BJP District Presidents: ರಾಜ್ಯದಲ್ಲಿ 23 ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ
BJP District Presidents Appointed: ಬಿಜೆಪಿಯು ಕರ್ನಾಟಕ ರಾಜ್ಯದ 23 ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ. ಹಾಗಾದರೆ ಯಾವ್ಯಾವ ಜಿಲ್ಲೆಗಳಿಗೆ ಯರು? ಹಾಗೂ ಇನ್ನೂ ಯಾವೆಲ್ಲ ಭಾಗಗಳಿಗೆ ನೇಮಕ ಮಾಡಲಾಗಿಲ್ಲ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಈ ಪೈಕಿ ಕೆಲ ಜಿಲ್ಲೆಗಳಿಗೆ ಹೊಸ ಮುಖಗಳಿಗೆ ಮಣೆ ಹಾಕಿದ್ದರೆ, ಇನ್ನು ಕೆಲ ಜಿಲ್ಲೆಗಳಿಗೆ ಹಳಬರನ್ನೇ ಮುಂದುವರೆಸಲಾಗಿದೆ. ಇನ್ನೂ ಕೆಲವು ಭಾಗಗಳಿಗೆ ಅಧ್ಯಕ್ಷರ ಆಯ್ಕೆ ಮಾಡಲಾಗಿಲ್ಲ. ಈ ನೂತನ ಜಿಲ್ಲಾಧ್ಯಕ್ಷರುಗಳು ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಧೃಢಗೊಳಿಸುತ್ತಾ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಶ್ರಮಿಸಬೇಕೆಂದು ಬಿಜೆಪಿ ತಿಳಿಸಿದೆ. ಇನ್ನು ಬಿ.ವೈವಿಜಯೇಂದ್ರ ಅವರು ತಮ್ಮ ಆಪ್ತರಿಗೇ ಮಣೆ ಹಾಕಿದ್ದಾರೆ ಎನ್ನುವ ಆರೋಪ ಪಕ್ಷದಲ್ಲೇ ಕೇಳಿಬಂದಿದೆ.

ಯಾರು ಯಾವ ಜಿಲ್ಲೆಗೆ ಆಯ್ಕೆ?
* ಮೈಸೂರು ನಗರ - ಎಲ್.ನಾಗೇಂದ್ರ
* ಚಾಮರಾಜನಗರ - ಸಿ.ಎಸ್.ನಿರಂಜನ್ಕುಮಾರ್
* ದಕ್ಷಿಣ ಕನ್ನಡ - ಸತೀಶ್ ಕುಂಪಲಿ
* ಚಿಕ್ಕಮಗಳೂರು - ದೇವರಾಜ ಶೆಟ್ಟಿ
* ಶಿವಮೊಗ್ಗ - ಎನ್.ಕೆ.ಜಗದೀಶ್
* ಉತ್ತರ ಕನ್ನಡ - ನಾರಾಯಣ ಶ್ರೀನಿವಾಸ ಹೆಗಡೆ
* ಹುಬ್ಬಳ್ಳಿ - ಧಾರವಾಡ - ತಿಪ್ಪಣ್ಣ ಮಜ್ಜಗಿ
* ಧಾರವಾಡ ಗ್ರಾಮಾಂತರ - ನಿಂಗಪ್ಪ ಡಿ.ಸುತಗಟ್ಟಿ
* ಬೆಳಗಾವಿ ನಗರ - ಗೀತಾ ಸುತಾರ್
* ಬೆಳಗಾವಿ ಗ್ರಾಮಾಂತರ - ಸುಭಾಷ್ ದುಂಡಪ್ಪ ಪಾಟೀಲ್
* ಚಿಕ್ಕೋಡಿ-ಸತೀಶ್ ಅಪ್ಪಾಜಿಗೋಲ್
* ಬೀದರ್ - ಸೋಮನಾಥ್ ಪಾಟೀಲ್
* ಕಲಬುರಗಿ ನಗರ - ಚಂದ್ರಕಾಂತ ಬಿ.ಪಾಟೀಲ್
* ಕಲಬುರಗಿ ಗ್ರಾಮಾಂತರ - ಅಶೋಕ ಶಾಂತಪ್ಪ ಬಗಲಿ
* ಯಾದಗಿರಿ - ಬಸವರಾಜ ವಿಭೂತಿಹಳ್ಳಿ
* ಕೊಪ್ಪಳ - ಧಡೇಸುಗೂರು ಬಸವರಾಜ್
* ಬಳ್ಳಾರಿ - ಅನಿಲ್ ಕುಮಾರ್ ಮೋಕಾ
* ವಿಜಯನಗರ - ಸಂಜೀವರೆಡ್ಡಿ ಎಸ್
* ಚಿಕ್ಕಬಳ್ಳಾಪುರ - ಬಿ.ಸಂದೀಪ್
* ಕೋಲಾರ - ಓಂ ಶಂಕ್ತಿ ಛಲಪತಿ
* ಬೆಂಗಳೂರು ಗ್ರಾಮಾಂತರ - ಎಸ್.ಹರೀಶ್
* ಬೆಂಗಳೂರು ಕೇಂದ್ರ - ಎ.ಆರ್.ಸಪ್ತಗಿರಿ ಗೌಡ
* ಬೆಂಗಳೂರು ದಕ್ಷಿಣ - ಸಿ.ಕೆ.ರಾಮಮೂರ್ತಿ
ಯಾವ ಜಿಲ್ಲೆಗೆ ಹೊಸಬರ ಆಯ್ಕೆ?: ಶಿವಮೊಗ್ಗ, ಕಲಬುರಗಿ ಗ್ರಾಮಾಂತರ, ಯಾದಗಿರಿ, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ, ಹುಬ್ಬಳ್ಳಿ- ಧಾರವಾಡ, ಧಾರವಾಡ ಗ್ರಾಮಾಂತರ, ಬೆಳಗಾವಿ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ, ಬೀದರ್, ಕಲಬುರಗಿ, ಬಳ್ಳಾರಿ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಜಿಲ್ಲೆಗೆ ಮರು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಯಾವೆಲ್ಲಾ ಜಿಲ್ಲೆಗಳಿಗೆ ಬಾಕಿ?: 23 ಜಿಲ್ಲೆಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, 16 ಜಿಲ್ಲೆಗಳ ಅಧ್ಯಕ್ಷರ ಆಯ್ಕೆ ಮಾಡಬೇಕಿದೆ. ಮೈಸೂರು ಗ್ರಾಮಾಂತರ, ಮಂಡ್ಯ, ಹಾಸನ, ಕೊಡಗು, ಉಡುಪಿ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ರಾಯಚೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಧುಗಿರಿ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಅಧ್ಯಕ್ಷರನ್ನು ನೇಮಕ ಮಾಡಬೇಕಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications