BJP District Presidents: ರಾಜ್ಯದಲ್ಲಿ 23 ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ
BJP District Presidents Appointed: ಬಿಜೆಪಿಯು ಕರ್ನಾಟಕ ರಾಜ್ಯದ 23 ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ. ಹಾಗಾದರೆ ಯಾವ್ಯಾವ ಜಿಲ್ಲೆಗಳಿಗೆ ಯರು? ಹಾಗೂ ಇನ್ನೂ ಯಾವೆಲ್ಲ ಭಾಗಗಳಿಗೆ ನೇಮಕ ಮಾಡಲಾಗಿಲ್ಲ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಈ ಪೈಕಿ ಕೆಲ ಜಿಲ್ಲೆಗಳಿಗೆ ಹೊಸ ಮುಖಗಳಿಗೆ ಮಣೆ ಹಾಕಿದ್ದರೆ, ಇನ್ನು ಕೆಲ ಜಿಲ್ಲೆಗಳಿಗೆ ಹಳಬರನ್ನೇ ಮುಂದುವರೆಸಲಾಗಿದೆ. ಇನ್ನೂ ಕೆಲವು ಭಾಗಗಳಿಗೆ ಅಧ್ಯಕ್ಷರ ಆಯ್ಕೆ ಮಾಡಲಾಗಿಲ್ಲ. ಈ ನೂತನ ಜಿಲ್ಲಾಧ್ಯಕ್ಷರುಗಳು ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಧೃಢಗೊಳಿಸುತ್ತಾ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಶ್ರಮಿಸಬೇಕೆಂದು ಬಿಜೆಪಿ ತಿಳಿಸಿದೆ. ಇನ್ನು ಬಿ.ವೈವಿಜಯೇಂದ್ರ ಅವರು ತಮ್ಮ ಆಪ್ತರಿಗೇ ಮಣೆ ಹಾಕಿದ್ದಾರೆ ಎನ್ನುವ ಆರೋಪ ಪಕ್ಷದಲ್ಲೇ ಕೇಳಿಬಂದಿದೆ.

ಯಾರು ಯಾವ ಜಿಲ್ಲೆಗೆ ಆಯ್ಕೆ?
* ಮೈಸೂರು ನಗರ - ಎಲ್.ನಾಗೇಂದ್ರ
* ಚಾಮರಾಜನಗರ - ಸಿ.ಎಸ್.ನಿರಂಜನ್ಕುಮಾರ್
* ದಕ್ಷಿಣ ಕನ್ನಡ - ಸತೀಶ್ ಕುಂಪಲಿ
* ಚಿಕ್ಕಮಗಳೂರು - ದೇವರಾಜ ಶೆಟ್ಟಿ
* ಶಿವಮೊಗ್ಗ - ಎನ್.ಕೆ.ಜಗದೀಶ್
* ಉತ್ತರ ಕನ್ನಡ - ನಾರಾಯಣ ಶ್ರೀನಿವಾಸ ಹೆಗಡೆ
* ಹುಬ್ಬಳ್ಳಿ - ಧಾರವಾಡ - ತಿಪ್ಪಣ್ಣ ಮಜ್ಜಗಿ
* ಧಾರವಾಡ ಗ್ರಾಮಾಂತರ - ನಿಂಗಪ್ಪ ಡಿ.ಸುತಗಟ್ಟಿ
* ಬೆಳಗಾವಿ ನಗರ - ಗೀತಾ ಸುತಾರ್
* ಬೆಳಗಾವಿ ಗ್ರಾಮಾಂತರ - ಸುಭಾಷ್ ದುಂಡಪ್ಪ ಪಾಟೀಲ್
* ಚಿಕ್ಕೋಡಿ-ಸತೀಶ್ ಅಪ್ಪಾಜಿಗೋಲ್
* ಬೀದರ್ - ಸೋಮನಾಥ್ ಪಾಟೀಲ್
* ಕಲಬುರಗಿ ನಗರ - ಚಂದ್ರಕಾಂತ ಬಿ.ಪಾಟೀಲ್
* ಕಲಬುರಗಿ ಗ್ರಾಮಾಂತರ - ಅಶೋಕ ಶಾಂತಪ್ಪ ಬಗಲಿ
* ಯಾದಗಿರಿ - ಬಸವರಾಜ ವಿಭೂತಿಹಳ್ಳಿ
* ಕೊಪ್ಪಳ - ಧಡೇಸುಗೂರು ಬಸವರಾಜ್
* ಬಳ್ಳಾರಿ - ಅನಿಲ್ ಕುಮಾರ್ ಮೋಕಾ
* ವಿಜಯನಗರ - ಸಂಜೀವರೆಡ್ಡಿ ಎಸ್
* ಚಿಕ್ಕಬಳ್ಳಾಪುರ - ಬಿ.ಸಂದೀಪ್
* ಕೋಲಾರ - ಓಂ ಶಂಕ್ತಿ ಛಲಪತಿ
* ಬೆಂಗಳೂರು ಗ್ರಾಮಾಂತರ - ಎಸ್.ಹರೀಶ್
* ಬೆಂಗಳೂರು ಕೇಂದ್ರ - ಎ.ಆರ್.ಸಪ್ತಗಿರಿ ಗೌಡ
* ಬೆಂಗಳೂರು ದಕ್ಷಿಣ - ಸಿ.ಕೆ.ರಾಮಮೂರ್ತಿ
ಯಾವ ಜಿಲ್ಲೆಗೆ ಹೊಸಬರ ಆಯ್ಕೆ?: ಶಿವಮೊಗ್ಗ, ಕಲಬುರಗಿ ಗ್ರಾಮಾಂತರ, ಯಾದಗಿರಿ, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ, ಹುಬ್ಬಳ್ಳಿ- ಧಾರವಾಡ, ಧಾರವಾಡ ಗ್ರಾಮಾಂತರ, ಬೆಳಗಾವಿ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ, ಬೀದರ್, ಕಲಬುರಗಿ, ಬಳ್ಳಾರಿ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಜಿಲ್ಲೆಗೆ ಮರು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಯಾವೆಲ್ಲಾ ಜಿಲ್ಲೆಗಳಿಗೆ ಬಾಕಿ?: 23 ಜಿಲ್ಲೆಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, 16 ಜಿಲ್ಲೆಗಳ ಅಧ್ಯಕ್ಷರ ಆಯ್ಕೆ ಮಾಡಬೇಕಿದೆ. ಮೈಸೂರು ಗ್ರಾಮಾಂತರ, ಮಂಡ್ಯ, ಹಾಸನ, ಕೊಡಗು, ಉಡುಪಿ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ರಾಯಚೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಧುಗಿರಿ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಅಧ್ಯಕ್ಷರನ್ನು ನೇಮಕ ಮಾಡಬೇಕಿದೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ











Click it and Unblock the Notifications