಈ ದೂರಿನ ಬಗ್ಗೆ ಕಾನೂನು ಸಚಿವ ಟಿ.ಬಿ.ಜಯಚಂದ್ರ ಬಳಿ ವಿವರಣೆ ಕೇಳಿದ್ದಾರೆ. ರಾಜಭವನಕ್ಕೆ ತುರ್ತು ಭೇಟಿ ನೀಡಿದ ಜಯಚಂದ್ರ ಅವರು ವಿವರಣೆ ನೀಡಿದ್ದಾರೆ. ಇಂದು ಸಂಜೆ 5 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಿಗದಿಯಾಗಿದೆ.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications